Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಸರಳ ವಡ್ಡಾರಧನೆ ಎಂಬೊಂದು ಕೈದೀವಿಗೆ

ವಡ್ಡಾರಾಧನೆಯಲ್ಲಿ ಬರುವ ಜನಜೀವನ, ಜಾತಿವ್ಯವಸ್ಥೆ, ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ, ಗ್ರಾಮ ಮತ್ತು ಪಟ್ಟಣದ ವರ್ಣನೆ, ತಿಂಡಿತಿನಿಸುಗಳು, ಬಹು ಮಹಡಿ ಕಟ್ಟಡದ ಬೀದಿಗಳು, ವೇಶ್ಯೆಯರ ಬೀದಿಯವರ್ಣನೆ, ಅಂಗಡಿ ಮುಂಗಟ್ಟುಗಳು ಇವೆಲ್ಲಾ ಆ ಕಾಲದ ಒಂದು ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತವೆ. ಇವುಗಳನ್ನೆಲ್ಲಾ ಅನುವಾದಿಸಿರುವಲ್ಲಿ ಮೂಲದ ಶಬ್ಧದ ಮಿತಿಯನ್ನು ದಾಟದಿರುವದನ್ನು ಕಾಣಬಹುದಾಗಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಇಲ್ಲಿ ಭಾಷೆಯನ್ನು ದುಡಿಸಿಕೊಳ್ಳುವ ರೀತಿ ಮನೋಜ್ಞವಾಗಿದೆ ಎನ್ನುತ್ತ ಸರಳ ವಡ್ಡಾರಧನೆ ಕುರಿತ ಅನಿಸಿಕೆಯನ್ನು ನಾರಾಯಣ ಯಾಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ