ಪ್ರಸ್ತುತ ಕಾಲಘಟ್ಟ ಮತ್ತು “ಬೆಂಕಿಯ ನೆರಳು”: ಎನ್.ಎಸ್. ಚಿದಂಬರರಾವ್ ಕಾದಂಬರಿಯ ಕುರಿತು ಸಿಂಧೂರಾವ್ ಟಿ. ಬರಹ
ಎಲ್ಲಾ ಕಾಲದಲ್ಲೂ ತಮ್ಮ ತಮ್ಮ ಪರಿಸ್ಥಿತಿಗಳಲ್ಲಿ ಸ್ವತಂತ್ರ ಆಲೋಚನೆ ಮತ್ತು ನಡವಳಿಕೆ ತೋರುವುದಕ್ಕೆ ಎಲ್ಲ ಯುವಜನಾಂಗವೂ ಆಶಿಸುತ್ತಲೆ ಇರುತ್ತದೆ. ಅದು ಸಹಜ ಮತ್ತು ಹಾಗೇ ಇರಬೇಕಾದ್ದು. ಕಾಲಕ್ಕೆ ತಕ್ಕಂತೆ ಅವರ ಅಭಿವ್ಯಕ್ತಿಗಳಿಗೆ ನಡವಳಿಕೆಗಳಿಗೆ ಕಡಿವಾಣಗಳು ಬಿಗಿಯಾಗಿ, ಸಡಿಲಾಗಿ, ಉದುರಿಹೋಗಿ ಎಲ್ಲಾ ಆಗಿದೆ. ಈ ಸ್ಥಿತ್ಯಂತರದ ಕಾಲವನ್ನು ಅವರು ಆತ್ಮವಿಶ್ವಾಸ, ಓದು, ಆರ್ಥಿಕ ಸ್ವಾತಂತ್ರ್ಯ ಇದ್ದಾಗ ಹೇಗೆ ನಿಭಾಯಿಸುತ್ತಾರೆ ಎಂಬುದು ಯಶಸ್ಸು ಅಥವಾ ದುರಂತದ ಪರಿಣಾಮವನ್ನು ತಂದಿಡುತ್ತದೆ. ಓದು ಬರಿದೆ ಡಿಗ್ರಿಗಳಾದಾಗ, ಕೆಲಸದ ಪದಕಗಳಾದಾಗ ಏನಾಗುತ್ತದೆ ಎಂಬ ಪರಿಣಾಮವನ್ನು ನೋಡುತ್ತಲೇ ಇದ್ದೇವೆ.
ದಿವಂಗತ ಎನ್.ಎಸ್. ಚಿದಂಬರರಾವ್ ಅವರ “ಬೆಂಕಿಯ ನೆರಳು” ಕಾದಂಬರಿಯನ್ನು ಪುಸ್ತಕ ಮನೆ ಪ್ರಕಾಶನ ಮರುಮುದ್ರಿಸಿದ್ದು, ಈ ಕೃತಿಯ ಕುರಿತು ಸಿಂಧುರಾವ್ ಟಿ. ಬರಹ ನಿಮ್ಮ ಓದಿಗೆ

