Advertisement

ಸ್ಮಿತಾ ಅಮೃತರಾಜ್ ಸಂಪಾಜೆ

ಭಕ್ತೆ-ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಪ್ರಾಪಂಚಿಕ ಮದುವೆಗೆ ಬೆಚ್ಚಿ ಬೀಳುತ್ತಿದ್ದ ನಿದರ್ಶನಗಳಲ್ಲಿ ಸುಮಾರು ಹದಿನೇಳನೆಯ ಶತಮಾನದ ಕೇರಳದಲ್ಲಿದ್ದ ಅನುಭಾವಿನಿ ನಂಗ ಪೆಣ್ಣು ಒಂದು ಉತ್ತಮ ಉದಾಹರಣೆ. ಕೊಚ್ಚಿನ್ ರಾಜಾಸ್ಥಾನವಾದ ತ್ರಿಪ್ಪುನಿತ್ತುರದಲ್ಲಿದ್ದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದ ಈಕೆಯ ಮದುವೆಯ ದಿನ ಭರ್ಜರಿ ಮೆರವಣಿಗೆಯಲ್ಲಿ ವಧುವಿನ ಮನೆಗೆ ಬರುತ್ತಿದ್ದ ವರನಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ತ್ರಿಪ್ಪುನಿತ್ತುರದಲ್ಲಿದ್ದ ದೇವಸ್ಥಾನದ ವಿಷ್ಣುವಿನಲ್ಲಿ ಲೀನವಾಗಿದ್ದಳು. ಈಗಲೂ ನಂಗ ಪೆಣ್ಣು ಹಬ್ಬದ ದಿನದಂದು ಮೂರ್ತಿಯನ್ನು ವರನಾಗಿ ಮೆರವಣಿಗೆಯಲ್ಲಿ ಅವಳ ತಂದೆಯ ಮನೆಗೆ ಹೊತ್ತೊಯ್ಯಲಾಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಆರನೆಯ ಬರಹ

Read More

ಆಧ್ಯಾತ್ಮಿಕ ಶಿಬಿರ-ಮಹಿಳೆಯರಿಗೆ: ಸುಕನ್ಯಾ ಕನಾರಳ್ಳಿ ಅಂಕಣ

ನಾನು ನೋಡಿದ್ದ ಒಂದು ಅದ್ಭುತ ತಾಳಮದ್ದಳೆ ನೆನಪಿಗೆ ಬಂತು. ಕೃಷ್ಣ ತಾನು ಸಂಧಾನಕ್ಕೆ ಹೋಗುವ ಮುನ್ನ ದ್ರೌಪದಿಯನ್ನು ಭೇಟಿ ಮಾಡುತ್ತಾನೆ. ತುಂಬಿದ ಸಭೆಯಲ್ಲಿ ತನಗೆ ಆದ ಅವಮಾನದ ಗತಿ ಏನು? ಬಿಚ್ಚಿದ ಮುಡಿಯ ಗತಿಯೇನು? ಈಗ ಆ ಗಂಡ ಧರ್ಮರಾಜ ನಿನ್ನನ್ನ ಸಂಧಾನಕ್ಕೆ ಕಳುಹಿಸುತ್ತಿದ್ದಾನೆ. ಯಾಕೆಂದರೆ ಅದು ಕೇವಲ ಹೆಣ್ಣಿಗಾದ ಅವಮಾನ ಅಲ್ಲವಾ ಕೃಷ್ಣ? ನೀನೂ ಆರಾಣೆ ಗಂಡಸಾಗಿಬಿಟ್ಟೆಯಾ? ಎಂದು ಚುಚ್ಚಿ ಕೇಳುತ್ತಾಳೆ. ಸುಮಾರು ಒಂದು ಗಂಟೆ ಅವರ ನಡುವೆ ಸಂವಾದ ನಡೆಯುತ್ತದೆ. ಅವರ ನಡುವಿನ ಆತ್ಮೀಯ ಸಲಿಗೆ, ಒಬ್ಬರಿಗೊಬ್ಬರು ಸ್ಪಂದಿಸುವ ರೀತಿ, ಚತುರ ಸಂಭಾಷಣೆಗಳನ್ನು ಬಿಟ್ಟ ಬಾಯಿ ಬಿಟ್ಟಂತೆಯೇ ನೋಡಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಗುರು ಮತ್ತು ಹಕ್ಕಿಗೂಡು: ಸುಕನ್ಯಾ ಕನಾರಳ್ಳಿ ಅಂಕಣ

ಗಾಂಧೀಜಿ ಒಮ್ಮೆ ಯರವಾಡ ಜೈಲಿನಲ್ಲಿದ್ದಾಗ ಒಂದು ರಾತ್ರಿ ಬರಿಯ ದುಃಸ್ವಪ್ನಗಳೇ ಬಿದ್ದು ಬೆಚ್ಚಿದ್ದಾಗ ವಿಚಾರಿಸಿದರಂತೆ. ಹಿಂದಿನ ರಾತ್ರಿಯ ಅಡಿಗೆಯನ್ನು ಒಬ್ಬ ಕೊಲೆಗಡುಕ ಅಪರಾಧಿ ಮಾಡಿದ್ದಾನೆಂದು ತಿಳಿದು ಅಂದಿನಿಂದ ರಾತ್ರಿಯ ಊಟವನ್ನೇ ಬಿಟ್ಟರಂತೆ. ನಮ್ಮ ಸೂಕ್ಷ್ಮ ಶರೀರದ ಚೈತನ್ಯ ಇನ್ನೊಬ್ಬರಿಗೂ ಅನುಭವಕ್ಕೆ ಬರುತ್ತದೆ ಎಂದು ಅರಿವಾಗುವುದು ಬ್ರಹ್ಮವಿದ್ಯೆಯೇನೂ ಅಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ