Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.

ಸಂಜೋತಾ ಪುರೋಹಿತ್ ಅನುವಾದಿಸಿದ ರಾಬರ್ಟ್‌ ಬಾರ್ರ್ ಕತೆ

ಹ್ಯಾಂಗಿಂಗ್ ಒವರ್‌ಲುಕ್ ತಲುಪಲು ಕೆಲವೇ ಹೆಜ್ಜೆಗಳು ಬಾಕಿಯಿದ್ದವು. ಅದನ್ನು ತಲುಪುವವರೆಗೂ ಆಕೆ ‘ನಾವು ಒಬ್ಬರಿಗೊಬ್ಬರು ತಳುಕು ಹಾಕಿಕೊಂಡಿದ್ದೇವೆ’ ಎಂದು ಮತ್ತೆ ಮತ್ತೆ ತನಗೊಬ್ಬಳಿಗೇ ಕೇಳಿಸುವಂತೆ ಹೇಳಿಕೊಂಡಳು. ಜಾನ್ ಬೋಡಮ್ಯಾನ್ ಶಿಥಿಲವಾಗಿದ್ದ ಆ ಗೋಡೆಯ ಮೇಲೆ ಕುಳಿತ. ಕೈಯ್ಯಲ್ಲಿದ್ದ ಕೋಲನ್ನು ಬಂಡೆಯ ಮೇಲಿಟ್ಟು ಆಕೆ ಅತ್ತಿಂದಿತ್ತ ಓಡಾಡಿದಳು. ಅವಳ ಹೆಜ್ಜೆಗಳಲ್ಲಿ ಭಯ ಇಣುಕುತ್ತಿತ್ತು.
ಸಂಜೋತಾ ಪುರೋಹಿತ್ ಅನುವಾದಿಸಿದ ಸ್ಕಾಟಿಶ್‌- ಕೆನಡಿಯನ್‌ ಕತೆಗಾರ ರಾಬರ್ಟ್‌ ಬಾರ್ರ್ ಕತೆ “ಒಂದು ಆಲ್ಪೈನ್‌ ವಿಚ್ಛೇದನ” ನಿಮ್ಮ ಓದಿಗೆ

Read More

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…

Read More

ಬರಹ ಭಂಡಾರ