Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ