ಊರು ಕೇರಿ ಬಿಟ್ಟು ಬಂದು…: ಶುಭಶ್ರೀ ಭಟ್ಟ ಬರಹ
ತುಸುವೂ ಪರಿಚಯವೇ ಇಲ್ಲದ ಹೊಸ ಬೀದಿಯ ಅಪರಿಚಿತ ಸದ್ದಿಗೆ, ಆ ರಾತ್ರಿಯ ನೀರವತೆಗೆ, ಪರಿಮಳವಿಲ್ಲದ ಹಗಲಿಗೆ, ನಮ್ಮವರೇ ಕಾಣಿಸದ ಆಗಂತುಕ ರಸ್ತೆಯ ಚಲನೆಗೆ ವಿನಾಕಾರಣ ನಿಟ್ಟುಸಿರು ಉಮ್ಮಳಿಸಿ ಬರುತ್ತಿತ್ತು. ಅಡುಗೆ ಮನೆಯ ಬಿಡುವಿಲ್ಲದ ಕೆಲಸ, ಮಾಡಲೇ ಬೇಕಾದ ಕೆಲವು ಮನೆ ಕೆಲಸ, ಆಫೀಸಿನ ಹೊಸ ಪ್ರಾಜೆಕ್ಟಿನ ಶೆಡ್ಯೂಲ್, ಮಗನನ್ನು ಹೊಸ ಶಾಲೆಗೆ ರೂಢಿ ಮಾಡಿಸಬೇಕಾದ ಅಗತ್ಯ, ಬಿಡಲಾರದ ಬರವಣಿಗೆ-ಓದು ಹೀಗೆ ದಿನದ ಅರೆ ಕ್ಷಣವನ್ನೂ ವ್ಯಯಿಸದೆ ಎಲ್ಲವನ್ನೂ ನಿಭಾಯಿಸುತ್ತಾ ದಿನ ಕಳೆಯುತ್ತಿತ್ತು. ಆದರೂ ಕೆಲವೊಮ್ಮೆ ಸಂಜೆಯಾಗುವಷ್ಟರಲ್ಲಿ ಖಾಲಿತನ ಆವರಿಸಿಕೊಳ್ಳುತ್ತಿತ್ತು.
ಮಹಾನಗರದ ಭಾಗವಾಗಿ ವಾಸಿಸುವ ಅನುಭವದ ಕುರಿತು ಶುಭಶ್ರೀ ಭಟ್ಟ ಬರಹ ನಿಮ್ಮ ಓದಿಗೆ