Advertisement

ಕೆಂಡಸಂಪಿಗೆ

ಪ್ರಪಂಚದಷ್ಟೇ ಪುರಾತನವಾದ ಪ್ರಶ್ನೆಗಳಿಗೆ ಉತ್ತರದ ಹುಡುಕಾಟ: ಸುಧಾ ಆಡುಕಳ ಮಾತುಗಳು

ಅನೇಕ ದಶಕಗಳ ಹಿಂದೆ ಹೀಗೆ ಬಿಸಿಲಲ್ಲಿ ಕುಳಿತು ಮಾತನಾಡಿದ ಬಸುರಿಯರ ಮಕ್ಕಳೀಗ ಸಮಾಜವೆಂಬ ಇರುವೆ ಸಾಲಿನ ಭಾಗವಾಗಿಯೂ, ತಮ್ಮದೇ ಸ್ವಾತಂತ್ರ್ಯದ ಹಾದಿಯನ್ನು ಹುಡುಕಿಕೊಂಡು, ತಾವಿರುವೆಡೆಯಲ್ಲೆಲ್ಲಾ ಪ್ರೀತಿಯ ಧಾರೆಯನ್ನೇ ಹಂಚುತ್ತಾ ಸಾಗಿದ್ದಾರೆ. ಒಡಲೊಳಗೆ ಮಗುವನ್ನು ಹೊತ್ತ ತಾಯಂದಿರ ಬೇಗೆ ಮಾತ್ರ ಎಷ್ಟೇ ಕಾಲ ಸರಿದರೂ ಹೀಗೆಯೇ ಮುಂದುವರೆಯುವುದೇನೋ ಎಂದು ಅನಿಸುತ್ತಲೇ ಇರುತ್ತದೆ. ಹಾಗೆ ನನ್ನ ಮಗುವಿಗೆ ನಾನೇನಾದರೂ ಕಥೆಯನ್ನು ಹೇಳುವಂತಿದ್ದರೆ ಮೇಲೆ ಬರೆದ ಕಥೆಯನ್ನು ಹೇಳುತ್ತಿದ್ದೆ ಮತ್ತು ಕೊನೆಯಲ್ಲಿ ಅವಳಂತೆಯೇ ಒಂದು ವಾಕ್ಯವನ್ನು ಸೇರಿಸುತ್ತಿದ್ದೆ, ಆ ಇಬ್ಬರಲ್ಲಿ ನಾನೂ ಒಬ್ಬಳಾಗಿದ್ದೆ ಎಂದು.
ಸುಧಾ ಆಡುಕಳ ಅನುವಾದಿಸಿದ ಒರಿಯಾನ ಫಲಾಚಿ ಕಾದಂಬರಿ “ಎಂದೂ ಹುಟ್ಟದ ಮಗುವಿಗೆ ಪತ್ರ”ಕ್ಕೆ ಬರೆದ ಅವರ ಮಾತುಗಳು ಇಲ್ಲಿವೆ

Read More

ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪುರಸ್ಕಾರ: ಸುಧಾ ಆಡುಕಳ ಬರಹ

ಹಿಜಾಬ್ ಧಾರಣೆಯ ವಿರುದ್ಧ ಇರಾನಿ ಮಹಿಳೆಯರೆಲ್ಲರೂ ಬಂಡೆದ್ದಿರುವ ವಿಷಯ ಇಡಿಯ ಜಗತ್ತಿಗೆ ತಿಳಿದಿದೆ. ಮೊಹಮ್ಮದಿ ಈ ಹೋರಾಟದ ಮುಂಚೂಣಿಯಲ್ಲಿರುವವರು. ‘ಮಹಿಳೆ – ಜೀವನ – ಸ್ವಾತಂತ್ರ್ಯ’ ಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು ತಮ್ಮ ಹೋರಾಟವನ್ನು ಸಂಘಟಿಸಿದರು. ಮಹಿಳೆಯರ ಮೇಲೆ ನಡೆಯುತ್ತಿರುವ ಎಲ್ಲ ರೀತಿಯ ದೌರ್ಜನ್ಯಗಳು ನಿಲ್ಲಬೇಕು.
ಈ ಸಲದ ನೊಬೆಲ್‌ ಶಾಂತಿ ಪುರಸ್ಕೃತ ನರ್ಗೆಸ್‌ ಮೊಹಮ್ಮದಿ ಅವರ ಕುರಿತು ಸುಧಾ ಆಡುಕಳ ಬರಹ

Read More

ಸುಧಾ ಆಡುಕಳ ಅನುವಾದಿಸಿದ ಪ್ಯಾಬ್ಲೋ ನೆರೂಡನ ಎರಡು ಕವಿತೆಗಳು

“ಹೋರಾಟವೇ ನನ್ನ ಜೀವನವಾಗಿದೆ
ದಿನವೂ ಸಂಜೆ ದಣಿದು ಮರಳುತ್ತೇನೆ
ಮತ್ತದೇ ಜಾಗ, ಬದಲಾಗದು ಏನೂ
ಆದರೆ,
ನಿನ್ನ ನಗೆ ನನ್ನನ್ನು ಆಗಸದಲ್ಲಿ ತೇಲಿಸುವುದು
ಜೀವನದ ಎಲ್ಲ ಬಾಗಿಲುಗಳನ್ನೂ ತೆರೆದು”- ಸುಧಾ ಆಡುಕಳ ಅನುವಾದಿಸಿದ ಪ್ಯಾಬ್ಲೋ ನೆರೂಡನ ಎರಡು ಕವಿತೆಗಳು

Read More

ಟೇಪ್‌ ರೆಕಾರ್ಡರ್ ವಿಥ್ ರೇಡಿಯೋ ಎಂಬ ಮಾಯಾಪೆಟ್ಟಿಗೆ: ಸುಧಾ ಆಡುಕಳ ಬರಹ

ಎಲ್ಲರ ಒಕ್ಕೊರಲ ಒತ್ತಾಯಕ್ಕೆ ಅಪ್ಪನೂ ಇಲ್ಲವೆನ್ನಲಾರದೇ ನಡುಅಂಗಳದಲ್ಲಿಯೇ ಚಾಪೆ ಹಾಸಿ, ಮದ್ದಲೆಯೊಂದಿಗೆ ಸಜ್ಜಾಗಿಯೇಬಿಟ್ಟರು. ಸುತ್ತ ಮುತ್ತಿದ ನೀರವ ಮೌನದ ನಡುವೆ ಅಪ್ಪ ಮದ್ದಲೆ ಬಡಿಯುತ್ತಾ, ದೊಡ್ಡ ದನಿಯಲ್ಲಿ “ವಿಘ್ನೇಶಾಯ ಸರಸ್ವತೈ ಪರ‍್ವತೈ ಗುರುವೇ ನಮಃ” ಎಂದು ಗಣಪತಿ ಪೂಜೆಯೊಂದಿಗೆ ಆರಂಭಿಸಿ, “ಸರಸಿಜಾಂಬಕಿಯರೇ ಕೇಳಿ” ಎಂಬ ಭೀಷ್ಮಪರ್ವದ ನಾಲ್ಕು ಹಾಡುಗಳನ್ನು ಹಾಡಿ ಇನ್ನು ಸಾಕು ಎಂಬಂತೆ ಕೈಸನ್ನೆ ಮಾಡಿದರು. ಇದನ್ನೇ ಕಾಯುತ್ತಿದ್ದ ಸಾಹೇಬರು ಟಕ್ ಎಂದು ರೆಕಾರ್ಡಿಂಗನ್ನು ಬಂದ್ ಮಾಡಿದರು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಎಂದಿಗೂ ಹುಟ್ಟದ ಮಗುವಿಗೆ ಮೂರು ಕಿನ್ನರ ಕತೆಗಳು

ಪಾತ್ರೆ ತೊಳೆದು ಮುಗಿಸಿದ ಅಮ್ಮ ಹಾಲಿಗೆ ಬಂದು ಮೊದಲು ನೆಲದ ಹಾಸನ್ನು ಬ್ರಶ್‌ನಿಂದ ತಿಕ್ಕಿ ಸ್ವಚ್ಛಗೊಳಿಸುತ್ತಿದ್ದರು. ನಂಆಗೆಲ್ಲ ಆ ಸುಂದರ ಹೆಂಗಸು ಸೋಫಾದ ಮೇಲೆ ಮಲಗಿ ಪುಸ್ತಕವನ್ನು ಓದುತ್ತಲೇ, ಏನಾದರೂ ದೂರುಗಳನ್ನು ದಾಖಲಿಸುತ್ತಿದ್ದಳು. ಟೇಬಲ್ ಮೇಲೆ ಕುಳಿತು ಇದನ್ನೆಲ್ಲ ನೋಡುತ್ತಿದ್ದ ಪುಟ್ಟ ಹುಡುಗಿಗೆ ಅರ್ಥವಾಗದ ವಿಷಯವೊಂದಿತ್ತು.
ಇಟಲಿಯ ಸಾಹಿತಿ ಮತ್ತು ಪತ್ರಕರ್ತೆಯಾಗಿದ್ದ ಓರಿಯಾನ ಪಲಾಸಿಯವರ ‘ಎಂದಿಗೂ ಹುಟ್ಟದ ಮಗುವಿಗೆ ಪತ್ರ’ ಕಾದಂಬರಿಯನ್ನು ಸುಧಾ ಆಡುಕಳ ಕನ್ನಡಕ್ಕೆ ಅನುವಾದಿಸುತ್ತಿದ್ದು, ಅದರ ಭಾಗವೊಂದು ನಿಮ್ಮ ಓದಿಗೆ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ