Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ನಾವು ತಿನ್ನುವ ಆಹಾರದ ಮೂಲ ಯಾವುದು?

ನಾವು ತಿನ್ನುವ ಆಹಾರದ ಬಗ್ಗೆ ಬೆಳೆದ ಪ್ರಜ್ಞೆಯಿಂದ ಒಂದಷ್ಟು ಕಂಪೆನಿಗಳು ಹೊಸ ರೀತಿಯಲ್ಲಿ ಲಾಭಮಾಡಿಕೊಳ್ಳಲಾರಂಭಿಸಿದ್ದು ಒಂದೆಡೆಯಾದರೆ, ಮತ್ತೊಂದಷ್ಟು ಜನ ತೀರಾ ಮತ್ತೊಂದು ಹಾದಿಯಲ್ಲಿ ಯೋಚಿಸಲಾರಂಭಿಸಿದ್ದರು. ನಾವು ತಿನ್ನುವ ತರಕಾರಿಗಳನ್ನು ನಾವೇ ಬೆಳೆದುಕೊಂಡರೆ ಹೇಗೆ? ಹೀಗಂದುಕೊಂಡ ಬಹುತೇಕ ಜನರು ಇದ್ದದ್ದು ಬೆಂಗಳೂರಿನಂಥ ಮಹಾನಗರಗಳಲ್ಲಿ. ಮನೆ ಕಟ್ಟಲಿಕ್ಕೆ ಒಂದು ಸೈಟಿಗೆ ಸಾಕಷ್ಟು ಒದ್ದಾಡಬೇಕಾದಾಗ ಇನ್ನು ತರಕಾರಿಗಳನ್ನು ಬೆಳೆದುಕೊಳ್ಳುವುದು ಹೇಗೆ ಅನ್ನುವ ಜಿಜ್ಞಾಸೆಯ ಸಮಯದಲ್ಲೇ ಕೆಲವೊಂದಷ್ಟು ಜಾಣರು ಟೆರೆಸ್‌ ಗಾರ್ಡನಿಂಗ್‌ ಆರಂಭಿಸಿಯೇ ಬಿಟ್ಟರು. ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಪೂರಂ ಎಂಬ ಸಂಭ್ರಮವೂ ಆನೆಗಳ ಗಾಂಭೀರ್ಯವೂ

ನಾವು ಅಲ್ಲಿಗೆ ಹೋಗಿ ತಾಸು ಹೊತ್ತಿನ ಮೇಲೆ ಒಂದೊಂದೇ ಆನೆಗಳು ಮೆಲ್ಲಗೆ ತಮ್ಮ ಮೇಲೆ ನಿಂತಿದ್ದ ಎರಡು-ಮೂರು ಜನ ಹಾಗೂ ಮಾವುತರೊಟ್ಟಿಗೆ, ದೇವಸ್ಥಾನದ ಒಳಗೆ ಹೊರಡಲಾರಂಭಿಸಿದವು. ನಮಗೆ ಮೂರ್ನಾಲ್ಕು ಆನೆಗಳನ್ನು ಹತ್ತಿರದಿಂದಲೇ ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಇನ್ನೇನು ಆ ಕಾರ್ಯಕ್ರಮ ಮುಗಿಯುವ ಹಂತಕ್ಕೆ ಬಂದಾಗ, ನಾವು ಮೆಲ್ಲನೆ ಅಲ್ಲಿಂದ ಹೊರಟು, ಕಾಂಪೌಂಡ್‌ನ ಇನ್ನೊಂದು ಬದಿಗೆ ಬಂದು, ಆನೆಗಳ ಸಾಲು ನಿಂತಿದ್ದಲ್ಲಿಗೆ ಹೋದಾಗ, ಅಲ್ಲಿ ಆಗಲೇ ಜನರ ಗುಂಪು ಮೆಲ್ಲನೆ ಕರಗಲಾರಂಭಿಸಿದ ಕಾರಣ, ಅಲ್ಲಿ ಇನ್ನೊಂದಷ್ಟು ಹತ್ತಿರದಿಂದ ಆನೆಗಳನ್ನು ಕಾಣಲು ಸಿಕ್ಕಿತು.
ಕೇರಳದ ತ್ರಿಶ್ಶೂರ್‌ ಪೂರ ಕುರಿತು ತಮ್ಮ ಅನುಭವಗಳನ್ನು ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ತನ್ನ ಪಾಡಿಗೆ ಬೆಳಗನ್ನು ಆನಂದಿಸುತ್ತಿದ್ದ ಕವಿಮನೆ

ಕವಿಶೈಲಕ್ಕೆ ಎಷ್ಟೊಂದು ಜನರು  ಪ್ರವಾಸಿಗರಾಗಿ ಬಂದಿದ್ದರು !  ಬಂದಷ್ಟು ಜನರಲ್ಲಿ ಕೇವಲ ಒಂದು ಪರ್ಸೆಂಟ್‌ ನಷ್ಟು ಮಾತ್ರದವರು ಕೆಲಕಾಲ ಸುಮ್ಮನೆ ಇದ್ದು ಹೋದರು. ಬಹುತೇಕರು ಎಲ್ಲಿ ನಿಂತುಕೊಂಡರೆ ಫೋಟೋ ಚೆನ್ನಾಗಿ ಬರಬಹುದು? ರೀಲ್ಸ್‌ಗೆ ಯಾವ ಜಾಗ ಸೂಕ್ತ? ಅನ್ನುವ ಯೋಚನೆಯಲ್ಲಿದ್ದವರೇ. ಸುತ್ತಲಿನ ಮೌನವನ್ನು ಸವಿಯುವುದಕ್ಕೆ ಮುಂಜಾನೆ  ಮಂಜಿನಲ್ಲಿ ಕುಪ್ಪಳಿಯ ಕವಿಮನೆ ಮತ್ತು ಕವಿಶೈಲಕ್ಕೆ ಭೇಟಿ ನೀಡಿದ ಒಂದು ಅನುಭವವನ್ನು ಪ್ರಸ್ತುತಪಡಿಸಿದ್ದಾರೆ ರೂಪಶ್ರೀ ಕಲ್ಲಿಗನೂರು.

Read More

ನೆಮ್ಮದಿ ಎಂಬ ಕಾಂಚನ ಮೃಗದ ಬೆನ್ನಟ್ಟಿ

ನೆಮ್ಮದಿಯ ಬದುಕು ಎಲ್ಲರ ಕನಸೂ ಹೌದು. ಆದರೆ ನಾವು ಕಟ್ಟಿಕೊಂಡಿರುವ ಆಸೆಯ ಸೌಧದ ನಿರ್ಮಾಣ ಮುಗಿಯುವುದೇ ಇಲ್ಲ. ದಿನ ದಿನಕ್ಕೋ, ಇಲ್ಲ ಕ್ಷಣ ಕ್ಷಣಕ್ಕೋ ಅದರ ಗೋಡೆಗೆ ಇಟ್ಟಿಗೆ ಜೋಡಿಸುತ್ತಲೇ ಹೋಗುವವರು ನಾವು. ನಮ್ಮನೆಗೆ ಎರಡು ರೂಮು ಸಾಕೆನ್ನಿಸಿದರೂ, ಯಾವತ್ತೋ ಬಂದು ಹೋಗುವ ನೆಂಟರಿಗೊಂದು ಪ್ರತ್ಯೇಕ ಕೋಣೆ ಬೇಡವಾ ಎನ್ನುತ್ತದೆ ಮನಸ್ಸು. ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಹುಲಿ ಚಿರತೆಗಳ ಹುಡುಕಾಡುತ್ತ ಕಬಿನಿ ಅರಣ್ಯದಲ್ಲಿ..

ಸಫಾರಿಯ ಹುಮ್ಮಸ್ಸು ಎಲ್ಲರಲ್ಲಿಯೂ ಇತ್ತು. ಗಾಡಿಯಲ್ಲಿ ಕುಳಿತವರಲ್ಲಿ ಒಂದಷ್ಟು ಜನ ಆಗಲೇ “ಟೈಗರ್… ಟೈಗರ್…” ಎಂಬ ಜಪ ಮಾಡಲು ಆರಂಭಿಸಿದ್ದರು. ನಾವು ಕುಳಿತಿದ್ದ ಗಾಡಿ ಕಾಡ ಗೇಟಿನ ಒಳಗೆ ನುಗ್ಗಿ ಕಾಲು ಕಿಲೋಮೀಟರ್‌ ಸಾಗಿತ್ತಷ್ಟೇ.. ದೂರದಲ್ಲಿ ಚಿರತೆಯೊಂದು ಕಾಣಿಸಿತು. ಗಾಡಿ ಅದರತ್ತ ಮೆಲ್ಲಗೆ ತೆರಳಿ ನಾವೆಲ್ಲ ಅದನ್ನು ಕಣ್ಣು-ಕ್ಯಾಮರಾ ಕಣ್ಣಿನೊಳಗೆ ತುಂಬಿಕೊಳ್ಳಬಹುದೇನೋ ಅಂತ ಆಸೆಪಟ್ಟುಕೊಳ್ಳುವಷ್ಟರಲ್ಲಿ ಗಾಡಿಯ ಚಾಲಕ ಅತೀ ಉತ್ಸಾಹದಲ್ಲಿ ಗಾಡಿ ಅದರತ್ತ ಚಲಾಯಿಸಿದ. ವನ್ಯಜೀವಿ ದರ್ಶನಕ್ಕಾಗಿ ಪ್ರವಾಸ ಹೊರಟ ಅನುಭವವನ್ನು ನವಿರಾಗಿ ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ