Advertisement

ಕೆಂಡಸಂಪಿಗೆ

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ