Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಹೋಳಿಗೆ ಕೊಡಿಸಿದ ಯುಗಾದಿ ಚಂದಿರ..: ಪೂರ್ಣೇಶ್‌ ಮತ್ತಾವರ ಸರಣಿ

ಹಬ್ಬದ ಹಿಂದಿನ ಸಂಜೆ “ನಾಳೆ ರಜಾ, ಕೋಳಿ ಮಜಾ..” ಎನ್ನುತ್ತಾ ರಜೆಯ ಸಡಗರವನ್ನು ಅನುಭವಿಸಿ, ಹಗಲಿಡೀ‌‌ ಆಟವಾಡಿ, ಮಧ್ಯಾಹ್ನ ಸಿಹಿ‌ ತಿಂದು ಖುಷಿಪಟ್ಟವರು ಸಂಜೆಯಾಗುತ್ತಲೇ ನಮಗೆ ತಿಳಿಯದಲೇ ಬೇಸರಿಸಿಕೊಂಡು ಬಿಡುತ್ತಿದ್ದೆವು. “ಹೋಂ ಸಿಕ್ ನೆಸ್” ಎಂಬುದು ನಮಗರಿವಿಲ್ಲದಲೇ ಹಬ್ಬದ ದಿನಗಳಲ್ಲೇ ಹೆಚ್ಚಾಗಿ ನಮ್ಮನ್ನು ಆವರಿಸಿಕೊಂಡು ಬಿಡುತ್ತಿತ್ತು. ಕೊಟ್ಟ ಹೋಂ ವರ್ಕ್ “ನಾಳೆ ಮಾಡಿದರಾಯ್ತು” ಎಂದು ಮುಂದೂಡಿ ಈಗ ಮಾಡಬೇಕಿರುವುದೂ ನಮ್ಮ ದುಃಖವನ್ನು ಮತ್ತಷ್ಟು ಹೆಚ್ಚಿಸಿ ಬಿಡುತ್ತಿತ್ತು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹನ್ನೆರಡನೆಯ ಬರಹ

Read More

ಕ್ಯಾಂಡಲ್ ಕ್ರಿಕೆಟ್: ಪೂರ್ಣೇಶ್‌ ಮತ್ತಾವರ ಸರಣಿ

ನಮ್ಮ ಅಭ್ಯಾಸ ಅದ್ಭುತವಾಗಿದ್ದರಿಂದ ಒಂದು ಬಾರಿ ಸಾಲದೆಂದು ಬೆಳ ಬೆಳಗ್ಗಿಯೇ ಮೂರು ಮೂರು ಬಾರಿ‌ ನೆಟ್ ಪ್ರಾಕ್ಟಿಸ್ ನಡೆಸಿದ್ದರಿಂದ ಗೆಲುವು ನಮ್ಮದೇ ಆಗಲಿದೆ ಎಂಬ ವಿಶ್ವಾಸ ನಮ್ಮದಾಗಿತ್ತು. ಈ ವಿಶ್ವಾಸದಿಂದಲೇ ಆಟವನ್ನೇನೋ ಆರಂಭಿಸಿದೆವು. ಆದರೆ, ಪಂದ್ಯ ಸಾಗುತ್ತಲೇ ನಮ್ಮ ಎಣಿಕೆಗಳೆಲ್ಲಾ ತಲೆಕೆಳಗಾಗಲಾರಂಭಿಸಿದ್ದವು. ಇದಕ್ಕೆ ಬಹುಮುಖ್ಯ ಕಾರಣ ನಮ್ಮ ಆಟದ ಕೊರತೆ ಎಂಬುದಕ್ಕಿಂತ ನಿದ್ರೆಯ ಕೊರತೆಯೇ ಆಗಿತ್ತು. ಬೆಳಗ್ಗೆ ನಾಲ್ಕು ಗಂಟೆಗೆ ಎದ್ದ ಪ್ರತಿಫಲವಾಗಿ ನಿದ್ದೆ ಎಲ್ಲರನ್ನೂ ಆವರಿಸಲಾರಂಭಿಸಿತ್ತು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹನ್ನೊಂದನೆಯ ಬರಹ

Read More

“ಎತ್ತಿನ ಜ್ವರಕ್ಕೆ ಎಮ್ಮೆಗೆ ಬರೆ -ನೆನಪಿನ ಬಾಳೆ”: ಪೂರ್ಣೇಶ್‌ ಮತ್ತಾವರ ಸರಣಿ

ಕಾಲು ಗಂಟೆಗೂ ಮೊದಲು ನಾನು “ಬಾಳೆ ಎಲೆಯ ಛತ್ರಿ” ನಡಿಗೆ ನಡೆಸಿದ್ದು ನಮ್ಮ ಜೂನಿಯರ್‌ಗಳಿಗೆ ನನ್ನ ನಿರೀಕ್ಷೆಯನ್ನೂ ಮೀರಿ ಅತ್ಯಾಕರ್ಷಕವಾಗಿ ಕಂಡಿದೆ. ಅದೆಷ್ಟು ಅತ್ಯಾಕರ್ಷಕವೆಂದರೆ ಅವರು ಊಟ ಮುಗಿಸಿ ತಮ್ಮ ತಮ್ಮ ಡಾರ್ಮಿಟರಿಗಳಿಗೆ ಹೋಗುವ ಬದಲು ನೇರ ಎಂ.ಪಿ.ಹಾಲ್ ನ ಹಿಂಬದಿಯಲ್ಲಿದ್ದ ಬಾಳೆ ತೋಟಕ್ಕೆ ನುಗ್ಗಿದ್ದಾರೆ. ಎಲ್ಲರೂ “ನನಗೊಂದು ಎಲೆ.. ನನಗೊಂದು ಎಲೆ..” ಎನ್ನುತ್ತಾ ಇಡೀ ಬಾಳೆ ತೋಟವನ್ನೇ ಲೂಟಿ ಮಾಡಲು ಶುರು ಮಾಡಿದ್ದಾರೆ.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹತ್ತನೆಯ ಬರಹ

Read More

ಜೈಲು ಕಟ್ಟಿಸಿ ಬಂಧಿಗಳಾಗಿದ್ದು!: ಪೂರ್ಣೇಶ್‌ ಮತ್ತಾವರ ಸರಣಿ

ಅತ್ತ ನೋಡಿದರೆ ಅದೆಲ್ಲಿ ನಮ್ಮ ಹೆಸರುಗಳು, ಮಾರ್ಕ್ಸ್‌ಗಳು ತಾರೆ ಜಮೀನ್ ಪರ್ ಸಿನಿಮಾದಲ್ಲಿ ಶಿಕ್ಷಕಿ ಸರ್ಪ್ರೈಸ್ ಮ್ಯಾತ್ಸ್ ಟೆಸ್ಟ್ ಕೊಟ್ಟಾಗ, ಶಿಕ್ಷಕರು ನೌನ್, ಪ್ರನೌನ್ ಎಂದಾಗ ಅಂಕಿ ಸಂಖ್ಯೆಗಳು, ಅಕ್ಷರಗಳೆಲ್ಲಾ ಹುಡುಗನೆದುರು ಜೀವ ತಳೆದು ಕುಣಿದಾಡುತ್ತವಲ್ಲ.. ಹಾಗೆಯೇ ನಮ್ಮ ಮುಂದೆ ಜೀವ ತಳೆದು “ಕಾಪಾಡಿ ಕಾಪಾಡಿ ನಮ್ಮನ್ನು ಬಿಟ್ಟು ಹೋಗಬೇಡಿ” ಎಂದು ಕಿರುಚಿಕೊಳ್ಳುತ್ತೇವೆಯೋ, “ಕನಿಷ್ಠ ಪಕ್ಷ ಕೆಲ ಗಣ್ಯ ಅಪರಾಧಿಗಳಂತೆ ಮುಖ ಮುಚ್ಚಿಕೊಳ್ಳಲು ಮಾಸ್ಕ್, ಕರ್ಚೀಪ್‌ಗಳನ್ನಾದರೂ ಕೊಟ್ಟು ಹೋಗಿ” ಎಂದು ಕೇಳುತ್ತೇವೆಯೋ ಎನಿಸಲಾರಂಭಿಸಿತ್ತು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ

Read More

ಕಂಬನಿ ಮಿಡಿದ ಕರಾಳ ದಿನ: ಪೂರ್ಣೇಶ್‌ ಮತ್ತಾವರ ಸರಣಿ

ಹೊರಗೆ ನೋಡಿದರೆ ಚಂದಿರನ ಬೆಳಕಿತ್ತು! ನಮ್ಮೆದೆಗಳಲ್ಲಿ ಆವರಿಸಿದ್ದ ಗಾಢಾಂಧಕಾರವನ್ನು ಬಡಿದೋಡಿಸಲಾಗದ ಆ ಬೆಳಕು ಶೋಕ ಸೂಚನೆಗೆ ಹೊತ್ತಿಸಿದ್ದ ಸೊಡರಿನಂತೆಯೇ ನಮಗೆ ಗೋಚರಿಸಿತ್ತು! ಮಲಗ ಹೊರಟರೆ ಅವನದೇ ನೆನಪುಗಳು. ನಿದ್ದೆ ಬರುವಂತಿರಲಿಲ್ಲ… ಬಂದ ಅಲ್ಪ ಸ್ವಲ್ಪ ನಿದ್ದೆಯಲ್ಲೂ ಹೊರಗೆ ಅವನು ಬಂದಂತೆ, ನೋಡಿ ನಾವು ಅಚ್ಚರಿಪಟ್ಟಂತೆ, ಓಡಿ ಹೋಗಿ ಅಪ್ಪಿದಂತೆ ಕನಸುಗಳು.. ಎಚ್ಚರಗೊಂಡು ಕುಳಿತು, ಒಡನೆಯೇ ಬಾಗಿಲು ತೆರೆದು ಹೊರ ನಡೆದರೆ, “ಪ್ರಸನ್ನ, ಪ್ರಸನ್ನ,…” ಎಂದು ಕರೆದರೆ…. ಅಲ್ಲಿ ಅವನಿಲ್ಲ!
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎಂಟನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ