Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಅಂತಃಕರಣದ ಹಣತೆ ಬೆಳಗುವ ಸಮಯ

ಮಕ್ಕಳು ಈಗಲ್ಲದೆ ಮತ್ಯಾವಾಗ ತಂಟೆ ಮಾಡಬೇಕು? ಇನ್ನೆಂದು ಮನಸೋ ಇಚ್ಚೆ ತಿಂದು ಕುಡಿದು ಖುಷಿಪಡಬೇಕು? ಎಂದು ಅಪ್ಪನಿಗೆ ಎದುರಾಡುತ್ತಿದ್ದ ಅವಳಿಗೆ ನಮ್ಮ ಬಾಲ್ಯ ಅವಳ ಬಾಲ್ಯದ ಕಿಟಕಿಯಾಗಿತ್ತು. ಮಕ್ಕಳನ್ನು ಓದಿಸುವ, ಬೆಳೆಸುವ, ಜವಾಬ್ದಾರಿಯಲ್ಲಿ ಮುಳುಗಿಹೋದ ಆಕೆ ಬಿಡುವು ಮಾಡಿಕೊಂಡು ಹೊಲಿಯುತ್ತಿದ್ದ ಬಟ್ಟೆ, ಹಾಕುತ್ತಿದ್ದ ರಂಗೋಲಿ, ಕಸೂತಿ, ಓದುತ್ತಿದ್ದ ಪುಸ್ತಕಗಳು ದಿನಕಳೆದಂತೆ ಕಡಿಮೆಯಾಯಿತು. ಸ್ವಂತಕ್ಕೆ ಸಮಯ ಕೊಟ್ಟುಕೊಳ್ಳಲಾಗದ ಸಾದಾ ಗೃಹಿಣಿಯಾಗಿ ಹಲವು ಕಾಲ ಕಳೆದಳು.
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

Read More

ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?

ಇರುವ ಚೆಂದವನ್ನು ಕಾಪಾಡಿಕೊಳ್ಳಬೇಕೆಂಬ ಒತ್ತಡ ಸೃಷ್ಟಿಸುವ ತಾಕಲಾಟ ಬಲ್ಲೆ. ಒಂದೇ ಘಟ್ಟದಲ್ಲಿ ಹೆಚ್ಚು ಕಾಲ ಇರಲಾಗದು. ನಿಧಾನಕ್ಕೆ ಈ ಜತನ ಮಾಡುವ ಉಸಾಬರಿ ಸಾಕೆನ್ನಿಸಿತು. ಹೊರಗೆ ‘ಕಾಣುವ’ ಚೆಂದಕ್ಕಿಂತ ನಾನು ಬೇರೆ ಅನ್ನಿಸಿತು. ಎಷ್ಟೇ ಕಷ್ಟಪಟ್ಟರೂ ಕಾಲನ ಹೊಡೆತ ತನ್ನ ಕೆಲಸ ಮಾಡಿಯೇ ತೀರುತ್ತದೆ. ಕಾಲದೊಂದಿಗೆ ಹೋರಾಡುವುದಕ್ಕಿಂತ ನನ್ನ ವ್ಯಕ್ತಿತ್ವ, ಪ್ರತಿಭೆ, ಬುದ್ಧಿ, ಮನಸ್ಸಿನ ಜೊತೆ ಗುದ್ದಾಡುತ್ತಾ ಬೆಳೆಯುವುದರಲ್ಲಿ ಬದುಕಿನ ಸೌಂದರ್ಯವಿದೆ. ಈ ಸಮಯ ಮತ್ತೆ ಬರಲಾರದು. ಈ ಅವಕಾಶ ಮತ್ತೆ ಸಿಗಲಾರದು. ಹಠಕ್ಕೆ ಬಿದ್ದಂತೆ ಸಂಗೀತ ಮುಂದುವರೆಸಿದೆ.
ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

Read More

ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…

ಕೆಲವು ಕೆಟ್ಟ ಸನ್ನಿವೇಶಗಳಲ್ಲಿ ಈ ಪ್ರಪಂಚವೇ ನಮ್ಮ ವಿರುದ್ಧ ನಿಂತಿದೆಯೇನೋ ಎನ್ನಿಸುವ ಹೊತ್ತಿನಲ್ಲಿ ಇಂತಹ ಹಚ್ಚನೆಯ ಹಿತವನ್ನು ಸವರಿದ ಸಂದರ್ಭಗಳನ್ನು ಮೆಲುಕು ಹಾಕಬೇಕು. ಬಹುಶಃ ಈ ಪ್ರಪಂಚ ನಡೆಯುತ್ತಿರುವುದೇ ಇಂತಹ ಅಜ್ಞಾತ ಕೈಗಳ ಅಭಯದಿಂದ. ಪ್ರತಿದಿನವೂ ಸಿಗುವ ಅವಕಾಶ ಇರುವ, ಸಂಬಂಧಗಳಿಂದ ಅಂಟಿಕೊಂಡ, ಸ್ನೇಹ-ವ್ಯವಹಾರ-ವಿಶ್ವಾಸ- ಪರಿಚಯದ ಮುಸುಕು ಹೊದ್ದ ದಿನನಿತ್ಯದ ಕೊಡು-ಕೊಳ್ಳುವಿಕೆಗೆ ಒಂದು ತೂಕವಾದರೆ, ಮತ್ತೊಮ್ಮೆ ಸಿಗುವ ಸಾಧ್ಯತೆಯೇ ಕ್ಷೀಣವಾಗಿರುವ ಅಪ್ಪಟ ಮನುಷ್ಯಸಂಬಂಧವಾಗಿ ಎದುರಾಗುವ ಉಪಕಾರಗಳದ್ದು ಮತ್ತೊಂದು ವಜನು.

Read More

ಕಷ್ಟವನ್ನೇ ಬದುಕಿನ ಗುರುವೆನ್ನಬಹುದೇ?

ಕಷ್ಟ ಸುಖ ಮನಸ್ಸಿನ ಸ್ಥಿತಿ ಅಷ್ಟೇ. ಈಗಲೂ ಮುಪ್ಪು ಕಷ್ಟ ಅಂದ್ಕೊಂಡ್ರೆ ಕಷ್ಟ. ಸುಖ ಅಂದ್ಕೊಂಡ್ರೆ ನಿರಾಳ. ಅವತ್ತು ಜನ ಕಪ್ಪಗಿದ್ದೀನಿ, ವಿಧವೆ, ನಯ-ನಾಜೂಕಿಲ್ಲ, ನಾಲ್ಕು ಮಕ್ಕಳ ಜವಾಬ್ದಾರಿ ಹಾಗೆ ಹೀಗೆ ಅಂತ ಸಾವಿರ ಮಾತಾಡಿದ್ದರು. ನಾನು ಮಾತಾಡಲಿಲ್ಲ. ಇವತ್ತು ಯಾರಿಗೂ ಉತ್ತರ ಕೊಡುವ ಗಜರಿಲ್ಲ. ನನಗೆ ನನ್ನ ಬದುಕಿನ ಬಗ್ಗೆ, ಬದುಕಿದ ರೀತಿಯ ಬಗ್ಗೆ ಹೆಮ್ಮೆಯಿದೆ. ನಿಶ್ಚಿಂತೆಯಿಂದ ಕಣ್ಮುಚ್ಚುತ್ತೀನಿ. ಇನ್ನೇನು ಬೇಕು?” ಎಂಭತ್ತೇಳು ವರ್ಷದ ಸುಕ್ಕುಗಟ್ಟಿದ ಮೈ, ಗಟ್ಟಿಮೂಳೆಯೊಂದೇ ಕಾಣುವ ಪುಟ್ಟ ದೇಹವನ್ನು ನೇರವಾಗಿಟ್ಟುಕೊಂಡು ಗಟ್ಟಿದನಿಯಲ್ಲಿ ಹೀಗೆ ಗುಡುಗುವಾಗ ಹೃದಯತುಂಬಿ ಬರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಅಂಕಣ “ಲೋಕ ಏಕಾಂತ”

Read More

ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ