Advertisement

ಎಸ್. ಜಯಶ್ರೀನಿವಾಸ ರಾವ್

ಸುಂದರ ಕಾಡಿನ ರೋಚಕ ಕಥೆಗಳು-೯: ರೂಪಾ ರವೀಂದ್ರ ಜೋಶಿ ಸರಣಿ

ಇನ್ನು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು, ಮರವನ್ನು ಗುಟ್ಟಾಗಿ ಕಡಿದು ಸಾಗಿಸುತ್ತಿದ್ದರು. ಅರಣ್ಯಾಧಿಕಾರಿಗಳ ಕಣ್ಣುತಪ್ಪಿಸಲು, ದಟ್ಟ ಕಾಡಿನ ನಡುವೆ, ರಾತ್ರಿಯ ಬೆಳದಿಂಗಳ ಬೆಳಕಲ್ಲೇ ಸ್ಥಳೀಯರ ಸಹಾಯದಿಂದ ಈ ಕೆಲಸ ಮುಗಿಸಿ, ಗಪ್ ಚಿಪ್ ಆಗಿ ದಿಮ್ಮಿ ಸಾಗಿಸಿ ಬಿಡುವ ನಿಪುಣರಿವರು. ಆಗೆಲ್ಲ ಹಳ್ಳಿಯಲ್ಲಿ ಕಾಲು ದಾರಿಗಳು ಮಾತ್ರ. ವಾಹನ ಸಂಚಾರಕ್ಕೆ ಅಲ್ಲೊಂದು ಇಲ್ಲೊಂದು ಮಣ್ಣು ರಸ್ತೆ. ಅದು ಬೇಸಿಗೆಗಷ್ಟೇ. ಮಳೆಗಾಲದಲ್ಲಿ ಆ ರಸ್ತೆಯಲ್ಲಿ ನಡೆದರೆ, ಮೊಣಕಾಲು ತನಕ ಹೂತು ಹೋಗುತ್ತಿತ್ತು. ಇನ್ನು ವಾಹನ ಸಂಚಾರ ನೆನೆಸುವುದೂ ಕಷ್ಟ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಸುಂದರ ಕಾಡಿನ ರೋಚಕ ಕಥೆಗಳು-೮: ರೂಪಾ ರವೀಂದ್ರ ಜೋಶಿ ಸರಣಿ

ಜೇನು ತುಂಬಿದ ರಟ್ಟಿನ ಜೊತೆಗೆ ಇರುವ ಜೇನು ನೊಣಗಳ ಮೊಟ್ಟೆ ಮರಿ ತುಂಬಿದ್ದ ರಟ್ಟನ್ನು ನಿರ್ದಯವಾಗಿ ಬಿಸಾಡಲಾಗುತ್ತಿತ್ತು. ಈ ಹೊಗೆಯ ತಾಪಕ್ಕೆ ನೂರಾರು ಜೇನು ನೊಣಗಳು ಸಾಯುತ್ತಿದ್ದವು. ಒಂದಿಷ್ಟು ದಿಕ್ಕೆಟ್ಟು ಹಾರಿ ಹೋಗುತ್ತಿದ್ದವು. ಇದನ್ನೆಲ್ಲಾ ಈಗ ನೆನೆದರೆ, ‘ಛೆ… ನಾವು ಮನುಷ್ಯರು ಎಷ್ಟು ಸ್ವಾರ್ಥಿಗಳು. ಪಾಪದ ನೊಣಗಳು ಊರೂರು ಸುತ್ತಿ ಮಕರಂದ ಸಂಗ್ರಹಿಸಿ ತಮಗಾಗಿ ತಯಾರಿಸಿಕೊಂಡಿದ್ದ ಊಟವನ್ನು ಮೋಸದಿಂದ ಅಪಹರಿಸುವುದಲ್ಲದೇ ಅವರ ಪ್ರಾಣಕ್ಕೂ ಹಾನಿಯುಂಟು ಮಾಡುತ್ತೇವಲ್ಲಾ..
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನೇಳನೆಯ ಕಂತು

Read More

ಸುಂದರ ಕಾಡಿನ ರೋ‌ಚಕ ಕಥೆಗಳು-೭: ರೂಪಾ ರವೀಂದ್ರ ಜೋಶಿ ಸರಣಿ

ಆ ಎಮ್ಮೆಗಳೇನಾದರೂ ಅದನ್ನು ಓಡಿಸಿರದಿದ್ದರೆ ಆಯಿಯ ಗತಿ ಏನಾಗುತ್ತಿತ್ತೋ ಏನೋ. ನೆನೆಸಿಕೊಂಡರೆ, ಈಗಲೂ ಮೈ ಅದುರುತ್ತದೆ. ಆಯಿ ಯಾವಾಗಲೂ ಎಮ್ಮೆ, ದನಗಳನ್ನು ಅಷ್ಟು ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಳು. “ಆಯಿಗೆ ನಮಗಿಂತಲೂ ಎಮ್ಮೆಯ ಮೇಲೆ ಹೆಚ್ಚು ಪ್ರೀತಿ” ಎಂದು ನಾವು ಯಾವಾಗಲೂ ತಮಾಷೆ ಮಾಡಿದರೆ, ಆಯಿ “ಹೌದು, ಅವು ಮೂಕ ಪ್ರಾಣಿಗಳು. ನಿಮ್ಮಂತೆ ಬಾಯಿ ಬಿಟ್ಟು ಬೇಕಾದ್ದನ್ನು ಕೇಳಲಿಕ್ಕೆ ಆಗೋದಿಲ್ಲ. ನಾವೇ ತಿಳಿದು ಕೊಟ್ಟರೆ ತಿಂತಾವೆ ಪಾಪ” ಎನ್ನುತ್ತಿದ್ದಳು. ಹೀಗೆ ಮಕ್ಕಳಿಗಿಂತಲೂ ಹೆಚ್ಚು ಪ್ರೀತಿಯಿಂದ ಎಮ್ಮೆಗಳನ್ನು ಸಾಕಿದ್ದಕ್ಕೂ ಸಾರ್ಥಕವಾಯ್ತು ಎನ್ನುವಂತೇ ಅವತ್ತು ಅವು ಆಯಿಯ ಪ್ರಾಣ ಕಾಪಾಡಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನಾರನೆಯ ಕಂತು

Read More

ಸುಂದರ ಕಾಡಿನ ರೋಚಕ ಕಥೆಗಳು (೬): ರೂಪಾ ರವೀಂದ್ರ ಜೋಶಿ ಸರಣಿ

ಬೆಟ್ಟದ ಬಲಬದಿಯ ಕಿರುದಾರಿ ಹಿಡಿದು ಸಾಗಿದರೆ, ಅಲ್ಲೊಂದು ನೆಲ್ಲಿ ಮರ. ಅದರ ಬುಡದಲ್ಲಿ ನಮ್ಮ ನಾಯಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದೆ. ನಾನು ಗಾಬರಿಯಿಂದ ಜೋರಾಗಿ ಅಳತೊಡಗಿದೆ. ಯಾರೋ ರಾತ್ರಿ ಅಲ್ಲಿರುವ ಪೊದೆಯಲ್ಲಿ ನಾಡ ಬಾಂಬು ಇಟ್ಟಿದ್ದಾರೆ! ಮಾಂಸದ ವಾಸನೆಗೆ ಮರುಳಾಗಿ, ಅದು ಆ ಬಾಂಬನ್ನು ಬಯಲಲ್ಲಿ ತಂದಿಟ್ಟುಕೊಂಡು ಇಡಿದಾಗಿ ಕಚ್ಚದೆ, ಮೆಲ್ಲಗೆ ಒಂದು ಮೂಲೆಯನ್ನು ಬಿಡಿಸಿದೆ. ಅದಕ್ಕೇ ಸ್ವಲ್ಪಭಾಗ ಸಿಡಿದು, ಅದರ ಮೇಲ್ದವಡೆ ಸ್ವಲ್ಪ ಸೀಳಿತ್ತು. ಬಾಯೆಲ್ಲ ರಕ್ತ ಸಿಕ್ತ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನೈದನೆಯ ಕಂತು

Read More

ಸುಂದರ ಕಾಡಿನ ರೋಚಕ ಕಥೆಗಳು-5: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮಲ್ಲಿ ತಂಪು ಜಾಸ್ತಿಯಾದ್ದರಿಂದ ಹಾವುಗಳು ಹೆಚ್ಚಾಗಿ ಇರಲಿಲ್ಲವೆನ್ನಿಸುತ್ತದೆ. ಒಂದು ನಿರುಪದ್ರವಿ ಹಾವಿನ ಬಗ್ಗೆ ಹೇಳಬೇಕು ಅದೆಂದರೆ ಹಸಿರು ಹಾವು. ಹಸಿರು ದಂಟಿಗೆ ಸುತ್ತಿಕೊಂಡು, ಸಪೂರ ಕೋಲಿನಂತೇ ಡೊಂಕಾಗಿ ನಿಂತು ಹುಳ ಹುಪ್ಪಡಿ ಹಿಡಿಯುವ ಈ ಹಾವನ್ನು ಗುರುತಿಸುವುದೇ ಕಷ್ಟ. ನಾವೇ ಅದೆಷ್ಟೋ ಸಲ, ಮುಳ್ಳಣ್ಣು ಕೊಯಿದು ಕೊಳ್ಳುವಾಗಲೋ, ಜಾಜಿ ಹೂ ಕೊಯ್ಯುವಾಗಲೋ ಟೊಂಗೆಯ ಜೊತೆಗೇ ಎಳೆದು ಬಿಡುತ್ತಿದ್ದೆವು. ಆಗ ಅದು ಗಾಬರಿಬಿದ್ದು, ಸರಕ್ಕನೆ ಕೆಳಗಿಳಿದು ಓಡುತ್ತಿತ್ತು. ಅದು ಹೋಗಿ ಎಷ್ಟು ಹೊತ್ತಿನ ತನಕ, ನಾವು ಜೀವ ಬಾಯಿಗೆ ಬಂದವರಂತೇ ಭಯದಿಂದ ಇಷ್ಟಗಲ ಕಣ್ಣುಮಾಡಿ ಮಾತು ಮರೆತು ನಿಂತಿರುತ್ತಿದ್ದೆವು!!
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ