ಆತಿಥ್ಯದ ಮುಖಗಳು: ಎಸ್. ನಾಗಶ್ರೀ ಅಜಯ್ ಅಂಕಣ
ಮಾತಾಡಿದರೂ ಅಂತಸ್ತು ಪ್ರದರ್ಶಿಸುವ, ತಾವೆಷ್ಟು ಅನುಕೂಲಸ್ಥರು, ಬುದ್ಧಿವಂತರು, ಜಗದ ಎಲ್ಲ ಸಮಾಚಾರ ಬಲ್ಲವರು ಎಂಬ ಒಣಪ್ರತಿಷ್ಠೆ ತೋರ್ಪಡಿಸುವ ಪ್ರಚಾರತಂತ್ರದ ಗಿಮಿಕ್ಕು ಮಾತ್ರವೇ. ಗಂಡ-ಹೆಂಡತಿ ಮನೆಯಲ್ಲಿ ಕಾದಾಡುವ ಬದಲು ಅಲ್ಲಿ ಕಣ್ಣಲ್ಲೇ ಗುರಾಯಿಸ್ತಾ, ‘ನಿಂಗಿದು ಬೇಕಿತ್ತಾ ಮಗನೆ?’ ಎಂಬ ಸಂದೇಶ ರವಾನಿಸುತ್ತಾ ಕಾಲ ತಳ್ಳಬೇಕು. ಸದ್ಯ ಗಂಟೆಗೆ ಅರವತ್ತೇ ನಿಮಿಷ ಅನ್ನಿಸುವಾಗಲೇ ತರಬೇತುಗೊಂಡ ನಾಯಿಯಂತೆ ಊಟ, ತಿಂಡಿ, ಕಾಫಿ ವಾಸನೆ ಹಿಡಿದು ಊಟದ ಆಟ ಮುಗಿಸಿ, ತಾಂಬೂಲ ಪಡೆದು ‘ಬರ್ತೀವಿ’ ಎನ್ನಬೇಕು. ’ಸಂತೋಷ’ ಎನ್ನುವರು. ಅದು ಬಂದಿದ್ದಕ್ಕೋ ಹೊರಟಿದ್ದಕ್ಕೋ ಯೋಚಿಸದೆ ಮನೆಯ ದಾರಿ ಹಿಡಿಯಬೇಕು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ
