Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಸುಮಾರು ಹೊತ್ತಿನಲ್ಲಿ ಮೊದಲು ಮಾತನಾಡಿಸಿದ ಹೆಂಗಸೇ ಹೊರಬಂದು, “ಬನ್ನಿ ಒಳಗೆ. ನಿಮಗೆ ಬಿಸಿ, ಬಿಸಿ ಚಾ ಕೊಡುವೆ.” ಎಂದಳಾದರೂ ಮಾತು ಮುಗಿಸುವಾಗ ಕಣ್ಣು ಕೆಂಡದಂತೆ ಹೊಳೆಯುತ್ತಿತ್ತು. ನಡುಮನೆಯಲ್ಲಿರುವ ಎರಡು ಕತ್ತಲೆಯ ಕೋಣೆಯನ್ನು ದಾಟಿ ಅಡುಗೆಮನೆಗೆ ಕಾಲಿಟ್ಟಿದ್ದೇ ಸೋಮಣ್ಣ ಬೆಚ್ಚಿಬಿದ್ದ! ಕಟ್ಟಿಗೆಯ ಒಲೆಯಲ್ಲಿ ಸೌದೆಯ ಬದಲು ತನ್ನ ಕಾಲನ್ನೇ ಒಟ್ಟಿ ಅಲ್ಲವಳ ಸೊಸೆ ಹಾಲು ಕಾಯಿಸುತ್ತಿದ್ದಳು!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಪ್ರಪಂಚದಷ್ಟೇ ಪುರಾತನವಾದ ಪ್ರಶ್ನೆಗಳಿಗೆ ಉತ್ತರದ ಹುಡುಕಾಟ: ಸುಧಾ ಆಡುಕಳ ಮಾತುಗಳು

ಅನೇಕ ದಶಕಗಳ ಹಿಂದೆ ಹೀಗೆ ಬಿಸಿಲಲ್ಲಿ ಕುಳಿತು ಮಾತನಾಡಿದ ಬಸುರಿಯರ ಮಕ್ಕಳೀಗ ಸಮಾಜವೆಂಬ ಇರುವೆ ಸಾಲಿನ ಭಾಗವಾಗಿಯೂ, ತಮ್ಮದೇ ಸ್ವಾತಂತ್ರ್ಯದ ಹಾದಿಯನ್ನು ಹುಡುಕಿಕೊಂಡು, ತಾವಿರುವೆಡೆಯಲ್ಲೆಲ್ಲಾ ಪ್ರೀತಿಯ ಧಾರೆಯನ್ನೇ ಹಂಚುತ್ತಾ ಸಾಗಿದ್ದಾರೆ. ಒಡಲೊಳಗೆ ಮಗುವನ್ನು ಹೊತ್ತ ತಾಯಂದಿರ ಬೇಗೆ ಮಾತ್ರ ಎಷ್ಟೇ ಕಾಲ ಸರಿದರೂ ಹೀಗೆಯೇ ಮುಂದುವರೆಯುವುದೇನೋ ಎಂದು ಅನಿಸುತ್ತಲೇ ಇರುತ್ತದೆ. ಹಾಗೆ ನನ್ನ ಮಗುವಿಗೆ ನಾನೇನಾದರೂ ಕಥೆಯನ್ನು ಹೇಳುವಂತಿದ್ದರೆ ಮೇಲೆ ಬರೆದ ಕಥೆಯನ್ನು ಹೇಳುತ್ತಿದ್ದೆ ಮತ್ತು ಕೊನೆಯಲ್ಲಿ ಅವಳಂತೆಯೇ ಒಂದು ವಾಕ್ಯವನ್ನು ಸೇರಿಸುತ್ತಿದ್ದೆ, ಆ ಇಬ್ಬರಲ್ಲಿ ನಾನೂ ಒಬ್ಬಳಾಗಿದ್ದೆ ಎಂದು.
ಸುಧಾ ಆಡುಕಳ ಅನುವಾದಿಸಿದ ಒರಿಯಾನ ಫಲಾಚಿ ಕಾದಂಬರಿ “ಎಂದೂ ಹುಟ್ಟದ ಮಗುವಿಗೆ ಪತ್ರ”ಕ್ಕೆ ಬರೆದ ಅವರ ಮಾತುಗಳು ಇಲ್ಲಿವೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ