Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ…

“ಸುರಿದ ಹನಿಗೆ ದಾರಿಗಳು ಅಳಿಸಿಹೋಗಿರಬಹುದು
ಹೊಸ ಹೆಜ್ಜೆಗಳನು
ಕಿತ್ತಿಡು
ಹೊಸ ದಾರಿಯಲಿ ಹೊಸದೆ ಇರುತ್ತದೆ
ಮಳೆಗೆ ನಿನ್ನದೊಂದು‌ ಧನ್ಯವಾದ ಹೇಳು..”-

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಗಲಿಗೊಂದು ದನಿಯಿದೆ
ಇರುಳಿಗೊಂದು ನರಳಿಕೆಯಿದೆ
ಉರುಳುರುಳುವಾಗ
ಶಬ್ದಗಳು ಕಳಚಿ ಕಳಚಿ ಬಿದ್ದು
ನಡೆಯುವ ಹಾದಿಯಲ್ಲಿ ಬಿದ್ದು
ಅಂಗಾಲು ಚುಚ್ಚುತ್ತವೆ..”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಮೊಳೆವ ಬೀಜಕ್ಕೂ ಇದೆ
ಒಂದು ಬಿಕ್ಕಳಿಕೆ
ಚಿಗುರ ತುಳಿಸಿಕೊಂಡ ಎಳೆ
ಎಸಳಿಗೂ ಇದೆ ನೋವ
ಕದಲಿಕೆ
ಹಾದಿ ಬದಿಯಲಿ ಬಿದ್ದ ಈ ಶಬ್ದಗಳು
ಎಷ್ಟೊಂದು ಅನಾಥ..”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಮಳೆ ದೇವರು ಬರೆದ ಕವಿತೆ..

ಮಳೆಯು ಮಳೆಗಾಲವನು ತೊರೆದಿದೆ. ಈಗ ಎಲ್ಲಾ ತಿಂಗಳಲ್ಲಿ ಆತ ಒಮ್ಮೆಯಾದರೂ ಇಣುಕುವ ಅತಿಥಿ. ಅಲ್ಲೆಲ್ಲೊ ಸಮುದ್ರದ ಮೇಲೆ ಆಗಾಗ್ಗೆ ನೂರೆಂಟು ಭಾರಗಳು. ಮಳೆಗೆ ಅಲ್ಲಲ್ಲಿ ಎಕ್ಸ್ಟ್ರಾ ಡ್ಯೂಟಿ. ತರಗತಿಯಲ್ಲಿ ನೋಡಿ ಮಕ್ಕಳೇ ಕಾಲಗಳು ಮೂರು, ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅಂದೆ. ಒಬ್ಬ ಪೋರ ಕಿಕೀಕ್ ಅಂತ ನಕ್ಕು ಹೇಳಿದ “ಬಿಸಿಲು ಇದ್ದಾಗ ಬರುತ್ತೆ ಚಳಿ‌ ಇದ್ದಾಗಲೂ ಬರುತ್ತಲ್ಲ” ಅಂತ. “ಹೌದು ಮಳೆಗೆ ಈಗ ವಿಶೇಷ ಸೀಸನ್ ಪಾಸ್ ಸಿಕ್ಕಿದೆ” ಎಂದೆ. ಹೇಳು ಮಳೆಯೆ ಮಕ್ಕಳ ಮುಂದೆ ಹೀಗೆ ನೀನು ಅವಮಾನಿಸುವುದು ಸರಿಯೇ..?
ಸದಾಶಿವ್ ಸೊರಟೂರು ಬರಹ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ