Advertisement

ಕೆಂಡಸಂಪಿಗೆ

ಇದಮಿತ್ಥಂ ಎಲ್ಲಿಹುದು ಮನುಜ ಸ್ವಭಾವದಲಿ?: ಸುಕನ್ಯಾ ಕನಾರಳ್ಳಿ ಅಂಕಣ

ಆದರೆ ನಿಜವಾದ ಹೊಡೆತ ಬೀಳುವುದು ಆ ಕಪ್ಪು ಹುಡುಗನ ತಾಯಿಯನ್ನು ಅವಳು ಭೇಟಿಯಾದಾಗ. ಕೌಟುಂಬಿಕ ಹಿಂಸೆಯಡಿ ಸಿಕ್ಕಿಬಿದ್ದ ಆ ತಾಯಿಗೆ ಕುಟುಂಬವೂ ಉಳಿಯಬೇಕು, ಮಗನ ಬರ್ಕತ್ತೂ ಆಗಬೇಕು. ಕರಿಯರನ್ನು ಪ್ರಾಣಿಗಳಂತೆ ನಡೆಸಿಕೊಳ್ಳುವ ಸಮಾಜ ಒಂದು ಕಡೆ, ಸ್ಕೂಲಿನಿಂದ ಹೊರಕಳಿಸಿದರೆ ಆ ಎಳೆಯನ ಭವಿಷ್ಯವನ್ನು ಕತ್ತರಿಸಿ ಬಿಸಾಕುವ ಅವನ ಕ್ರೂರಿ ಅಪ್ಪ ಇನ್ನೊಂದು ಕಡೆ, ನಿನಗೆ ಬೇಕಿದ್ದರೆ ಪಾದ್ರಿಯನ್ನು ಹೊರದಬ್ಬು, ನನ್ನ ಮಗನ ವಿದ್ಯಾಭ್ಯಾಸಕ್ಕೆ ಅಡ್ಡಿ ಮಾಡಬೇಡ, ಎಂದು ನಯವಾಗಿ ಆದರೆ ದೃಢವಾಗಿ ಹೇಳುವ ಅವಳ ಧಾರಣಶಕ್ತಿ ಮತ್ತು ಹೇಗೋ ಬದುಕುಳಿದು ತನ್ನವರನ್ನೂ ಬದುಕಿಸಿಕೊಳ್ಳುವ ಅವಳ ತಣ್ಣಗಿನ ಸ್ಥೈರ್ಯ ಈ ಸಿಸ್ಟರಿನಿಯ ಧಾರ್ಮಿಕ ಹುಂಬತನವನ್ನು ಅಲ್ಲಾಡಿಸಿಬಿಡುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಇಂಗ್ಲೀಷ್ ಮೇಡಮ್ಮಿನ ಕನ್ನಡ ಪುರಾಣ: ಸುಕನ್ಯಾ ಕನಾರಳ್ಳಿ ಅಂಕಣ

ಷೇಕ್ಸ್ಪಿಯರ್ ತನ್ನ ಕಾಲದಲ್ಲಿ ಮಹಾನ್ ನಾಟಕಕಾರ ಎಂದು ಪರಿಗಣಿಸಲ್ಪಟ್ಟಿದ್ದನೊ ಇಲ್ಲವೋ. ವಾಸ್ತವವಾಗಿ ಆತ ಕೇವಲ ಎರಡನೆಯ ಅಥವಾ ಮೂರನೆಯ ದರ್ಜೆಯ ನಾಟಕಾರನಾಗಿದ್ದ ಎಂಬ ನಿಲುವಿದೆ. ನಮ್ಮ ವಿ. ಸೀತಾರಾಮಯ್ಯನವರ ಮಾತುಗಳು ಅದನ್ನೇ ಧ್ವನಿಸುತ್ತವೆ. ‘ಶೇಕ್ಸಪಿಯರನಲ್ಲಿ ಭವ್ಯವಾದ, ಸುಬದ್ಧವಾದ, ತಾರಕವಾದ ಜೀವನಮೌಲ್ಯಗಳಿಲ್ಲ; ದರ್ಶನವಿಲ್ಲ. ಆದುದರಿಂದ ಅವನು ಕೀಳನೆಂಬ ಒಂದು ವಿಚಿತ್ರ ತೀರ್ಮಾನ ಬಹುಕಾಲದಿಂದ ಬಂದಿದೆ. (ಪು. ೨೦). ಆದರೆ ಭಾರತದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ, ಇಂಗ್ಲಿಷ್ ಶಿಕ್ಷಕರ ಕೈಯಲ್ಲಿ ಅವನು ಮಹಾನ್ ಎತ್ತರವನ್ನು ಏರಿದ ರೀತಿಗೆ ಕಾರಣವನ್ನು ಹುಡುಕಬೇಕೆಂದರೆ ವಸಾಹತುಶಾಹಿ ಇತಿಹಾಸದತ್ತ ಹೊರಳಿಕೊಳ್ಳಬೇಕು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಒಂಟಿಹೆಣ್ಣು ಮತ್ತು ಹಂಪೆಯಾತ್ರೆ: ಸುಕನ್ಯಾ ಕನಾರಳ್ಳಿ ಅಂಕಣ

ಮೂರನೆಯ ದಿನದ ಹೊತ್ತಿಗೆ ಮನಸ್ಸನ್ನು ಉಲ್ಲಾಸಕ್ಕೆ ಹಚ್ಚುವ, ಹರಿಯುವ, ಸೆಳೆಯುವ ನದಿಯನ್ನು ನೋಡಬೇಕೆನ್ನಿಸಿತ್ತು. ತುಂಗಭದ್ರೆಯ ಹರವನ್ನು ಕಲ್ಪಿಸಿಕೊಳ್ಳುತ್ತಾ ಬೆಳಿಗ್ಗೆಯೇ ಹೋಗಿ ಒಂದು ಮೂಲೆ ಹಿಡಿದು ಕೂತು ಎಷ್ಟೋ ಹೊತ್ತು ಆಕೆಯನ್ನು ಕಣ್ತುಂಬಿಕೊಂಡ ಮೇಲೆ ಸ್ವಲ್ಪ ಸಮಾಧಾನವೆನ್ನಿಸಿತ್ತು. ಕೃಷ್ಣದೇವರಾಯ ತನ್ನ ಆಳ್ವಿಕೆಯನ್ನು ಪ್ರಾರಂಭಿಸಿದ್ದ ಆನೆಗುಂದಿಗೆ ಹೋಗಬೇಕು ಎಂದು ಹೇಳಿದ್ದರೂ ನಮ್ಮ ಆಟೋವಾಲ ಕರೆದುಕೊಂಡು ಹೋಗಿದ್ದು ಐನೂರ ಎಪ್ಪತ್ತೈದು ಮೆಟ್ಟಿಲು ಹತ್ತಬೇಕಿದ್ದ ಅಂಜನಾದ್ರಿಗೆ. ಕಡಿದರೆ ಎರಡು ಆಳಾಗುವ ಒಬ್ಬ ಧಡಿಯ ಮೈಮೂತಿ ತುಂಬ ಹನುಮಂತನ ಬಣ್ಣ ಬಳಿದುಕೊಂಡು, ಸೊಂಟದ ಹಿಂದೆ ಒಂದು ಬಾಲವನ್ನು ಅಂಟಿಸಿಕೊಂಡು, ಗದೆ ಹಿಡಿದು ನಡುದಾರಿಯಲ್ಲಿ ಹಾದಿಗುಪ್ಪೆಯ ಮೇಲೇ ನಿಂತಿದ್ದ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಎಸ್. ಜಾನಕಿಗೆ ಯಾಕೆ ಕೇವಲ ಪದ್ಮ?: ಸುಕನ್ಯಾ ಕನಾರಳ್ಳಿ ಅಂಕಣ

ಅವರೇನೂ ತೆಪ್ಪಗೆ ಅದನ್ನು ಒಪ್ಪಿಕೊಳ್ಳಲಿಲ್ಲ. ತಮ್ಮಲ್ಲಿ ಜಾಗೃತವಾಗಿರುವ ಆಧುನಿಕ ಮಹಿಳಾಪ್ರಜ್ಞೆಗೆ ನೀವು ಅಪಚಾರ ಮಾಡುತ್ತಿದ್ದೀರಿ ಎಂದು ಗಾಂಧೀಜಿಯವರನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು. ಯಾವ ಚಳುವಳಿಯೂ ತಾವಿಲ್ಲದೆ ನಡೆಯಕೂಡದು ಎಂದು ಸ್ಪಷ್ಟವಾಗಿ ಹೇಳಿದರು. ದಾದಾಬಾಯಿ ನವರೋಜಿಯವರ ಮೊಮ್ಮಗಳು ಕುರ್ಷೆದ್ ಬೆನ್ ನವರೋಜಿ ಒಂದು ಸಿಟ್ಟಿನ ಪತ್ರವನ್ನು ಸಹ ಬರೆದು ಗಾಂಧಿಗೆ ರವಾನಿಸಿದರು. ‘ಸ್ತ್ರೀಧರ್ಮ’ ಎಂಬ ಪತ್ರಿಕೆಯಲ್ಲಿ ಮಾರ್ಗರೆಟ್ ಕಸಿನ್ಸ್ ಹೀಗೆ ‘ಹೊರಗಿರಿಸುವ’ ಹುನ್ನಾರವನ್ನು ಪ್ರತಿಭಟಿಸಿದರು. ಯಾವುದೇ ಸಮಾವೇಶ, ಸಮಿತಿ, ಸಂಚಲನೆಗಳು ಹೆಣ್ಣಿಲ್ಲದೆ ನಡೆಯಬಾರದೋ, ಹಾಗೆಯೇ ಯಾವುದೇ ಹೋರಾಟ, ಪ್ರತಿಭಟನೆಗಳು ಸಹ ಹೆಣ್ಣಿಲ್ಲದೆ ಅಪೂರ್ಣ ಎಂದು ಎಚ್ಚರಿಸಿದರು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಇಂದಿನ ಮಂದಿಯ ಬಿಂಬದ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ

ವಿಲಿಯಮ್ಸ್ ಪ್ರಕಾರ ಟೆಲಿವಿಷನ್ ಕೇವಲ ಒಂದು ತಾಂತ್ರಿಕತೆಯಲ್ಲ, ಅದು ಒಂದು ಸಾಂಸ್ಕೃತಿಕ ರೂಪವೂ ಹೌದು. ಅದರಲ್ಲಿ ಜಾಹೀರಾತುಗಳು ಧಾರಾವಾಹಿಗಳ ನಡುವೆ ‘ಅಕಸ್ಮಾತ್ತಾಗಿ’ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅವೇ ಧಾರಾವಾಹಿಗಳನ್ನು ರೂಪಿಸುವ ಶಕ್ತಿಗಳು. ಪ್ರಾಯೋಜಕರು ತಮಗೆ ಬೇಕಾದ ನೋಡುಗರನ್ನು ಅದರ ಮೂಲಕ ಸೃಷ್ಟಿಸಿಕೊಳ್ಳುತ್ತಿರುತ್ತಾರೆ. ಆ ಪೂರಕತೆಯನ್ನು ಅರ್ಥಮಾಡಿಕೊಳ್ಳುವುದು ತುಂಬ ಮುಖ್ಯ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೇಳನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ�‌ ಗೋಪಾಲ�‌ ಬರೆದ ಈ ಭಾನ�ವಾರದ ಕತೆ “ಆಟ�
https://tinyurl.com/5575hs6r

ಮದ�ವೆ ಮದ�ವೆ ಆ ಸಿಹಿ ಪದವೆ
ಲಾಸ�‌ ವೇಗಸ�‌ನ ‘ಲಿಟಲ� ವೈಟ� ವೆಡ�ಡಿಂಗ� ಚಾಪೆಲ�’ ಕ�ರಿತ� ಅಚಲ ಸೇತ� ಬರಹ
https://tinyurl.com/2v28abrv

ಭಾರತಕ�ಕೆ ಹತ�ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜ� ಅಂಕಣ “ಅನೇಕ ಅಮೆರಿಕಾ� ನಿಮ�ಮ ಓದಿಗೆ
https://tinyurl.com/35mrwwsn

ಭವ�ಯ ಟಿ.ಎಸ�. ಬರೆದ ಈ ದಿನದ ಕವಿತೆ

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ