Advertisement

ಡಾ. ವಿನತೆ ಶರ್ಮ

ಮಿಂಚುಳಗಳು ಮತ್ತು ಕಲ್ಬಾವಿ: ಎಸ್. ಗಂಗಾಧರಯ್ಯ ಅನುಭವ ಕಥನ

ಇವರು ಯಾರೊಬ್ಬರನ್ನು ಬೈದದ್ದಾಗಲಿ, ಯಾರ ಮೇಲೆ ಆಗಲಿ ಸಿಟ್ಟು ಮಾಡಿಕೊಂಡಿದ್ದನ್ನಾಗಲಿ ನಾನು ಯಾವತ್ತೂ ಕಂಡಿರಲಿಲ್ಲ. ಚಂದದ ನಗು ಹಾಗೂ ಮೌನ ಇವರ ಬಲು ದೊಡ್ಡ ಶಕ್ತಿಗಳಾಗಿದ್ದವು. ಇನ್ನೊಬ್ಬರಿಗೆ ಭಾರವಾಗದಂತೆ ಬದುಕಬೇಕು ಅಂತ ಯಾವಾಗಲೂ ಹೇಳುತ್ತಿದ್ದ ಗೋವಿಂದಪ್ಪ ತನ್ನ ಕೈಲಾದ ಕೆಲಸವನ್ನು ಮಾಡುತ್ತಿದ್ದರು. ಅಂತೆಯೇ ಯಾರಾದರೂ ಯಾವುದಾದರೂ ಕೆಲಸವನ್ನು ಹೇಳಿದರೆ ಒಂಚೂರೂ ಬೇಸರವಿಲ್ಲದೆ ಪಾಲಿಸುತ್ತಿದ್ದರು. ಒಂಥರಾ ನಿರುಮ್ಮಳ ಜೀವಿ. ಆದರೆ ಇಂಥ ಗೋವಿಂದಪ್ಪ ನಿದ್ದೆಗೆ ಜಾರಿದಾಗ ಮಾತ್ರ ಸಹಿಸಲಸಾಧ್ಯದ ವ್ಯಕ್ತಿಯಾಗಿಬಿಡುತ್ತಿದ್ದರು. ಏಕೆಂದರೆ ಇವರು ಹೊಡೆಯುತ್ತಿದ್ದ ಗೊರಕೆಯ ಸದ್ದು ಅವರು ಮಲಗಿದ್ದ ಮನೆಯವರಿಗೆ ಮಾತ್ರವಲ್ಲ ಸುತ್ತಲ ಯಾವ ಜೀವಿಯನ್ನೂ ಬಡಪಟ್ಟಿಗೆ ಬಿಡುತ್ತಿರಲಿಲ್ಲ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ಜೇನು ಪೊಟರೆಯ ಹಾವು, ಕ್ವಾಕ್ ಡಾಕ್ಟರ್ ಮತ್ತವಳ ಹಾವು ಹಿಡಿವ ಗಂಡ: ಎಸ್. ಗಂಗಾಧರಯ್ಯ ಅನುಭವ ಕಥನ

ಅಲ್ಲಿನ ಪರಿಸ್ಥಿಯನ್ನು ಅವಲೋಕಿಸಿ ನಾನು ಹಾವು ಹಿಡಿಯುವಾಗ ಮನೆಯೊಳಕ್ಕೆ ಯಾರೂ ಬರಬಾರದೆಂದೂ ಬಾಗಿಲು ಹಾಕಿಕೊಂಡಿದ್ದಾನೆ. ಅದಾದ ಅರ್ಧ ಗಂಟೆಗೆ ಕೈಯಲ್ಲಿ ಮಾರುದ್ದದ ನಾಗರ ಹಾವನ್ನು ಹಿಡಿದು ಹೊರ ಬಂದು ನೆರೆದಿದ್ದ ಜನರಿಗೆಲ್ಲಾ ಹಾವನ್ನು ತೋರಿಸಿ ಶಬ್ಬಾಶ್‌ಗಿರಿಯನ್ನು ಪಡೆದು ಐನೂರು ರೂಪಾಯಿಯನ್ನೂ ನಾಲ್ಕೈದು ಸೇರು ರಾಗಿಯನ್ನೂ ಇಸುಕಂಡು ಬಂದಿದ್ದಾನೆ. ನಿಟ್ಟುಸಿರುಬಿಟ್ಟ ಮನೆಯವರು ಬಾಣದ ದೇವರ ಹಟ್ಟಿಯ ಜುಂಜಪ್ಪ ದೇವರಿಗೆ ಹರಕೆ ಕಟ್ಟಿಕೊಂಡು ಮನೆಯೊಳಕ್ಕೆ ಹೋಗಿದ್ದಾರೆ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಆರನೆಯ ಕಂತು

Read More

ಕೆಮ್ಮಣ್ಣು ಜೀರಿಂಬೆ ಮತ್ತು ಚಿಕ್ಕವ್ವನೆಂಬ ಎಮ್ಮೆ: ಎಸ್. ಗಂಗಾಧರಯ್ಯ ಅನುಭವ ಕಥನ

ನನಗೀಗ ಏನು ಮಾಡಬೇಕೆಂಬುದು ತಿಳಿಯದೆ ಪೂರಾ ಗಾಬರಿಗೊಳಗಾದೆ. ಅಂಥ ಗಾಬರಿಯಲ್ಲೂ ಚಿಕ್ಕವ್ವನ ಜಾರುತ್ತಿದ್ದ ಬಾಲವನ್ನೇ ಆಸರೆಯಾಗಿಸಿಕೊಂಡು ಅವಳ ಬೆನ್ನ ಮೇಲೆ ಕೂತು ಬಚಾವಾಗುವ ಆಸೆಯಿಂದ ಹಿಡಿದಿದ್ದ ಬಾಲವನ್ನೂ ಕೈ ಬಿಟ್ಟು ಮೆಲ್ಲಗೆ ಅವಳ ಮೈಯ್ಯ ಹತ್ತಿರ ಸಾಗಿದೆ. ಅದು ನಾನು ಮಾಡಿಕೊಂಡ ದೊಡ್ಡ ಯಡವಟ್ಟಾಗಿತ್ತು. ಮೊದಲೇ ನೊಣ ಕೂತರೆ ಜಾರುವಷ್ಟು ನುಣುಪಾಗಿದ್ದ ಅವಳ ಮೈ ನೀರಿನೊಳಗಿದ್ದುದರಿಂದ ಅದಕ್ಕೆ ಮತ್ತಷ್ಟು ನುಣುಪು ಬಂದು ಮತ್ತಷ್ಟು ಜಾರುತ್ತಾ ನಾನು ಎಷ್ಟೇ ಪಟ್ಟು ಹಾಕಿದರೂ ಆ ಪಟ್ಟುಗಳೆಲ್ಲಾ ಮಕಾಡೆ ಮಲಗಿದವು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ಸೇದುವಬಾವಿ, ಮೂಲೆಯ ಮಡಕೆ ಮತ್ತು ಮರದಡಿಯ ಮುದುಕ: ಎಸ್. ಗಂಗಾಧರಯ್ಯ ಅನುಭವ ಕಥನ

ಆತುರಗಾಳಿ ಶಂಕರ ತನ್ನ ಜೇಬುಗಳು ಆಗಲೇ ತುಂಬಿರುವುದಾಗಿಯೂ ಕೆಳಗಿಳಿದು ಹೋಗಿ ರಸ್ತೆಯಲ್ಲಿ ನಮಗಾಗಿ ಕಾಯುತ್ತಿರುವುದಾಗಿಯೂ ಪಿಸುಗುಟ್ಟಿದ. ಹಂಗೆ ಪಿಸುಗುಟ್ಟಿದವನು ನಮ್ಮಿಬ್ಬರ ಮಾತಿಗೂ ಕಾಯದೆ ಕೊಂಬೆಯ ಮೇಲಿಂದ ಕೆಳಗೆ ನೆಗೆಯಲು ಮುಂದಾದ. ಆಗ ಅವನ ಚೆಡ್ಡಿ ಅವನು ಕೂತಿದ್ದ ಕೊಂಬೆಯ ಗೂಟದಂಥ ಮೋಟಿಗೆ ಸಿಕ್ಕಿಕೊಂಡುಬಿಟ್ಟಿತ್ತು. ಯಾವಾಗ ಅವನು ದಬುಕ್ಕಂತ ನೆಗೆದನೋ ಅವನ ಚೆಡ್ಡಿ ಪರಪರನೆ ಹರಿದು ಹೋದದ್ದಲ್ಲದೆ ಆಯ ತಪ್ಪಿ ಕೆಳಗೆ ಮಲಗಿದ್ದ ಕಿವುಡಜ್ಜನ ಮೇಲೆ ದೊಪ್ಪನೆ ಬಿದ್ದು ಬಿಟ್ಟ.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”

Read More

ಅಲೆಮಾರಿ ಗುಡಾರಗಳು, ಮುಂಗುಸಿ ಭದ್ರ ಮತ್ತು ಮಂಚಿಗೆ: ಎಸ್. ಗಂಗಾಧರಯ್ಯ ಅನುಭವ ಕಥನ

ಭದ್ರ ಬಂದವನೇ ಕೈಯ್ಯಲ್ಲಿದ್ದ ಪುಟ್ಟ ಬುಡುಬುಡಿಕೆಯನ್ನು ಚೆಡ್ಡಿ ಜೇಬೊಳಕ್ಕೆ ತುರುಕಿಕೊಂಡು `ಎದ್ದಾಳಿ ಮತ್ತೆ ಬೇಗ’ ಅಂತ ನಮ್ಮನ್ನು ಏಳಿಸಿಕೊಂಡು ಶೆಟ್ಟೀಕೆರೆಯ ಕೆರೆಯ ಅಂಗಳಕ್ಕೆ ಕರೆದೊಯ್ದು ಅಲ್ಲಿ ತಾವರೆ ಬೀಜಗಳನ್ನು ಹುಡುಕತೊಡಗಿದ. ಭದ್ರನೊಂದಿಗೆ ನಾವೂ ಕೈ ಜೋಡಿಸಿದೆವು. ಕೆರೆಯ ಅಂಗಳದಲ್ಲಿ ಬಿಟ್ಟಿದ್ದ ಬಿರಿಗಳ ನಡುವಲ್ಲಿ ಗೋಚರಿಸುತ್ತಿದ್ದ ತಾವರೆ ಬೀಜಗಳನ್ನು ಮೂವರೂ ಜೇಬಿಗಿಳಿಕೊಂಡು ಮತ್ತೆ ಮಂಚಿಗೆಯತ್ತ ಬಂದೆವು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಮೂರನೆಯ ಕಂತು

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ