Advertisement

ಕೆಂಡಸಂಪಿಗೆ

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಹೊಳೆಸಾಲಿನ ಶಾಲೆಗೆ ಇನ್ನೀಸಬೆಟ್ಟರ್ ಬಂದರು: ಸುಧಾ ಆಡುಕಳ ಅಂಕಣ

ಎಲ್ಲರೂ ತಮ್ಮ ಕೆಲಸವನ್ನು ಬಿಟ್ಟು ದಾರಿಯೆಡೆಗೆ ನೋಡಿದರೆ ಆರಡಿ ಎತ್ತರದ ಚಂದದ ವ್ಯಕ್ತಿಯೊಬ್ಬರು ನಗುತ್ತಾ ಇವರೆಡೆಗೆ ಬರುತ್ತಿದ್ದರು. ಚೌಕಳಿ ಶರ್ಟು ಮತ್ತು ಬಿಳಿಯ ಪ್ಯಾಂಟಿನಲ್ಲಿ ಬಂದ ಅವರನ್ನು ಮಕ್ಕಳು ಬಿಟ್ಟ ಬಾಯಿ ಬಿಟ್ಟ ಹಾಗೆ ನೋಡುತ್ತಾ ನಿಂತುಬಿಟ್ಟರು. ಸೈಕಲ್ ಬೆಲ್ ಮಾಡುತ್ತಾ, ಸಮತಟ್ಟುಗೊಳಿಸಿದ ಮೈದಾನದ ತುಂಬಾ ಸೈಕಲ್ ಹೊಡೆಯುತ್ತ ಮಕ್ಕಳೆಡೆಗೆ ಕೈ ಬೀಸಿದರು. ಅವರ ಮುಗುಳ್ನಗೆಗೆ ಮನಸೋತ ಮಕ್ಕಳು ಹೋ ಎಂದು ಕೂಗುತ್ತಾ ಅವರ ಸೈಕಲ್ಲಿನ ಹಿಂದೆಯೇ ಹುಚ್ಚೆದ್ದು ಓಡತೊಡಗಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಅಮೃತವಾಹಿನಿಯೊಂದು ಹರಿಯುತಿದೆ: ಸುಧಾ ಆಡುಕಳ ಅಂಕಣ

ಅಮ್ಮನ ಮಾತು ಕೇಳಿ ಭಾವುಕಳಾದ ಅವಳು, “ಕಷ್ಟ ಬಂದಾಗಲೇ ನಮ್ಮೋರು, ತಮ್ಮೋರು ಯಾರಂತ ಗೊತ್ತಾಗೂದು ಅಮ್ಮಾ. ತನ್ನ ದಣಿ ಮಾತು ಅಂದ್ರೆ ಶಾಸ್ನ ಅಂತ ಹೇಳ್ತಾನೇ ಇವ್ರು ಜೈಲಿಗೋದ್ರು. ದಣಿ ಈಗ ಗುರುತೇ ಇಲ್ಲದೋರ ಹಾಗೆ ಕಾರಲ್ಲಿ ಬರ‍್ರ ಹೋಯ್ತರೆ. ಬದುಕೇ ಮುಗದೋಯ್ತು ಅಂದ್ಕಂಡು ಹೊಳೆದಾಟಿ ಬಂದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಏಳನೆಯ ಕಂತು ನಿಮ್ಮ ಓದಿಗೆ

Read More

ಎಲ್ಲ ನಿಮ್ಮ ಲೀಲೆ ತಾಯೇ…: ಸುಧಾ ಆಡುಕಳ ಅಂಕಣ

ನೀಲಿಯನ್ನು ಬಹುವಾಗಿ ಕಾಡಿದ ಕತೆಯೆಂದರೆ ಹೊಳೆಸಾಲಿನ ಮಾರಿ ಮತ್ತು ಕಡೆಸಾಲಿನ ಸುಬ್ಬಮ್ಮನವರ ನಡುವೆ ನಡೆದ ಮಾರಾಮಾರಿ ಜಗಳದ ಕತೆ..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಆರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ