ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ
ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ
