Advertisement

ಎಚ್. ಗೋಪಾಲಕೃಷ್ಣ

ಊರು ಕೇರಿ ಬಿಟ್ಟು ಬಂದು…: ಶುಭಶ್ರೀ ಭಟ್ಟ ಬರಹ

ತುಸುವೂ ಪರಿಚಯವೇ ಇಲ್ಲದ ಹೊಸ ಬೀದಿಯ ಅಪರಿಚಿತ ಸದ್ದಿಗೆ, ಆ ರಾತ್ರಿಯ ನೀರವತೆಗೆ, ಪರಿಮಳವಿಲ್ಲದ ಹಗಲಿಗೆ, ನಮ್ಮವರೇ ಕಾಣಿಸದ ಆಗಂತುಕ ರಸ್ತೆಯ ಚಲನೆಗೆ ವಿನಾಕಾರಣ ನಿಟ್ಟುಸಿರು ಉಮ್ಮಳಿಸಿ ಬರುತ್ತಿತ್ತು. ಅಡುಗೆ ಮನೆಯ ಬಿಡುವಿಲ್ಲದ ಕೆಲಸ, ಮಾಡಲೇ ಬೇಕಾದ ಕೆಲವು ಮನೆ ಕೆಲಸ, ಆಫೀಸಿನ ಹೊಸ ಪ್ರಾಜೆಕ್ಟಿನ ಶೆಡ್ಯೂಲ್, ಮಗನನ್ನು ಹೊಸ ಶಾಲೆಗೆ ರೂಢಿ ಮಾಡಿಸಬೇಕಾದ ಅಗತ್ಯ, ಬಿಡಲಾರದ ಬರವಣಿಗೆ-ಓದು ಹೀಗೆ ದಿನದ ಅರೆ ಕ್ಷಣವನ್ನೂ ವ್ಯಯಿಸದೆ ಎಲ್ಲವನ್ನೂ ನಿಭಾಯಿಸುತ್ತಾ ದಿನ ಕಳೆಯುತ್ತಿತ್ತು. ಆದರೂ ಕೆಲವೊಮ್ಮೆ ಸಂಜೆಯಾಗುವಷ್ಟರಲ್ಲಿ ಖಾಲಿತನ ಆವರಿಸಿಕೊಳ್ಳುತ್ತಿತ್ತು.
ಮಹಾನಗರದ ಭಾಗವಾಗಿ ವಾಸಿಸುವ ಅನುಭವದ ಕುರಿತು ಶುಭಶ್ರೀ ಭಟ್ಟ ಬರಹ ನಿಮ್ಮ ಓದಿಗೆ

Read More

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ