Advertisement

ನಾರಾಯಣ ಯಾಜಿ

ಇದು ವಾತ್ಸಲ್ಯದ ಒಸಗೆ: ಡಾ. ರಾಜಲಕ್ಷ್ಮಿ ಕೃತಿಯ ಕುರಿತು ಸುಧಾ ಆಡುಕಳ ಬರಹ

ಬೆರಳ ತುದಿಯಲ್ಲಿ ನೂರಾರು ಅರಿವಿನ ಹರಹುಗಳು ಹರಡಿಕೊಳ್ಳುವ ಕಾಲದಲ್ಲಿ ಇಂತಹ ಮಾಹಿತಿಗಳು ನಮಗೆ ಬೇಕೆ? ಎಂದು ಪ್ರಶ್ನಿಸಿಕೊಂಡರೆ ಎಂದಿಗಿಂತಲೂ ಇಂದು ಈ ರೀತಿಯ ಪುಸ್ತಕಗಳು ಹೆಚ್ಚು ಅವಶ್ಯಕ ಎನಿಸುವುದು. ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ ಎಲ್ಲರೂ ಸ್ವಯಂ ವೈದ್ಯರಂತೆ ವರ್ತಿಸುತ್ತಿದ್ದಾರೆ. ಅಂತರ್ಜಾಲವೆಂಬ ಆಕಾಶದಲ್ಲಿ ತುಂಬಿರುವ ಮಾಹಿತಿಗಳಲ್ಲಿ ಸತ್ಯಕ್ಕಿಂತಲೂ ಸುಳ್ಳಿನ ವೈಭವೀಕರಣವೇ ಹೆಚ್ಚು ತುಂಬಿದೆ. ಅವುಗಳ ಮೊರೆಹೋಗಿ ತಪ್ಪು ಜಾಲಗಳಲ್ಲಿ ಇಂದಿನ ಕಿಶೋರಿಯರು ಸಿಲುಕಿರುವ ಎಷ್ಟೋ ಉದಾಹರಣೆಗಳು ನಮ್ಮ ಎದುರಿಗಿವೆ. ತಿಳಿದವರು, ತಿಳಿಯದವರಿಗೆ, ತಿಳಿಯುವಂತೆ ತಿಳಿಸಿದರೆ ಮಾತ್ರ ಅದು ‘ತಿಳುವಳಿಕೆ’ ಅನಿಸಿಕೊಳ್ಳುತ್ತದೆ.
ಡಾ. ರಾಜಲಕ್ಷ್ಮಿ ಬರೆದ “ವಾತ್ಸಲ್ಯದ ಒಸಗೆ” ಕೃತಿಯ ಕುರಿತು ಸುಧಾ ಆಡುಕಳ ಬರಹ

Read More

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ.
ಸುಧಾ ಆಡುಕಳ ಬರೆದ ಕತೆ “ಆರೂವರೆ ಅಡಿಯ ಮನುಷ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಆ ಹೊಳೆವ ಕಂಗಳು…: ಸುಧಾ ಆಡುಕಳ ಅಂಕಣ

ಅದೇನು ಜಾದೂ ನಡೆಯಿತೋ ತಿಳಿಯದು, ಅಲ್ಲಿಂದ ತಿರುಗಿ ಬಂದ ಮಂಜಿಯ ಅಪ್ಪ ಗಡುಸಾಗಿ ಮಾತನಾಡತೊಡಗಿದ, “ಮಗಳು ನಂದು, ಏನು ಮಾಡಬೇಕಂತ ನಂಗೊತ್ತದೆ. ನೀವು ಇನ್ನೂ ಮೀಸೆ ಸರಿಯಾಗಿ ಬರದಿರೋರೆಲ್ಲ ಕಾನೂನು ಮಾತಾಡೂದು ಬ್ಯಾಡ. ಅವಳ ದೇಹ ಬಿಡುಗಡೆಗೆ ಕಾಯ್ತದೆ. ನಮ್ಮ ಕುಟುಂಬದ ದೆಯ್ಯಗಳು ಅವಳನ್ನು ಕಳಿಸಿಕೊಡು ಅಂತ ಕೂಗ್ತಿವೆ. ನೀವು ಪೋಲೀಸು, ಕಾನೂನು ಅಂತ ವರಾತ ಸುರುಮಾಡಿ ಅವಳ ದೇಹ ಕೊಳೆಯೂ ಹಾಗೆ ಮಾಡಬೇಡಿ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ