ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್ ಅಂಕಣ
“ಕೆಲವೊಮ್ಮೆ ಈ ಗಂಡ, ಮಗು, ಸಂಸಾರ, ದುಡಿಮೆ, ಸಂಪಾದನೆ, ಕೊಂಕು ಮಾತು, ಅನಾರೋಗ್ಯ ಎಲ್ಲದರಿಂದ ಬಹಳ ದೂರ ಹೋಗಿ, ನಾನೊಬ್ಬಳೇ ಪ್ರಶಾಂತವಾಗಿ ಕೆಲಕಾಲ ಕಳೆಯಬೇಕನ್ನಿಸುತ್ತೆ. ಆದರೆ ಎಲ್ಲಿ ಹೋಗುವುದು? ಹೀಗೆ ವಾಸ್ತವ ಹಿಂಸೆಯೆನಿಸಿದಾಗೆಲ್ಲ, ಬೇಸರದಲ್ಲೇ ಕತ್ತಲಕೋಣೆಯಲ್ಲಿ ಉಳಿಯುವುದರ ಬದಲು, ಮನೆತುಂಬ ಬೆಳಕಾಗುವಂತೆ ಝಗಮಗಿಸಿ, ಸ್ನಾನ ಮಾಡಿ, ನಾನು ಹೊಸದಾಗಿ ಕೊಂಡ ಬಟ್ಟೆ ತೊಟ್ಟು, ನನಗೇ ಹೆಮ್ಮೆಯಾಗುವಷ್ಟು ಚೆಂದಕ್ಕೆ ಅಲಂಕರಿಸಿಕೊಂಡು ಅರ್ಧಗಂಟೆ ಕನ್ನಡಿಯ ಮುಂದೆ ನಗುಮುಖದಲ್ಲಿ ಕೂತಿರುತ್ತೇನೆ.”
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ