Advertisement
ರೂಪಶ್ರೀ ಕಲ್ಲಿಗನೂರ್

ಚಿತ್ರ ಕಲಾವಿದೆ, ಕವಯತ್ರಿ ಹಾಗೂ ಪತ್ರಕರ್ತೆ. ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 'ಕಾಡೊಳಗ ಕಳದಾವು ಮಕ್ಕಾಳು' ಮಕ್ಕಳ ನಾಟಕ . 'ಚಿತ್ತ ಭಿತ್ತಿ' ವಿಭಾ ಸಾಹಿತ್ಯ ಪ್ರಶಸ್ತಿ ಪಡೆದ ಕವನ ಸಂಕಲನ. ಹುಟ್ಟಿದ್ದು ಸವಣೂರಿನಲ್ಲಿ. ಈಗ ಬೆಂಗಳೂರು. ‘ಕೆಂಡಸಂಪಿಗೆ’ ಯಲ್ಲಿ ಸಹಾಯಕ ಸಂಪಾದಕಿ.

ವ್ಯಕ್ತಿತ್ವಗಳ ಮುಖವಾಡ ಕಳಚುವ ಅವಳ ಕಣ್ಣಿನ ಕಥೆ: ರಾಮ್‌ಪ್ರಕಾಶ್‌ ರೈ ಸರಣಿ

ಇಲ್ಲಿ ಕ್ರೈಮ್ ಇದ್ದರೂ, ಅನ್ಯಾಯವಿದ್ದರೂ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಯುಕ್ತಿಯೊಂದರ ಶಕ್ತಿಯಿಂದ ಆರಕ್ಷಕರು, ಕ್ರಮಬದ್ಧ ತನಿಖೆ ಎಲ್ಲವ ಮೀರಿಸಿ ಬೇಧಿಸುವ ಹಾದಿಯೇ ಬಲು ರೋಮಾಂಚಕ. ಕಥನ ಕಟ್ಟುವಿಕೆಯೂ ಈ ದಾರಿಗೆ ಹಾದಿಗಲ್ಲಿನಂತೆ ಪೂರಕವಾಗಿಯೇ ಇದೆ. ಅದು ಮಾತ್ರವಲ್ಲದೆ, ಪ್ರಿಯಾಳನ್ನು ಸೂಪರ್ ಹ್ಯೂಮನ್ ಎಂದೋ, ಅತಿಮಾನುಷ ಶಕ್ತಿ ಉಳ್ಳವಳು ಎಂಬಂತೆ ಬಿಂಬಿಸದೆ ಸಾಮಾನ್ಯ ಮಹಿಳೆಯೊಬ್ಬಳಂತೆ ತೋರಿಸಿದ್ದು, ಕಥನಕ್ಕೆ ಪ್ರಾಮಾಣಿಕ ಸ್ಪರ್ಶವನ್ನು ನೀಡಿದೆ ಮತ್ತು ಅದು ತೀರಾ ನೈಜವಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕಳೆದ ನೆನಪಿನ ಬಾನಿನ ಮೇಲಿನ ಮಿನುಗುವ ಭಾವಲೋಕ: ರಾಮ್ ಪ್ರಕಾಶ್ ರೈ ಕೆ ಸರಣಿ

ತಂಜಾವೂರಿನ ದೇವಸ್ಥಾನ. ಕಲ್ಲುಗಂಬಗಳು ಮನ ಮೋಹಕವಾಗಿ ಸಿಂಗರಿಸಿಕೊಂಡಿವೆ. ಶಿರವೆತ್ತಿ ನಗುವ ಗೋಪುರಗಳು, ಅನಂತ ಅಗಲದ ಅಂಗಣ, ಎಲ್ಲವೂ ಮಾಯೆಯೆನ್ನುವ ಗರ್ಭ ಗುಡಿಯಲ್ಲಿ ಕುಳಿತ ಆತ್ಮ. ಅಲ್ಲಿಯ ಜಗುಲಿಯ ಮೇಲೆ ಅಂಗಾತ ಆಗಸಾಭಿಮುಖವಾದ ಅರುಲ್ ಕಣ್ಣಲ್ಲಿ ನೀರು ಕದ ತೆರೆದು ಹೊರ ಪ್ರವಹಿಸಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ಮೆಯ್ಯಳಗನ್’ ಸಿನಿಮಾದ ವಿಶ್ಲೇಷಣೆ

Read More

ಭಾಷೆಯೆಂಬ ಬದುಕು ಮತ್ತು ಬಾಲ್ಯದ ಬಣ್ಣದ ಕನಸುಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ವೇಷ ತೆಗೆಯದೆ ಯುದ್ಧಕ್ಕೆ ಹೊರಡುವ ಉಪಾಧ್ಯಾಯರು, ರಾಮಣ್ಣನ ಮಾತುಕತೆ, ಮಹೇಂದ್ರನ ಚೇಷ್ಟೆ, ಅನಂತ ಪದ್ಮನಾಭರ ನಡುವಿನ ಜಗಳ, ಪಿ ಟಿ ಮಾಸ್ತರ್‌ರ ಗುಪ್ತ ಪ್ರೇಮ, ಮಕ್ಕಳ ಹೋರಾಟದ ಕೆಲವು ಭಾಗಗಳು ಎಲ್ಲವೂ ಇಲ್ಲಿ ಹೈಲೈಟು. ಹಾಗೆಂದು ಚಿತ್ರ ಹಾಸ್ಯಕ್ಕೆ ಸೀಮಿತಗೊಳ್ಳದೆ, ತಾನು ಹೇಳಬೇಕಾದ ಗಂಭೀರ ವಿಚಾರವನ್ನು ಭಾವಪೂರ್ಣವಾಗಿ ಹೇಳುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಮನಸ್ಸಿನ ಮಾರ್ಗದಲ್ಲೊಂದು ವೈಚಾರಿಕ ರಾಗಾಲಾಪಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಚಿತ್ರದ ಕಟ್ಟುವಿಕೆ ವಿಶೇಷವೆನಿಸಿಕೊಳ್ಳುವುದು ಪಿ. ವಾಸು ಆಯ್ದುಕೊಳ್ಳುವ ಕಥಾವಸ್ತು ಹಾಗೂ ಅದರ ಮೌಲ್ಯದ ಕಾರಣಕ್ಕೆ. ಅವರ ಆಪ್ತಮಿತ್ರ, ಆಪ್ತ ರಕ್ಷಕ, ಶಿವಲಿಂಗ ಹಾಗೂ ಆಯುಷ್ಮಾನ್‌ಭವ ಚಿತ್ರಗಳೆಲ್ಲವೋ ಮನೋ ವೈಜ್ಞಾನಿಕ ಅಂಶಗಳನ್ನು ಆಧರಿಸಿದವೇ ಆಗಿವೆ ಹಾಗೂ ಸಂಗೀತದ ಬಳಕೆಯೂ ಅತೀ ವಿಶೇಷವಾಗಿರುವಂಥದ್ದು. ಇಲ್ಲಿ ಚಿತ್ರದ ಅಭೂತ ಪೂರ್ವ ವಿಜಯಕ್ಕೆ ಇನ್ನೊಂದು ಕಾರಣವೆಂದರೆ ತಾರಾಗಣ. ವಿಜಯ್ ಪಾತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಮೋಘ ಅಭಿವ್ಯಕ್ತಿ..
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಪಿ. ವಾಸು ನಿರ್ದೇಶನದ ‘ಆಪ್ತಮಿತ್ರ’ ಸಿನಿಮಾದ ವಿಶ್ಲೇಷಣೆ

Read More

ಅಮಾನುಷ ಮನಸ್ಥಿತಿಗಳ ಮಧ್ಯೆ ಮನುಷ್ಯತ್ವದ ತಲಾಶು: ರಾಮ್ ಪ್ರಕಾಶ್ ರೈ ಕೆ. ಸರಣಿ

ನಾಪತ್ತೆಯಾಗಿದ್ದಾರೆ ಎಂಬ ನೋಟಿಸುಗಳು ಇನ್ನೂ ವಿಲೇವಾರಿಯಾಗದೆ ಕಚೇರಿ ಫಲಕದಲ್ಲಿ ಕುಳಿತುಕೊಂಡಿರುವುದೇ ಆ ಮನುಷ್ಯನ ಸ್ವಭಾವಕ್ಕೆ ಹಿಡಿದ ಕನ್ನಡಿ. ಅವನ ಸರಹದ್ದಿನಲ್ಲಿ ಸ್ಲಮ್ಮಿನ ಭಾರವಾದ ಉಸಿರುಗಳೇ ಹೆಚ್ಚಿದ್ದರಿಂದ, ಆ ಜೀವಗಳಿಗೆ ಅಲ್ಲಿ ಬೆಲೆ ಇರುತ್ತಿರಲಿಲ್ಲ. ಮಾನವೀಯತೆಯ ಬಗ್ಗೆ ಪುಟಗಟ್ಟಲೆ ಮಾತುಗಳು ಕೇಳಿಬಂದರೂ ನಮ್ಮ ಸುತ್ತಮುತ್ತಲೇ ಇರುವ ಖಾಲಿ ಕಿಸೆಯ ಜನರ ಜೀವ-ಜೀವನ ಸದಾ ಅನಾಥವಲ್ಲವೇ
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಹಿಂದಿಯ ‘ಸೆಕ್ಟರ್ -36’ ಸಿನಿಮಾದ ವಿಶ್ಲೇಷಣೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ