‘ಹೊಸ’ ಅಲೆ ಮತ್ತು ‘ಹಗರಣ’: ಸುಕನ್ಯಾ ಕನಾರಳ್ಳಿ ಅಂಕಣ
‘ಸಂಸ್ಕಾರ’ ಕಾದಂಬರಿಯ ಕರ್ತೃ ಯು ಆರ್ ಅನಂತಮೂರ್ತಿ ಚಿತ್ರಕಥೆಯಲ್ಲಿ ಮಾಡಿಕೊಂಡಿದ್ದ ಬದಲಾವಣೆಗಳ ಬಗ್ಗೆ ಹೇಳಿದ್ದ ಮಾತುಗಳನ್ನು ಗಮನಿಸಿದರೆ ‘ಸ್ವ-ಸೆನ್ಸಾರಿಕರಣ’ ಅಲ್ಲಿಯೂ ಸಹ ಕೆಲಸ ಮಾಡಿದ್ದನ್ನು ಗಮನಿಸಬಹುದು. ನಾರಣಪ್ಪನ ಸಂಸ್ಕಾರ ಕಾದಂಬರಿಯ ಅರ್ಧದಲ್ಲಿಯೇ ಒಬ್ಬ ಮುಸ್ಲಿಮ್ ವ್ಯಕ್ತಿಯಿಂದ ನಡೆದು ಹೋಗಿರುತ್ತದೆ. ಆದರೆ ಚಿತ್ರ ಅದರ ಬಗ್ಗೆ ಮೌನ ತಳೆಯುತ್ತದೆ. ಈ ‘ದಿವ್ಯಮೌನ’ ಪ್ರಾಣೇಶಾಚಾರ್ಯರ ತುಮುಲಕ್ಕೆ ಇನ್ನೊಂದು ಆಯಾಮ ನೀಡುವುದರ ಜೊತೆಗೆ ಹಾಗೇನಾದರೂ ಚಿತ್ರದಲ್ಲಿ ತೋರಿಸಿದ್ದಿದ್ದರೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೇ ಇರುತ್ತಿರಲಿಲ್ಲ ಎನ್ನುವುದೂ ನಿಜ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
