Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಅಪರಾಧ ಮತ್ತು ಶಿಕ್ಷೆ: ಇದು ಯಾವ ಪಾಪಕ್ಕೆ…?

ಸಿಡಿಲು ಬಡಿದವಳ ಹಾಗೆ ಕ್ಯಾತರೀನ ಸುಮ್ಮನೆ ನಿಂತಳು. ಪೀಟರ್ ಪೆಟ್ರೊವಿಚ್ ಅದು ಹೇಗೆ ಉಪ್ಪಿನ ಋಣ ಮರೆಯಬಲ್ಲ ಅನ್ನುವುದು ಅರ್ಥವೇ ಆಗಲಿಲ್ಲ ಅವಳಿಗೆ. ನಮ್ಮಪ್ಪನ ಉಪ್ಪಿನ ಋಣ ಅವನಮೇಲಿದೆ ಎಂದು ಒಮ್ಮೆ ಕಲ್ಪನೆ ಮಾಡಿಕೊಂಡ ನಂತರ ಆ ಕಲ್ಪನೆಯನ್ನೇ ಅವಳು ನಿಷ್ಠೆಯಿಂದ ನಂಬಿಕೊಂಡಿದ್ದಳು. ಪೀಟರ್ ಪೆಟ್ರೊವಿಚ್‌ನ ಮಾತಿನ ದನಿಯೂ ಆಘಾತ ತಂದಿತ್ತು. ತೀರ ವ್ಯಾವಹಾರಿಕವಾದ, ನಿರ್ಭಾವವಾದ, ಭಯಹುಟ್ಟಿಸುವಂಥ ತಿರಸ್ಕಾರ ಅವನ ದನಿಯಲ್ಲಿತ್ತು.
. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಪರಾಧ ಮತ್ತು ಶಿಕ್ಷೆ: ಮಾಡಿದ ಪಾಪಕ್ಕೆ….

ರಾಸ್ಕೋಲ್ನಿಕೋವ್ ಗುರಿ ಇಲ್ಲದೆ ಅಲೆದ. ಸೂರ್ಯ ಮುಳುಗುತ್ತಿದ್ದ. ಎಂಥದೋ ದುಃಖ ಅವನನ್ನು ಇತ್ತೀಚೆಗೆ ಕಾಡುತ್ತಿತ್ತು ಅದೊಂದು ಥರ ದುಶ್ಶಕುನದಂಥ ದುಃಖ. ಒಂದು ಚದರಗಜ ಜಾಗದಲ್ಲಿ ನಿಂತು ಕೊನೆಯಿರದ ದುಃಖವನ್ನು ಅನಂತವಾಗಿ ಅನುಭವಿಸುತ್ತಲೇ ಇರಬೇಕಾದೀತು ಅನ್ನುವಂಥ ಕೆಟ್ಟಶಕುನ ನುಡಿಯುತ್ತಿದೆ ಅನಿಸುವಂಥ ದುಃಖ. ಸಂಜೆಯ ಹೊತ್ತಿನಲ್ಲಿ ಇಂಥ ಭಾವ ಸಾಮಾನ್ಯವಾಗಿ ಅವನ ಮನಸ್ಸನ್ನು ಕವಿದುಕೊಳ್ಳುತ್ತಿತ್ತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಪರಾಧ ಮತ್ತು ಶಿಕ್ಷೆ: ನಮ್ಮಪ್ಪ ಗ್ರೇಟಾ.. ನಿಮ್ಮಪ್ಪ ಗ್ರೇಟಾ?

ಅವಳ ಮನೆಗೆ ಬಂದಿದ್ದ ಅತಿಥಿಗಳಲ್ಲಿ ಅವನೊಬ್ಬನೇ ‘ಸುಶಿಕ್ಷಿತ’. ‘ಎಲ್ಲರಿಗೂ ಗೊತ್ತಿರುವ ಹಾಗೆ ಈ ಊರಿನ ವಿಶ್ವವಿದ್ಯಾಲಯದಲ್ಲಿ ಇನ್ನೆರಡು ವರ್ಷಗಳೊಳಗೆ ಪ್ರೊಫೆಸರ್ ಹುದ್ದೆ ಪಡೆಯುತ್ತಾನೆ.’ ಎರಡನೆಯದಾಗಿ ತನಗೆ ಎಷ್ಟೇ ಮನಸಿದ್ದರೂ ಅಂತ್ಯ ಸಂಸ್ಕಾರಕ್ಕೆ ಬರಲಾಗಲಿಲ್ಲವೆಂದು ಅವಳ ಕ್ಷಮೆ ಕೋರಿದ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಪರಾಧ ಮತ್ತು ಶಿಕ್ಷೆ: ತಪ್ಪಿಹೋದುದನ್ನು ನೆನೆಯುತ್ತಾ…

ಮನೆಗೆ ಮರಳುವ ಹೊತ್ತಿಗೆ ಈ ತೀರ್ಮಾನ ಅವನ ಕೋಪವನ್ನೂ ಕಹಿಯನ್ನೂ ಮನೆ ಬಿಡುವಾಗ ಇದ್ದುದಕ್ಕಿಂತ ಎರಡು ಪಟ್ಟು ಹೆಚ್ಚಿಸಿತು. ಕ್ಯಾತರೀನ ಇವಾನೋವ್ನಾ ಮನೆಯಲ್ಲಿ ನಡೆಯುತ್ತಿದ್ದ ಅಂತ್ಯ ಸಂಸ್ಕಾರದ ಊಟದ ಏರ್ಪಾಟು ಅವನ ಕುತೂಹಲವನ್ನು ಕೆರಳಿಸಿತು.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಪರಾಧ ಮತ್ತು ಶಿಕ್ಷೆ: ಹಿಡಿವೆಯಾ ನೀನು… ನನ್ನಾ….?

ಪೋರ್ಫಿರಿ ಪೆಟ್ರೊವಿಚ್ ಒಂದೆರಡು ಕ್ಷಣ ಯೋಚನೆಯಲ್ಲಿ ಮುಳುಗಿದ್ದ. ಆಮೇಲೆ ಮತ್ತೆ ಎಚ್ಚರಗೊಂಡು, ಕರೆಯದೆ ಬಂದಿದ್ದ ಸಾಕ್ಷಿಗಳನ್ನೆಲ್ಲ ಕೈ ಬೀಸಿ ಹೊರಕ್ಕೆ ಕಳಿಸಿದ. ತಟ್ಟನೆ ಎಲ್ಲರೂ ಹೊರನಡೆದರು. ಬಾಗಿಲು ಮುಚ್ಚಿಕೊಂಡಿತು. ಆಮೇಲೆ ಅವನು ರಾಸ್ಕೋಲ್ನಿಕೋವ್‌ನತ್ತ ನೋಡಿದ. ರಾಸ್ಕೋಲ್ನಿಕೋವ್ ಮೂಲೆಯಲ್ಲಿ ನಿಂತು ನಿಕೊಲಾಯ್‌ನನ್ನು ನೋಡುತ್ತಿದ್ದ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ