Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಬಲ್ಲಿರೇನು ಕಾಡ ಹಣ್ಣುಗಳ ರುಚಿಯ?: ರೂಪಾ ರವೀಂದ್ರ ಜೋಶಿ ಸರಣಿ

ಎಳೆಯ ಕಾಯಿಗಳು ಬಲಿತು, ಕರ್ರಗೆ ಹೊಳೆಯುವ ಆ ಹಣ್ಣುಗಳು ಕಣ್ಣಿಗೆ ಬಿದ್ದರೆ ಮುಗಿಯಿತು. ಸ್ಪರ್ಧೆಗೆ ಬಿದ್ದವರಂತೇ, ನುಗ್ಗಿ ನುಗ್ಗಿ ಹಣ್ಣುಗಳನ್ನು ಕೊಯ್ದು ಚಪ್ಪರಿಸುತ್ತಿದ್ದೆವು. ಹುಳಿಯ ಜೊತೆಗೆ ಸವಿ ಬೆರೆತ ಆ ಮಧುರ ರುಚಿ ನೆನೆದರೆ, ಈಗಲೂ ಬಾಯಲ್ಲಿ ನೀರೂರುತ್ತದೆ. ಈ ಕವಳಿ ಕಾಯಿ ಕೊಯ್ದರೆ, ಹಾಲಿನಂಥ ಜಿಗುಟು ವಸರುತ್ತದೆ. ಈ ಜಿಗುಟಿನಿಂದ ನಮ್ಮ ಅಂಗಿಯೆಲ್ಲ ಕಲೆಯಾಗಿ, ಮನೆಯಲ್ಲಿ ನಿತ್ಯ ಬೈಗುಳದ ಹೂ ತಲೆಗೇರುತ್ತಿತ್ತು. ಆ ರುಚಿ ಹಣ್ಣಿನ ಮುಂದೆ, ಬೈಗುಳ, ಬಡಿತ ಇವೆಲ್ಲ ಯಾವ ಲೆಕ್ಕದ್ದು ಹೇಳಿ?
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಐದನೆಯ ಕಂತು

Read More

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ