Advertisement

ಮಾಲಾ ಮ. ಅಕ್ಕಿಶೆಟ್ಟಿ

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ

ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ನನ್ನ ಪುಟ್ಟ ಶಾಲೆ: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮ ಗುರ್ಜಿ ಎಲ್ಲರ ಕೈ ಮೇಲೆ ಕಿತ್ತಳೆ ತೊಳೆ ಆಕಾರದ ಪೆಪ್ಪರಮಿಠಾಯಿ ಇಡುತ್ತಿದ್ದಂತೇ, ಅದು ಬುಳಕ್ಕನೆ ಬಾಯಿಗಿಳಿದು ಬಿಡುತ್ತಿತ್ತು. ನಾವೆಲ್ಲ ಅದನ್ನು ಕಡಿಯದೇ ದವಡೆಯಲ್ಲಿ ಅದುಮಿಟ್ಟುಕೊಂಡು ಮೆಲ್ಲಗೆ ರಸ ಹೀರಿ, ಹೀರಿ ಚಪ್ಪರಿಸುತ್ತಿದ್ದೆವು. ಅದು ಖಾಲಿಯಾಗುವ ತನಕ ಮಾತು ಕತೆ ಎಲ್ಲ ಬಂದ್… ನಮ್ಮಿಡೀ ದಿನದ ಸಂಭ್ರಮ, ಸಂತೋಷ ಆ ಪುಟ್ಟ ಮಿಠಾಯಿಗೋಸ್ಕರವೇ ಇರುತ್ತಿತ್ತೊ ಗೊತ್ತಿಲ್ಲ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ

ಏನೇ ಹೇಳಿ, ಆ ಕಾಡು ಮಧ್ಯದ ಪುಟ್ಟ ಶಾಲೆಯಲ್ಲಿ ಓದುವಾಗಿನ ಆ ನೆನಪುಗಳು ನಿಜಕ್ಕೂ ಚಿರಸ್ಮರಣೀಯ. ನಮ್ಮನೆಯಿಂದ ಶಾಲೆ ಸುಮಾರು ಎರಡು ಕಿ.ಮೀ. ನಷ್ಟು ದೂರವಿತ್ತು. ಎರಡು ಸೊಪ್ಪಿನ ಬೆಟ್ಟ ದಾಟಿ, ಒಂದು ಗುಡ್ಡ ಏರಿಳಿದರೆ, ನಮ್ಮ ಶಾಲೆ. ಮಳೆಗಾಲದಲ್ಲಿ ಒಂದು ಪುಟ್ಟ ಕಾಲುವೆ ದಾಟಬೇಕಾಗುತ್ತಿತ್ತು. ಹೆಚ್ಚು ಕಮ್ಮಿ ಮಾರಗಲವಿದ್ದ ಆ ಕಾಲುವೆ, ಅಂಥ ಭಯಂಕರ ಕಾಲುವೆಯೇನೂ ಆಗಿರಲಿಲ್ಲ. ಅದೂ ಕೂಡಾ ನಮ್ಮ ಬಾಲ್ಯದ ಸಂಗಾತಿಯಂತೇ ನಮ್ಮ ಖುಶಿಯಲ್ಲಿ ಪಾಲು ಪಡೆದಿತ್ತು.
ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ

Read More

ಹುಬ್ಬಳ್ಳಿಗರ ಇಂಗ್ಲೀಷ್ ವ್ಯಾಮೋಹ: ರೂಪಾ ಜೋಶಿ ಬರೆದ ಲಲಿತ ಪ್ರಬಂಧ

ಇಲ್ಲಿಯ ಭಾಷೆಯಲ್ಲಿ ಎಲ್ಲರಿಗೂ “ರೀ”…. ಎಂಬ ಅಕ್ಷರ ಹಚ್ಚಿಯೇ ಮಾತಾಡುವ ರೂಢಿಯಿದೆ. ಅಪ್ಪಾರು, ಅವ್ವಾರು, ಅಕ್ಕಾರು, ಮಾಮಾರು, ಅಣ್ಣಾರು, ಅಜ್ಜಾರು ಹೀಗೇ. ಎಲ್ಲರನ್ನೂ ಬಹುವಚನದಲ್ಲೇ ಹೆಸರಿಸುವ ಈ ಪದ್ಧತಿ ನಿಜಕ್ಕೂ ಒಳ್ಳೆಯದೇ. ಅದೇ ಕಾರಣಕ್ಕೆ ಆಂಗ್ಲ ಪದ ಬಳಕೆ ಮಾಡಿದಾಗಲೂ ಅವರು ಅದಕ್ಕೆ ಕನ್ನಡದ ‘ರೀ’ ಮತ್ತೂ ‘ರು’ ಪದ ಹಚ್ಚಿ, ” ಮೇಡಮ್ರಿ, ಸರ್ರೀ, ಮಮ್ಮೀರೀ…. ಡ್ಯಾಡಿರೀ, ಅಜ್ಜಾರ್ರೀ, ಅಂಕಲ್ರೀ ಅಂತ ರೂಪಾಂತರಿಸಿ, ಅದು ನಮ್ಮ ಕನ್ನಡದ್ದೇ ಅನ್ನುವಷ್ಟು ಸಲೀಸಾಗಿ ಬಳಸುವುದನ್ನು ನೋಡಿ, ನನಗೆ ಮೊದ ಮೊದಲು ತುಂಬಾ ವಿಸ್ಮಯವೆನ್ನಿಸುತ್ತಿತ್ತು.
ರೂಪಾ ರವೀಂದ್ರ ಜೋಷಿ ಬರೆದ ಪ್ರಬಂಧ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ