Advertisement

ಉಮಾರಾವ್

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

Read More

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ ಪ್ರಭಾವವನ್ನು ಬೀರಿತ್ತು ಎನ್ನುವುದಕ್ಕೆ ಆಕೆ ತಾನು ವೇಶ್ಯೆಯಾಗಿ ಇರುವಾಗಲೂ ಸಂದರ್ಭ ಬಂದಾಗ ಸ್ವಾತಂತ್ರ್ಯ ಹೋರಾಟ, ಸಮಾಜ ಸೇವೆ, ದೀನದಲಿತರಿಗೆ ನೆರವು ಹೀಗೆ ಹಲವಾರು ಸಂಗತಿಗಳನ್ನು ಮಾಡುತ್ತಲೇ ಇರುತ್ತಾಳೆ. ಆದರೆ ಸ್ವಾತಂತ್ರ್ಯ ಹೊರಾಟಗಾರರಲ್ಲಿ ಎಲ್ಲವರೂ ನಂದಣ್ಣನಂತಹ ವ್ಯಕ್ತಿಗಳಲ್ಲ. ಹೆಚ್ಚಿನವರು ರಮೇಶನಂತಹ ಗೋಮುಖರೇ.
ಬಂಗಾಳಿಯ ಮಾನದಾ ದೇವಿ ಆತ್ಮಕಥನ “ವಿದ್ಯಾವಂತ ವೇಶ್ಯೆಯ ಆತ್ಮಕಥೆ”ಯನ್ನು ನಾಗ ಎಚ್ ಹುಬ್ಳಿ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ