Advertisement

ಎಸ್. ಗಂಗಾಧರಯ್ಯ

ಪುರಂದರದಾಸರು ಕನ್ನಡಮಾತೆಯ ಸುಪುತ್ರರಾಗಬಹುದು, ಕನಕದಾಸರಿಗೆ ಆ ಭಾಗ್ಯವಿಲ್ಲ!: ಸುಕನ್ಯಾ ಕನಾರಳ್ಳಿ ಅಂಕಣ

ಕನ್ನಡ ಸಿನೆಮಾ ಪುರಂದರದಾಸ ಮತ್ತು ಕನಕದಾಸರನ್ನು ಅರಿವಿಗೆ ದಕ್ಕಿಸಿಕೊಂಡ ರೀತಿಯಲ್ಲಿ ವ್ಯತ್ಯಾಸವಿರುವುದನ್ನು ಗಮನಿಸದೇ ಇರುವುದು ಕಷ್ಟ. ಎರಡೂ ಕಥಾನಕಗಳಲ್ಲಿ ಸಾಮಾನ್ಯ ಅಂಶಗಳಿರುವುದೂ ಸರಿಯೆ. ಉದಾಹರಣೆಗೆ ಬ್ರಾಹ್ಮಣ, ಬ್ರಾಹ್ಮಣೀಯತೆ, ಬ್ರಾಹ್ಮಣಿಕೆ ಮುಂತಾದ ಪರಿಕಲ್ಪನೆಗಳು ಎರಡರಲ್ಲೂ ಸಾಕಷ್ಟು ಲೇವಡಿಗೆ ಒಳಗಾಗುತ್ತವೆ. ಹಾಗೆ ನೋಡಿದರೆ ಕನ್ನಡದ ಹೆಚ್ಚಿನಂಶ ಎಲ್ಲ ಸಂತಚರಿತೆಗಳಲ್ಲಿ ಅದು ಸಾಮಾನ್ಯವೇ. ಕನಕ ಒಬ್ಬ ಅಬ್ರಾಹ್ಮಣ. ಕ್ಷತ್ರಿಯನೊ ಕುರುಬನೋ ಆಗಿದ್ದಿರಬೇಕು. ಚಿತ್ರದ ಹೆಚ್ಚಿನಂಶ ಅವನು ಬ್ರಾಹ್ಮಣ ವಿರೋಧವನ್ನು ನಿಭಾಯಿಸುವುದಕ್ಕೇ ಮೀಸಲಾಗುತ್ತದೆ. ಅವರಿಗಿಂತ ಅವನು ಹೇಗೆ ‘ಹೆಚ್ಚು’ ಬುದ್ಧಿವಂತ, ವಿವೇಕಿ, ಮತ್ತು ಅವನೂ ಸಹ ತನ್ನ ಪರಮಭಕ್ತಿಯ ಕಾರಣದಿಂದ ಮೋಕ್ಷಕ್ಕೆ ಅರ್ಹ ಎನ್ನುವುದನ್ನು ಸಾಬೀತುಪಡಿಸಲು ಚಿತ್ರ ಉದ್ದಕ್ಕೂ ಹೆಣಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ

Read More

ಅಕ್ಕ ಕೇಳವ್ವ, ನಾನೊಂದು ಕನಸು ಕಂಡೆ!: ಸುಕನ್ಯಾ ಕನಾರಳ್ಳಿ ಅಂಕಣ

ಗಂಡಸು-ಸಮಾಜ ಹೆಣ್ಣಿಗೆ ತನಗೆ ಬೇಕಾದ ಕನಸನ್ನು ಕಾಣಲೂ ಸುಲಭವಾಗಿ ಬಿಡುವುದಿಲ್ಲ. ಅವಳ ತನ್ಮಯತೆಯೂ ಆವನಿಗೆ ಅಪಾಯದಂತೆಯೇ ಕಾಣಿಸುತ್ತದೆ. ಅವನು, ಅವನು ಕಟ್ಟಿದ ಮನೆ, ಅವನಿಂದ ಹುಟ್ಟಿದ ಮಕ್ಕಳು, ಇತ್ಯಾದಿಗಳ ಸುತ್ತಲೇ ಅವಳ ಬದುಕು ಗಿರಕಿ ಹೊಡೆಯುತ್ತಿರಬೇಕು. ಅವಳು ಅದೂ ಇದೂ ಎಂದು ಗೊಣಗೊಣವೆನ್ನುತ್ತಿರಬೇಕು. ಅವನು ಯಾಂತ್ರಿಕವಾಗಿ ಹೂಂಗುಡುತ್ತಾ ಪೇಪರ್ ಓದುತ್ತಲೊ, ಟಿವಿ ನೋಡುತ್ತಲೊ, ಫೋನಿನಲ್ಲಿ ಮಾತಾಡುತ್ತಲೊ ಇರಬೇಕು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನೈದನೆಯ ಬರಹ

Read More

ಇಲ್ಲಿ ಎಲ್ಲವೂ ಸರಕೇ!: ಸುಕನ್ಯಾ ಕನಾರಳ್ಳಿ ಅಂಕಣ

ಕೆಲವೇ ನಿಮಿಷಗಳಲ್ಲಿ ಕಳ್ಳತನದಿಂದ ಅವರನ್ನು ಒಳಗೆ ಕರೆದುಕೊಂಡು ಒಳಗಿಂದ ಬಾಗಿಲು ಜಡಿದುಕೊಂಡು ಇಡೀ ಕಟ್ಟಡಕ್ಕೆ ಆಧಾರವಾಗಿರುವ ಗೋಡೆಯ ಭಾಗವನ್ನು ಉರುಳಿಸಿದಳು. ಮುಂದಿನದೆಲ್ಲ ರಣರಂಪ. ಅದರ ಕೆಳಗೆ ಮತ್ತು ಮೇಲೆ ಇದ್ದ ಫ್ಲಾಟಿನವರು ಬಂದು ಏನು ಏನು ಎಂದು ನೋಡುವ ಹೊತ್ತಿಗೆ ಗೋಡೆ ಉರುಳಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನಾಲ್ಕನೆಯ ಬರಹ

Read More

ಮುನ್ನೂರು ರಾಮಾಯಣಗಳು ಮತ್ತು…: ಸುಕನ್ಯಾ ಕನಾರಳ್ಳಿ ಬರಹ

ಶತಮಾನಗಳ ಅವಧಿಯಲ್ಲಿ ಈ ಭಾಷಾಪಟ್ಟಿಯಲ್ಲಿರುವ ಕೆಲವಂತೂ ಒಂದಕ್ಕಿಂತ ಹೆಚ್ಚು ರಾಮನ ಕಥೆಗಳನ್ನು ಹೊಮ್ಮಿಸಿವೆ. ಸಂಸ್ಕೃತ ಒಂದರಲ್ಲೇ ಕಾವ್ಯ, ಪುರಾಣಗಳ ರೂಪದಲ್ಲಿ ಇಪ್ಪತ್ತೈದಕ್ಕಿಂತಲೂ ಹೆಚ್ಚು ರಾಮಕಥೆಗಳಿವೆ. ಶಾಸ್ತ್ರೀಯ ಮತ್ತು ಜಾನಪದೀಯ ನೆಲೆಗಳೆರಡರಲ್ಲೂ ನಾಟಕ, ನೃತ್ಯ-ನಾಟಕ ಮತ್ತು ಇತರ ರೂಪಗಳನ್ನು ಸೇರಿಸಿದರೆ ಅದರ ಸಂಖ್ಯೆ ಇನ್ನೂ ಹೆಚ್ಚು. ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಸಂಸ್ಕೃತಿಗಳಲ್ಲಿ ಇರುವ ಎಲ್ಲ ಶಿಲ್ಪ, ಉಬ್ಬುಶಿಲ್ಪ, ಮುಖವಾಡ, ನೆರಳಿನಾಟ, ಮತ್ತು ಚಕ್ಕಳಗೊಂಬೆ ಪ್ರದರ್ಶನಗಳನ್ನೂ ಸೇರಿಸಬೇಕು.
ಎ. ಕೆ. ರಾಮಾನುಜನ್ನರ ಸಂಶೋಧನಾ ಲೇಖನ ‘ಮುನ್ನೂರು ರಾಮಾಯಣಗಳು, ಐದು ಉದಾಹರಣೆಗಳು ಮತ್ತು ಅನು-ವಾದದ ಬಗೆಗಿನ ಮೂರು ಚಿಂತನೆಗಳು’ ಕುರಿತು ಸುಕನ್ಯಾ ಕನಾರಳ್ಳಿ ಬರಹ

Read More

ಬುದ್ಧನಿಲ್ಲ ಇಲ್ಲಿ!: ಸುಕನ್ಯಾ ಕನಾರಳ್ಳಿ ಅಂಕಣ

ಮೂರನೆಯ ದಿನದ ಹೊತ್ತಿಗೆ ಹಕ್ಕಿಯಂತೆ ಹಾರಿದರೆ ಮತ್ತೆ ಮರಳುವುದಿಲ್ಲ ಎಂದು ನೂರು ಬಾರಿ ಶಪಥ ಮಾಡಿದ್ದೆ. ಅಷ್ಟರ ಹೊತ್ತಿಗೆ ಇಂಗ್ಲಿಷ್ ಪ್ರವಚನ ಯಾಕೋ ಕೃತಕವೆನ್ನಿಸಿತ್ತು. ಅದೇ ದನಿ ಹಿಂದಿಯಲ್ಲಿ ಕೇಳಿಸಿಕೊಳ್ಳುತ್ತಿದ್ದವರ ಕಡೆಯಿಂದ ಬಂದಾಗ ಅರೆ, ಇದರಲ್ಲಿ ಸಾಕಷ್ಟು ಜೀವಂತಿಕೆ ಇದೆಯಲ್ಲ ಅಂತನ್ನಿಸಿ ಕೊನೆಯ ಪ್ರವಚನವನ್ನು ಕೇಳಲು ಹಿಂದಿಯ ಕಡೆಗೆ ಹೋಗಲು ಪ್ರಯತ್ನಿಸಿದೆ. ‘ಆಚಾರ್ಯರನ್ನು ಕೇಳಿ,’ ಎಂಬ ಆದೇಶ ಬಂತು. ಸರಿ, ಕೇಳಿದೆ. ಪ್ರೈಮರಿ ಸ್ಕೂಲಿನಲ್ಲಿ ‘ಮಿಸ್, ಮಿಸ್, ನಂಗೆ ಬಾತ್ ರೂಮಿಗೆ ಹೋಗಬೇಕು, ಅರ್ಜೆಂಟೂ…’ ನೆನಪಿಗೆ ಬಂದು ಮುಖದಲ್ಲಿ ನಗು ಮೂಡಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿಮೂರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ