ಹಂಚಿ ಹಗೂರಾಗಿ, ಬೇಗುದಿಗಳನೆಲ್ಲ…
ಎಲ್ಲದರಲ್ಲೂ ಹುಳುಕು ಹುಡುಕುತ್ತಾ, ಗೋಳುಗುಟ್ಟುತ್ತಾ, ಆಪಾದಿಸುತ್ತಾ, ಕೊಂಕು ತೆಗೆಯುತ್ತಾ ಕೂರುವುದು ಸರಿಯಲ್ಲ. ಆದರೆ ಬದುಕೆಂದರೆ ಸಿಹಿ-ಕಹಿಗಳೆರಡೂ ಇರುವಾಗ, ಸಿಹಿಯ ಮಾತನ್ನೇ ಹಂಚುತ್ತಾ, ಕಹಿಯನ್ನೆಲ್ಲಾ ಒಳಗೇ ನುಂಗಿ ನುಂಗಿ ನಂಜುಂಡರಾಗುವುದು ನಮ್ಮ ಮೇಲೆ ನಾವೇ ಹೊರೆಸಿಕೊಳ್ಳುವ ಭಾರ. ಹತ್ತರಲ್ಲಿ ಒಂದು ಸಲವಾದರೂ ನೋವನ್ನು ನೋವಾಗಿ, ಅಳುವನ್ನು ಅಳುವಾಗಿ, ಸೋಲನ್ನು ಸೋಲಾಗಿ ತೋರಿಸಿಕೊಳ್ಳುವ ಸ್ವಾತಂತ್ರ್ಯ ನಾವು ರೂಢಿಸಿಕೊಳ್ಳಬೇಕಿದೆ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ