ಅಂತಃಕರಣದ ಹಣತೆ ಬೆಳಗುವ ಸಮಯ
ಮಕ್ಕಳು ಈಗಲ್ಲದೆ ಮತ್ಯಾವಾಗ ತಂಟೆ ಮಾಡಬೇಕು? ಇನ್ನೆಂದು ಮನಸೋ ಇಚ್ಚೆ ತಿಂದು ಕುಡಿದು ಖುಷಿಪಡಬೇಕು? ಎಂದು ಅಪ್ಪನಿಗೆ ಎದುರಾಡುತ್ತಿದ್ದ ಅವಳಿಗೆ ನಮ್ಮ ಬಾಲ್ಯ ಅವಳ ಬಾಲ್ಯದ ಕಿಟಕಿಯಾಗಿತ್ತು. ಮಕ್ಕಳನ್ನು ಓದಿಸುವ, ಬೆಳೆಸುವ, ಜವಾಬ್ದಾರಿಯಲ್ಲಿ ಮುಳುಗಿಹೋದ ಆಕೆ ಬಿಡುವು ಮಾಡಿಕೊಂಡು ಹೊಲಿಯುತ್ತಿದ್ದ ಬಟ್ಟೆ, ಹಾಕುತ್ತಿದ್ದ ರಂಗೋಲಿ, ಕಸೂತಿ, ಓದುತ್ತಿದ್ದ ಪುಸ್ತಕಗಳು ದಿನಕಳೆದಂತೆ ಕಡಿಮೆಯಾಯಿತು. ಸ್ವಂತಕ್ಕೆ ಸಮಯ ಕೊಟ್ಟುಕೊಳ್ಳಲಾಗದ ಸಾದಾ ಗೃಹಿಣಿಯಾಗಿ ಹಲವು ಕಾಲ ಕಳೆದಳು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ