Advertisement

ದೇವಿಕಾ ನಾಗೇಶ್

ಸೀತಕ್ಕನ ವಠಾರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಸ್ವಲ್ಪ ಹೊತ್ತು ಮಸೆದ ನಂತರ ತನ್ನ ತೋರು ಬೆರಳನ್ನು ಕತ್ತಿಯ ಅಲಗಿಗೆ ತಾಗಿಸುತ್ತಾ “ಹಾಂ, ಈಗ ಹರಿತ ಆಯ್ತು. ಕತ್ತಿ ಹರಿತ ಇಲ್ಲಂದ್ರೆ ಯಾವುದಕ್ಕೂ ಉಪ್ಯೋಗಿಲ್ಲ ನೋಡು. ಒಂದು ರೀತಿಯಲ್ಲಿ ಈ ಬಿಸಿ ಚಾ ಇದ್ದ ಹಾಗೆ. ಬಿಸಿಬಿಸಿ ಇದ್ದಾಗ ಮಾತ್ರ ಕುಡಿಬಹುದು, ಆದ್ರೆ ತಣ್ಣಗಾದ್ರೆ ಕುಡಿಯೋಕೆ ಆಗಲ್ಲ ಅಲ್ವಾ? ಸ್ಥಿತಿ ಮುಖ್ಯ, ಬರೇ ಚಾ ಅಲ್ಲ…” ಅಂತ ಹೇಳಿ ನಮ್ಮ‌ಮನೆ ಹಿಂದಿನ ತೋಟಕ್ಕೆ ತಾಗಿ ಇದ್ದ ಅವರ ಗದ್ದೆಗೆ ಹೋದ್ರು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ನಾಲ್ಕನೆಯ ಬರಹ

Read More

ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ

Read More

ತೊಂಡೆ ಚಪ್ಪರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಮ್ಮನ ಈ ಸ್ವಾಭಾವ ಗೊತ್ತಿದ್ದ ನನಗೆ ತೊಂಡೆ ಚಪ್ಪರ ಗಾಳಿಗೆ ಹೀಗೆ ಮೂರು ಕಾಲಲ್ಲಿ ನಿಂತದ್ದು ನೋಡಿ ದಿಗಿಲಾಯಿತು. ನಾನು ಕೃಷಿ ಕೆಲಸವನ್ನು ಬಿಟ್ಟು ಬಹಳ ವರ್ಷಗಳೇ ಆಗಿಹೋಗಿವೆ. ಹಾಗಾಗಿ ಅಷ್ಟು ದೊಡ್ಡ ಚಪ್ಪರವನ್ನು ಅಪ್ಪನ ಹಾಗೆ ಹಿಡಿದು ನಿಲ್ಲಿಸಿ ಸರಿ ಮಾಡುವ ವಿಶ್ವಾಸ ನನಗೆ ಇರಲಿಲ್ಲ. ಅಮ್ಮನ ಮುಖ ನೋಡಿದೆ. ಬದುಕಿನ ಆಧಾರವೇ ಕಳೆದುಕೊಂಡ ಹಾಗೆ ಕೂತಿದ್ದು ನೋಡಿ ಬೇಸರ ಆಯ್ತು. ಸಮಾಧಾನದ ಮಾತು ಹೇಳುವ ಅಂತ ಅನ್ನಿಸಿದರೂ ಮಾತು ಹೊರಡದೆ ಅಮ್ಮನ ಹತ್ತಿರ ಸುಮ್ಮನೆ ಕುಳಿತೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎರಡನೆಯ ಬರಹ

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ