Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಮೊರೆಯುವ ಅಲೆಗಳ ಕೋಲಾಹಲ ತೀರಕ್ಕೆ ತಾಕುವುದೆ?
ನೋಡುವುದಷ್ಟೇ ಗೊತ್ತು ತೀರಕ್ಕೆ
ಇಲ್ಲದ ದ್ವಂದ್ವಗಳಲ್ಲಿ ನನ್ನನ್ನು ಸಿಲುಕಿಸದಿರು
ಕಲ್ಲಾಗಿರಲು ಗೊತ್ತು ನನಗೆ.”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಭೂಮಿ ಆಕಾಶ ಸಂಧಿಸದೇ ಉಳಿದಲ್ಲಿ
ಸದಾ ಕಣ್ಮಿಟುಕಿಸಿ ಕರೆಯುವ ಬಯಲು.
ಚಲಿಸುವ ಚಕ್ರಗಳು ಮುರಿದ ಕಡೆಯಲ್ಲೆಲ್ಲಾ
ಹಾರುವ ಬಣ್ಣಬಣ್ಣದ ಚಿಟ್ಟೆಗಳ ನೆರಳು
ಹಿಡಿ ಹಿಡಿ ಎಂದು ಸವಾಲೆಸೆದು
ಮುಟ್ಟದಂತೆ ಮುಟ್ಟಿ
ಹತ್ತಿರವಾದಂತೆ ದೂರ ಸರಿದು
ಸದಾ ಸೆಳೆಯುವ ಸಂತಸದ ಹೊನಲು.”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ಓ ಲಕ್ಷ್ಮಣಾ… ಓ ಲಕ್ಷ್ಮಣಾ…

ಇದು ಮಾಯೆ, ಇದಕ್ಕೆ ಬಲಿಬೀಳಬಾರದು ಅನ್ನುವ ಎಚ್ಚರದಲ್ಲಿ ಲಕ್ಷ್ಮಣ ಇದ್ದ. ಹೇಳಿಯೂ ಹೇಳಿದ. ಆದರೆ ಸೀತೆಯನ್ನು ಆಗಲೇ ಮಾಯೆ ಮುಸುಕಿತ್ತು. ಸತ್ಯಾಸತ್ಯದ ವಿವೇಕ ಮರೆಯಾಗಿತ್ತು. ರಾಮನನ್ನು ಕಳುಹಿಸಿದಳು. ಇಬ್ಬರು ಮಾಯೆಯ ಪ್ರಭಾವಕ್ಕೆ ಒಳಗಾದ ವ್ಯಕ್ತಿಗಳ ನಡುವೆ ಅದರಿಂದ ಹೊರತಾಗಿ ಉಳಿದ ಲಕ್ಷ್ಮಣ ಅಸಹಾಯಕತೆ, ಆರ್ತತೆ, ಬಳಲಿಕೆಯನ್ನು ತೋರ್ಪಡಿಸುವ ಒಂದು ಪ್ರತಿಮೆಯಾಗಿ ಅದ್ಭುತ ಪದವಾಗಿ, ಓ ಲಕ್ಷ್ಮಣಾ ಓ ಲಕ್ಷ್ಮಣಾ ಅನ್ನುವ ಒಂದು ಕೂಗು ಈ ಇಡೀ ಪ್ರಸಂಗದಲ್ಲಿ ಮತ್ತೆ ಮತ್ತೆ ಅನುರಣಿಸುತ್ತದೆ. ಕಾಡುತ್ತದೆ.
ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕೃತಿಯ ಒಂದು ಭಾಗದ ಕುರಿತು ಬರೆದಿದ್ದಾರೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ