ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ
ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ