Advertisement

ಡಾ. ಎಲ್.ಜಿ. ಮೀರಾ

ಸಾಗರದ ಸದ್ದೂ, ಮೌನ ತೀರದ ಕಥೆಯೂ…: ರಾಮ್ ಪ್ರಕಾಶ್ ರೈ ಕೆ. ಸರಣಿ

ಇಲ್ಲಿನ ಐದು ಪಾತ್ರಗಳು ಪಂಚಭೂತಗಳ ಸಂಕೇತ. ಸಿಡಿಯುವ ರಿಚ್ಚಿ ಬೆಂಕಿಯಾದರೆ, ಮೌನ ಧ್ಯಾನಿ ಮುನ್ನಾ ಗಾಳಿ, ಅಲೆಮಾರಿಯಂತೆ ಸಾಗುವ ರಾಘು ನೀರು, ಸಹನಾಮೂರ್ತಿ ರತ್ನಕ್ಕ ಭೂಮಿ, ಬಾಲು ಆಗಸ. ಇದನ್ನು ಹೊರತುಪಡಿಸಿದರೆ, ಚಿತ್ರದ ಮಾತುಗಳು ಸೆರೆ ಆಗಿದ್ದು ಸಿಂಕ್ ಸೌಂಡ್ ತಂತ್ರಜ್ಞಾನದ ಮೂಲಕ. ಇದರಲ್ಲಿ, ದೃಶ್ಯದೊಂದಿಗೆ ಮಾತುಗಳ ದಾಖಲೀಕರಣ ಕೂಡ ನಡೆದು, ದೈನಂದಿನ ಬದುಕು ಕಣ್ಣ ಮುಂದೆ ಸಾಗುತ್ತಿರುವಂತೆ ಭಾಸವಾಗುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿ

Read More

ರಾಮ್ ಪ್ರಕಾಶ್ ರೈ ಕೆ. ಹೊಸ ಸರಣಿ “ಸಿನಿ ಪನೋರಮಾ” ಇಂದಿನಿಂದ

ಯಾರ ದೃಷ್ಟಿಗೂ ಬೀಳದಂತೆ ಹೋಟೆಲಿನ ಹಿಂಬಾಗಿಲ ಬಳಿ ಕುಳಿತು ಆಕೆ ಬಿರಿಯಾನಿಯ ಚಪ್ಪರಿಸುತ್ತಿದ್ದಳು, ಅದರ ಕಾಲಾತೀತ ಪ್ರೇಯಸಿ ಮೊಸರು ಬಜ್ಜಿಯ ಒಂಚೂರು ಹೆಚ್ಚೆನಿಸುವಷ್ಟು ಸೇರಿಸಿಕೊಂಡು. ಅಲ್ಲೇ ಆಗಿದ್ದು ಅವರ ಪರಿಣಯದ ಉದ್ಘಾಟನೆ. ಮುಂದೆ ಆತ ಅವಳಿಗೆ ತನ್ನದೇ ಶೈಲಿಯ ಬಿರಿಯಾನಿಯ ಮಾಡಿ ತಿನ್ನಿಸುತ್ತಿದ್ದರೆ, ಅವಳು ಆತನೆಡೆಗೆ ತನ್ನ ಚಂದಿರ ಮೂಡುವ ಕೆನ್ನೆಗಳ ಒಳಸೆಳೆದು ತುಟಿಯಂಚಿನಲ್ಲಿ ನಗು ಚೆಲ್ಲುತ್ತಾ ಪ್ರೀತಿಯ ಭಾವವ ತಣ್ಣಗೆ ಧಾರೆಯೆರೆಯುತ್ತಿದ್ದಳು.
ರಾಮ್ ಪ್ರಕಾಶ್ ರೈ ಕೆ. ಬರೆಯುವ ಸಿನಿಮಾಗಳ ಕುರಿತ “ಸಿನಿ ಪನೋರಮಾ” ಸರಣಿ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಜೈಲಿನ ಕೈದಿಯೊಬ್ಬರು “ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ” ಎಂದರೆ, ಇನ್ನೊಮ್ಮೆ “ಜೈಲು ಹೆರಿಗೆ ಮನೆಯಂತೆ, ಇಲ್ಲಿಗೆ ಬಂದವರು ಹೊಸ ಹುಟ್ಟು ಪಡೆದೇ ಹೊರಹೋಗುವುದು” ಎನ್ನುತ್ತಾರೆ. ಸುಖದ ಬದುಕು ಸಾಗುತ್ತಿರಬೇಕಾದರೆ ಹಿರಿಯ ಮಹಿಳೆಗೆ ಬಸ್ಸಿನ ಸೀಟು ಬಿಟ್ಟುಕೊಡುವ ಪ್ರಿಯ, ಕಷ್ಟ ಕಾಲಿಟ್ಟಾಗ ಆ ಮಹಿಳೆಯ ಕಡೆಗೆ ನಿರ್ಭಾವುಕ ನೋಟವನ್ನು ಬೀರುವ ಪರಿ, ಆ ಬದಲಾವಣೆಯಂತೂ ಮಾನವ ಬದುಕಿನ ವಾಸ್ತವ ನಡುವಳಿಕೆಗೆ ಹಿಡಿದ ದರ್ಪಣದಂತೆ ಕಾಣುತ್ತದೆ.
ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಕುರಿತು ರಾಮ್ ಪ್ರಕಾಶ್ ರೈ ಕೆ ಬರಹ

Read More

ಚಿತ್ರಜಗದೊಳಗೊಂದು ಮಿಂಚಿನ ಸಂಚಾರ-ನಮ್ಮ ಶಂಕರ

ಜನಸಾಮಾನ್ಯರು ಇಂದಿಗೂ ನಿಗೂಢವೆಂದು ಭಾವಿಸುವ ಶಂಕರ್ ನಾಗ್ ಸಾವಿನ ಸುತ್ತ ಹುಟ್ಟಿಕೊಂಡ ಅನೂಹ್ಯ ಪ್ರಶ್ನೆಗಳಿಗೆ ವಿವಿಧ ದೃಷ್ಟಿಕೋನಗಳ ಮೂಲಕ ಉತ್ತರಿಸಲು ಪ್ರಯತ್ನಿಸಿದ್ದಾರೆ. ವರುಷಗಳಿಗನುಗುಣವಾಗಿ ಜೋಡಿಸಲ್ಪಟ್ಟ ಶಂಕರ್ ನಾಗ್ ಚಿತ್ರಗಳು, ಅವುಗಳ ಹಿಂದಿರುವ ಕಹಾನಿ, ಪ್ರಮುಖ ಹಾಡುಗಳು, ಅನಂತ್ ನಾಗ್, ರಮೇಶ್ ಭಟ್ ಆದಿಯಾಗಿ ವಿವಿಧ ನಟರೊಂದಿಗಿನ ಕೆಲಸಗಳು ಹಾಗೂ ಬಾಂಧವ್ಯ ಹೀಗೆ ಅನೇಕ ಮಾಹಿತಿಗಳು ದಾಖಲಾಗಿರುವ ಪರಿಯೇ ಈ ಪುಸ್ತಕದ ಹೈಲೈಟು.
ಸತೀಶ ಬಳೆಗಾರ ಬರೆದ ‘ಶಂಕರ ನಾಗ್ The Legend’ ಕೃತಿಯ ಕುರಿತು ರಾಮ್‌ ಪ್ರಕಾಶ್‌ ರೈ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ