Advertisement

ರೂಪಾ ರವೀಂದ್ರ ಜೋಶಿ

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಭಿನ್ನ”

ಹೀಗೆ ಅಚಾನಕ್ಕಾಗಿ ಕೆಲಸ ಬಿಡುವ ನಿರ್ಧಾರ ತಿಳಿಸಿ ಹಿಂತಿರುಗಿ ನೋಡದೆ ಬೀಸುನಡಿಗೆಯಲ್ಲಿ ಎದ್ದು ಬರಬೇಕೆನ್ನುವ ತೀರ್ಮಾನ ಹಿಂದಿನ ರಾತ್ರಿ ಮೊಳಕೆಯೊಡೆದು ಬೆಳೆದು ಬೆಳೆದು ಬೃಹದಾಕಾರವಾಗಿ ಇವತ್ತು ಹರಿಣಿಯ ಮುಂದೆ ಕುಳಿತಾಗ ಹೇಳಲೇಬೇಕಾದ ಒತ್ತಡ ಸೃಷ್ಟಿಸಿತ್ತು. ಎಂದಿನಂತೆ ಮೀಟಿಂಗ್ ರೂಮಲ್ಲಿ ಸಿಗದೆ ತನ್ನ ಕ್ಯಾಬಿನ್ನಿಗೆ ಕರೆಸಿ ಕೂರಿಸಿದಾಗಲೇ ಹರಿಣಿ ತನ್ನ ಅಧಿಕಾರ ಪ್ರದರ್ಶನ ಮಾಡಿಯೇ ತೀರುವ ಸೂಚನೆ ಸಿಕ್ಕಿತ್ತು.
ಎಸ್. ನಾಗಶ್ರೀ ಅಜಯ್ ಹೊಸ ಕಥಾ ಸಂಕಲನ “ಕಡೆ ಹಾಯ್ವ ದೋಣಿ”ಯ ಒಂದು ಕತೆ “ಭಿನ್ನ”

Read More

ಮನೆಗೆ ಮಾರಿ… ಊರಿಗೆ ಉಪಕಾರಿ: ಎಸ್.‌ ನಾಗಶ್ರೀ ಅಜಯ್ ಅಂಕಣ

ಪ್ರಪಂಚದ ಕಣ್ಣಿಗೆ ಬೀಳುವಾಗಿನ ನಾಟಕವನ್ನಾದರೂ ಸಹಿಸಬಹುದು. ಕುಟುಂಬದೊಳಗೂ ಸಹಜವಾಗಿ ಬೆರೆಯಲಾಗದ ಸ್ಥಿತಿಯೀಗ ಪ್ರತಿ ಮನೆಯ ದುರಂತ. ತೊಟ್ಟಿಲ ಕೂಸು ಕಿಟಾರೆಂದರೆ ಗೂಗಲ್ ರಿಸರ್ಚ್ ಮಾಡುವ, ನಿಂಗೇನ್ಗೊತ್ತು ಈ ಕಾಲದ ಕಷ್ಟಸುಖ ಸುಮ್ಮನಿರಮ್ಮ ಎಂದು ಮೂರು ಮಕ್ಕಳು ಹೆತ್ತಾಕೆಯನ್ನೇ ಮೂಲೆಗೆ ಕೂರಿಸುವ ದಿನ. ಮೊಮ್ಮಕ್ಕಳಿಗೆ ಬಾಯಿಪಾಠ ಹೇಳಿಕೊಡಲು, ಚದುರಂಗ, ಚೌಕಾಬಾರ, ಹುಲಿ ಕರಡಿ ಆಡಿಸಲು, ಅಡುಗೆಯ ಪ್ರಾಥಮಿಕ ತರಬೇತಿ ನೀಡಲು, ರಂಗೋಲಿ, ಕಸೂತಿ, ಹಾಡುಹಸೆ ಕಲಿಸಲು ಹಾತೊರೆಯುವ ಅಜ್ಜ ಅಜ್ಜಿಯರು ಇನ್ನೂ ಇದ್ದಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹೇಗೆ ಚಿಗುರೊಡೆಯಿತು ಈ ಸ್ನೇಹದ ಬಳ್ಳಿ..: ಎಸ್. ನಾಗಶ್ರೀ ಅಜಯ್ ಅಂಕಣ

ಆಕೆ ಸಿಕ್ಕದಿದ್ದರೂ ಊರು ನಿಧಾನಕ್ಕೆ ಅಮ್ಮನನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಪೊರೆಯುತ್ತಿತ್ತು. ಆದರೆ ಜಯಮ್ಮನ ಸ್ನೇಹದ ರುಚಿ ಸಿಗದೆ ನಷ್ಟವಾಗುತ್ತಿತ್ತು. ಯಾವುದೋ ಊರಿನ ಹೆಂಗಸು ಇಲ್ಲಿ ಬಂದಿಳಿದರೆ ನನಗೇನಾಗಬೇಕು? ನೆಂಟರಾ? ಇಷ್ಟರಾ? ಎಂದಾಕೆ ದೂರವುಳಿಯಬಹುದಿತ್ತು. ಹೊಸ ಊರಿನಲ್ಲಿ ಮನೆತನಕ ಬಂದು ಮಾತನಾಡುತ್ತಾ ಕೂರುವ ಈ ಹೆಂಗಸಿಗೆ ನನ್ನಿಂದ ಏನಾದರೂ ಸಹಾಯದ ನಿರೀಕ್ಷೆಯಿದೆಯೆ? ನಂಬಿಸಿ ಮೋಸ ಮಾಡಿದರೇನು ಗತಿ? ಎಳೆಮಗುವನ್ನು ಇವಳ ಕೈಗಿತ್ತು ಹೇಗೆ ಹೋಗಲಿ? ಎಂದೆಲ್ಲ ಅನುಮಾನಿಸಿ ಅಮ್ಮನೂ ಚಿಪ್ಪಿನೊಳಗೆ ಸೇರಬಹುದಿತ್ತು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ

Read More

ಬದುಕಿನ ಪಯಣದಲ್ಲಿ ತಂಗುದಾಣಗಳೂ ಇರಲಿ: ಎಸ್. ನಾಗಶ್ರೀ ಅಜಯ್ ಅಂಕಣ

ನಮಗೇನು ಬೇಕು? ಒಂದು ಒಳ್ಳೆಯ ಬಿಡುವು, ನಮ್ಮದೆನ್ನುವ ಸ್ವಲ್ಪ ಸಮಯ, ಜೀವನಕ್ಕೊಂದು ಗುರಿ, ಹತ್ತಿರದವರ ಮೆಚ್ಚುಗೆ ಮತ್ತು ಅಹಂಕಾರಕ್ಕಿಂತ ವಿನಮ್ರತೆಯಲ್ಲಿ ಸುಖ ಕಾಣುವ ಮನಃಸ್ಥಿತಿ. ಪ್ರತಿದಿನವೂ ಅರ್ಧಗಂಟೆಯಾದರೂ ವ್ಯಾಯಾಮ, ನಡಿಗೆ, ಯೋಗ ಇತ್ಯಾದಿಗೆ ಸಮಯ ಮೀಸಲಿಡುವುದು, ಮರೆತುಹೋದ ಹವ್ಯಾಸಗಳೊಂದಿಗೆ ಮತ್ತೆ ಸಖ್ಯ ಬೆಳೆಸುವುದು, ಹೊಸತನ್ನು ಕಲಿಯುವುದು, ಉದ್ಯೋಗ ಮತ್ತು ವೈಯಕ್ತಿಕ ಬದುಕಿನ ನಡುವೆ ಅಂತರ ಕಾಯ್ದುಕೊಳ್ಳುವುದು ಹಾಗೂ ನಮ್ಮ ಇಂದಿನ ಬದುಕು ಹಲವರ ಕನಸೆಂಬುದನ್ನು ಮನಗಾಣುವುದು ಸಹಾಯ ಮಾಡಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಇದ್ದಷ್ಟು ಇರಲಿ…: ಎಸ್ ನಾಗಶ್ರೀ ಅಜಯ್ ಅಂಕಣ

ತೀರ ಅತಿಯೆನಿಸುವಷ್ಟು ಅಲ್ಲದಿದ್ದರೂ ನಾವೆಲ್ಲರೂ ಒಂದಿಲ್ಲೊಮ್ಮೆ ಈಗಿರುವುದೇ ಚೆಂದ ಎಂದುಕೊಳ್ಳಲು ಆಸೆಪಟ್ಟವರೇ. ಬಡತನ, ಅನಾರೋಗ್ಯ, ಅಜ್ಞಾನಗಳನ್ನು ರಮ್ಯವಾಗಿ ಚಿತ್ರಿಸುತ್ತಾ ಪರಿಶ್ರಮದಿಂದ ಮೇಲೇರಿದವರ ಸಾಧನೆಯನ್ನು ಕಡೆಗಣಿಸಿ ಮಾತನಾಡುತ್ತಾ ಹುಸಿ ಆನಂದ ಹೊಂದಿದವರೇ. ಬಹಳಷ್ಟು ಸಲ ಎದುರಿನವರ ಮೂಗಿನ ನೇರಕ್ಕೆ ಮಾತನಾಡಿ ‘ಒಳ್ಳೆಯವರಾಗಿ’ ಕಾಣುವ ಆಸೆಯೇ ಡೋಂಗಿಗಳ ಬಡಾಯಿಗೆ ಜೈಹೋ ಎನ್ನುವಂತೆ ಮಾಡಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ