Advertisement

ಜಯಲಕ್ಷ್ಮಿ ಪಾಟೀಲ್

ಹೀಗಿದ್ದರು ನಮ್ಮ ಕೆ.ಎಚ್. ರಂಗನಾಥ: ರಂಜಾನ್ ದರ್ಗಾ ಸರಣಿ

ಅವರಿಗೆ ಸ್ವಂತ ಕಾರು ಇರಲಿಲ್ಲ. ಅವರ ಮಕ್ಕಳು ಸರ್ಕಾರಿ ಕಾರಿನಲ್ಲಿ ಎಂದೂ ಶಾಲೆಗೆ ಹೋಗಲಿಲ್ಲ. ನಾನು ಸೇರಿದ ಒಂದು ವರ್ಷದಲ್ಲಿ ಅವರು ಒಂದು ಸೆಕೆಂಡ್ ಹ್ಯಾಂಡ್ ಅಂಬಾಸಿಡರ್ ಕಾರು ಕೊಂಡರು. ಆಗ ಅವರ ಮನೆಮಂದಿಯೆಲ್ಲ ಸಂಭ್ರಮಪಟ್ಟಿದ್ದು ಇಂದಿಗೂ ನೆನಪಿದೆ. ಅನೇಕ ವರ್ಷಗಳಿಂದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದ ಅವರು ಮೊದಲ ಬಾರಿಗೆ ಕೊಂಡದ್ದು ಒಂದು ಹಳೆಯ ಕಾರನ್ನು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ರಾಜಾ ಶೈಲೇಶಚಂದ್ರ ಗುಪ್ತ- ಕರ್ತವ್ಯನಿಷ್ಠೆಯ ಪ್ರತೀಕ: ರಂಜಾನ್ ದರ್ಗಾ ಸರಣಿ

ತಾವು ಸೇವೆ ಸಲ್ಲಿಸುವ ಪತ್ರಿಕೆ ಮತ್ತು ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪತ್ರಿಕಾ ಮಾಲೀಕರ ಬಗ್ಗೆ ಅವರಿಗೆ ಅಪಾರವಾದ ಗೌರವ. ಅವರು ಮಾಲೀಕರಿಗೆ “ಖಾವಂದರು” ಎಂದು ಕರೆದಾಗ ನಾಕು ನಕ್ಕಿದ್ದೆ. ಮಾಲೀಕರು ಕೂಡ ಅವರನ್ನು ಗೌರವದಿಂದ ಕಾಣುತ್ತಿದ್ದರು. ಆದರೆ ತಮಗಾದ ಅನ್ಯಾಯದ ಬಗ್ಗೆ ಅವರು ಎಂದೂ ಮಾಲೀಕರ ಮುಂದೆ ಉಸುರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 70ನೇ ಕಂತು ನಿಮ್ಮ ಓದಿಗೆ

Read More

ಸಮತೆಯ ಸಂತ, ಕಾಮ್ರೇಡ್ ವಿ.ಎನ್. ಪಾಟೀಲ: ರಂಜಾನ್‌ ದರ್ಗಾ ಸರಣಿ

ಪ್ರಾಮಾಣಿಕ ರಾಜಕಾರಣಿಗಳು ತಮ್ಮ ಇಳಿವಯಸ್ಸಿನಲ್ಲಿ ಎಷ್ಟೊಂದು ಕಷ್ಟಪಡುವರು ಎಂಬುದರ ಬಗ್ಗೆ ಅರಿವಿದ್ದ ನನಗೆ ಅಂದು ಬಹಳ ಹೊತ್ತಿನವರೆಗೆ ನಿದ್ರೆ ಬರಲಿಲ್ಲ. ಪ್ರಾಮಾಣಿಕ ರಾಜಕಾರಣಿಗಳಿಗೆ ಇಂಥ ಗತಿ ಬರದೆ ಬೇರೆ ದಾರಿಯಿಲ್ಲ ಎನಿಸಿತು. ಎಷ್ಟೋ ಮರಿಪುಢಾರಿಗಳು ವಿಧಾನ ಸೌಧ, ಮಂತ್ರಿಗಳ ಮನೆ ಮತ್ತು ಶಾಸಕರ ಭವನದ ಮುಂದೆ ಕಾರಲ್ಲಿ ಸುತ್ತಾಡುವುದನ್ನು ನೋಡಿದ ನನಗೆ, ನನ್ನ ನಾಯಕನೊಬ್ಬ ಈ ರೀತಿ ಯಾವ ಸೌಲಭ್ಯಗಳೂ ಇಲ್ಲದೆ ಬದುಕುವುದನ್ನು ನೋಡಿ ಅತೀವ ಖೇದವೆನಿಸಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 69ನೇ ಕಂತು ನಿಮ್ಮ ಓದಿಗೆ

Read More

ನನ್ನ ತವನಿಧಿ…: ರಂಜಾನ್ ದರ್ಗಾ ಬರೆಯುವ ಸರಣಿ

ಜನಸಾಮಾನ್ಯರ ಶಕ್ತಿಯಲ್ಲಿ ಮತ್ತು ಜ್ಞಾನ ಶಕ್ತಿಯಲ್ಲಿ ಅವರಿಗೆ ಅಪಾರವಾದ ನಂಬಿಕೆ ಇದೆ. ಒಬ್ಬ ವಕೀಲನಿಗೆ ತನ್ನ ಕ್ಷೇತ್ರದಲ್ಲಿನ ಎಷ್ಟು ಶಬ್ದಗಳು ಗೊತ್ತಿವೆಯೋ ಅದಕ್ಕಿಂತ ಹೆಚ್ಚಿನ ಶಬ್ದಗಳು ಮೀನುಗಾರನಿಗೆ ಅವನ ಸಮುದ್ರ ಸಂಬಂಧದಿಂದ ಗೊತ್ತಾಗುತ್ತವೆ ಎಂದು ಅವರು ಹೇಳಿದ್ದರು. ಆತನಿಗೆ ವಿವಿಧ ಜಾತಿಯ ಜಲಚರಗಳು, ಗಾಳಿ, ಮೋಡಗಳು, ತೆರೆಗಳು, ಕಾಲ ಮತ್ತು ದಿನಮಾನಗಳ ಪರಿಚಯವಿರುತ್ತದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 68ನೇ ಕಂತು ನಿಮ್ಮ ಓದಿಗೆ

Read More

ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ಒಂದು ದಿನ ಮಧ್ಯಾಹ್ನದ ಡ್ಯೂಟಿಗಾಗಿ ಪ್ರಜಾವಾಣಿ ಕಚೇರಿಗೆ ಬರುವಾಗ ಟೈಂ ಆಫೀಸಿನ ಎದುರಿಗೆ ಮುಖ್ಯ ಗೇಟ್ ಮುಂದೆ ಜವಾಹಾರ ಬಾಲಭವನದ ದಿನಗೂಲಿಗಳೆಲ್ಲ ನಿಂತಿದ್ದರು. ಇವರೇಕೆ ಬಂದಿದ್ದಾರೆ ಎಂದು ಯೋಚನೆ ಮಾಡುವಷ್ಟರಲ್ಲಿ ಒಬ್ಬಾತ ಮುಂದೆ ಬಂದು, “ಸರ್ ನಿಮಗೆ ಥ್ಯಾಂಕ್ಸ್ ಹೇಳಲು ಬಂದಿದ್ದೇವೆ. ತಾವು ಬರೆದ ಲೇಖನ ಫಲ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಚಂದ್ರಪ್ರಭಾ ಅರಸು ಅವರು ನಮ್ಮ ಸ್ಥಿತಿಗತಿ ಅರಿತುಕೊಂಡು ನಮ್ಮೆಲ್ಲರ ಸಂಬಳ ಹೆಚ್ಚು ಮಾಡಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 67ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ