Advertisement

ಉಮಾರಾವ್

ತೊಂಡೆ ಚಪ್ಪರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಮ್ಮನ ಈ ಸ್ವಾಭಾವ ಗೊತ್ತಿದ್ದ ನನಗೆ ತೊಂಡೆ ಚಪ್ಪರ ಗಾಳಿಗೆ ಹೀಗೆ ಮೂರು ಕಾಲಲ್ಲಿ ನಿಂತದ್ದು ನೋಡಿ ದಿಗಿಲಾಯಿತು. ನಾನು ಕೃಷಿ ಕೆಲಸವನ್ನು ಬಿಟ್ಟು ಬಹಳ ವರ್ಷಗಳೇ ಆಗಿಹೋಗಿವೆ. ಹಾಗಾಗಿ ಅಷ್ಟು ದೊಡ್ಡ ಚಪ್ಪರವನ್ನು ಅಪ್ಪನ ಹಾಗೆ ಹಿಡಿದು ನಿಲ್ಲಿಸಿ ಸರಿ ಮಾಡುವ ವಿಶ್ವಾಸ ನನಗೆ ಇರಲಿಲ್ಲ. ಅಮ್ಮನ ಮುಖ ನೋಡಿದೆ. ಬದುಕಿನ ಆಧಾರವೇ ಕಳೆದುಕೊಂಡ ಹಾಗೆ ಕೂತಿದ್ದು ನೋಡಿ ಬೇಸರ ಆಯ್ತು. ಸಮಾಧಾನದ ಮಾತು ಹೇಳುವ ಅಂತ ಅನ್ನಿಸಿದರೂ ಮಾತು ಹೊರಡದೆ ಅಮ್ಮನ ಹತ್ತಿರ ಸುಮ್ಮನೆ ಕುಳಿತೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎರಡನೆಯ ಬರಹ

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ”

ಅರೆ! ಎಲ್ಲರೂ ಅವರವರ ಕೆಲಸಗಳಲ್ಲಿಯೇ ಕಳೆದುಹೋಗಿದ್ದಾರೆ ಇಲ್ಲಿ. ಯಾರಿಗೂ ಹೊರಗಡೆ ಏನು ನಡೆಯುತ್ತಿದೆ ಅನ್ನುವುದರ ಪರಿವೇ ಇಲ್ಲ. ಅದರ ಅಗತ್ಯವೇ ಇಲ್ಲ ಅನ್ನುವಷ್ಟೂ ಕ್ಷುಲ್ಲಕ ಸಂಗತಿಗಳೆ ಅವೆಲ್ಲಾ? ರಸ್ತೆಯ ತುಂಬಾ ಬದುಕಿನ ನಿತ್ಯ ವ್ಯಾಪಾರ ಅದೆಷ್ಟು ಸಹಜ ಅನ್ನುವ ರೀತಿಯಲ್ಲಿ ನಡೆಯುತ್ತಿದೆ. ಪಕ್ಕದಲ್ಲಿ ಬಾಂಬ್ ಬಿದ್ದರೂ ನಮ್ಮ ಮನಗೆ ಬಿದ್ದಿಲ್ಲ ತಾನೇ ಅನ್ನುವ ಹಾಗೆ ತಮ್ಮತಮ್ಮ ಕೆಲಸಗಳಲ್ಲಿ ತೊಡಗುತ್ತಾರಂದ್ರೆ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ “ಲೋಕದ ಭಾರ” ನಿಮ್ಮ ಓದಿಗೆ

Read More

ಶಾಲೆ ಕಳ್ಳ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಎಷ್ಟೋ ಸಲ‌ ಗೇಟ್ ಹತ್ತಿರ ಹೋಗುವಾಗಲೇ ಶಾಲೆಯ ಪ್ರಾರ್ಥನೆ ಶುರುವಾಗುತ್ತಿತ್ತು. ಪ್ರಾರ್ಥನೆ ಹೇಳುವ ಮಕ್ಕಳ ಸಮೂಹ ಗಾಯನದಲ್ಲಿ, “ಮಂಗಳವನು ಕರೆಯುತಿರುವ ದೇವ ಶುಭವ ನೀಡಲಿ…” ಅಂತ ಕೇಳುವಾಗಲೇ ಅಳು ಉಕ್ಕಿ ಉಕ್ಕಿ ಬರುತ್ತಿತ್ತು. ತಡ ಆಯ್ತು, ಇನ್ನು ಟೀಚರ್ ಹೊಡಿತಾರೆ, ಅಮ್ಮ ಬಿಟ್ಟು ಹೋದ್ರು ಅನ್ನೋದು ಮಾತ್ರವಲ್ಲದೇ ಎದೆಯಲ್ಲಿ ಯಾವುದೋ ಏಕಾಂಗಿ ಭಾವ ಉಕ್ಕಿ ದುಃಖ ಉಮ್ಮಳಿಸಿ ಬರುತ್ತಿತ್ತು. ಅದು ಆ ಪ್ರಾರ್ಥನೆಯ ರಾಗದಿಂದ ಹಾಗಾಗುತ್ತಿತ್ತೋ ಅಥವಾ ಬೇರಾವುದರಿಂದಲೋ ಗೊತ್ತಾಗುತ್ತಿರಲಿಲ್ಲ. ನಿಂತಲ್ಲಿಯೇ ಜೋರಾಗಿ ಅತ್ತು ಬಿಡುತ್ತಿದ್ದೆ.
ಶಾಲೆಗೆ ಹೋಗುವುದನ್ನು ತಪ್ಪಿಸಲು ನೋಡುವ ಶಾಲೆ ಕಳ್ಳರ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

Read More

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ