Advertisement

ಎಸ್. ಗಂಗಾಧರಯ್ಯ

ಅಪ್ಪಿಕೋ ಭೂತಾಯಿ ಗೌರಾದೇವಿ!: ಸುಕನ್ಯಾ ಕನಾರಳ್ಳಿ ಅಂಕಣ

ಅಧಿಕಾರಿಗಳಿಗೆ ಈಗ ಪೇಚಿಗಿಟ್ಟುಕೊಂಡಿತು. ಸದ್ಯಕ್ಕೆ ಅಲ್ಲಿಂದ ತೊಲಗಿ ನಂತರ ಬಂದರೆ ಹೇಗೆ? ಆದಿವಾಸಿ ಹೆಂಗಸರಿಗೆ ಸರಕಾರದ ಕುತಂತ್ರಗಳೇನೂ ಅಪರಿಚಿತವಲ್ಲ. ಅವರ ಆಯುಧಗಳನ್ನು ಹೊತ್ತೊಯ್ದು ಕೊಡುವ ನೆಪದಲ್ಲಿ ತಾತ್ಕಾಲಿಕವಾಗಿ ಕಟ್ಟಿದ್ದ ಸೇತುವೆಯನ್ನು ಅದೇ ಅಸ್ತ್ರಗಳಿಂದ ಉರುಳಿಸಿದಾಗ ಸರಕಾರ ಇತ್ತ ಕಡೆಯಲ್ಲಿ, ಇವರೆಲ್ಲ ಅತ್ತ ಕಡೆಯಲ್ಲಿ. ಇಡೀ ರಾತ್ರಿ ಸರಕಾರದ ಮಂದಿ ಮತ್ತೆ ಕಾಡೊಳಗೆ ನುಸುಳದಂತೆ ಹೆಂಗಸರು ಕಾವಲಿದ್ದರು. ಮಾರನೆಯ ದಿನ ಹಳ್ಳಿಗೆ ಹಿಂತಿರುಗಿದ ಗಂಡಸರಿಗೆ ಆಶ್ಚರ್ಯ ಕಾದಿತ್ತು. ಮಾರ್ಚ್ ೩೧, ೧೯೭೪ ರಂದು ಕಣಿವೆಯಲ್ಲಿ ತಮಟೆ ಕಹಳೆಗಳ ಸಮೇತ ಬೃಹತ್ ಪ್ರದರ್ಶನ ನಡೆಯಿತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೆರಡನೆಯ ಬರಹ

Read More

ಎರಡು-ನಾಲಿಗೆಗಳ ನಡುವೆ ನಾನು!: ಸುಕನ್ಯಾ ಕನಾರಳ್ಳಿ ಅಂಕಣ

ಕರ್ನಾಟಕದಲ್ಲಿ ಕಲಿಯುವ ಮಕ್ಕಳ ಜೊತೆ ಒಂದು ಭಾವನಾತ್ಮಕ ಸಂಬಂಧವನ್ನು ಕಟ್ಟಿಕೊಳ್ಳುವುದಕ್ಕೆ ನನ್ನ ಕನ್ನಡ ಇನ್ನಿಲ್ಲದಂತೆ ಸಹಾಯ ಮಾಡಿದೆ. ಕೆಲವೊಮ್ಮೆ ಪರಿಕಲ್ಪನೆಗಳನ್ನ ಅರ್ಥಮಾಡಿಸುವಾಗ ಬಳಸಿಕೊಳ್ಳುತ್ತಿದ್ದ ದಿನನಿತ್ಯದ ಉದಾಹರಣೆಗಳಿಗೆ ಮತ್ತು ಹಾಸ್ಯಕ್ಕೆ ಕನ್ನಡವೇ ಜೀವವಾಗಿರುತ್ತಿತ್ತು. ಅದನ್ನೇ ಇಂಗ್ಲೀಷಿನಲ್ಲಿ ಹೇಳಿದ್ದಿದ್ದರೆ ಮಕ್ಕಳು ನಗುವುದಿರಲಿ, ನನಗೇ ಅಳು ಬರುತ್ತಿತ್ತೋ ಏನೋ. ಆದರೂ ಹೊರನಾಡಿನಿಂದ ಬಂದಿದ್ದ ಕೆಲವು ಮಕ್ಕಳಿಗೆ ಇಂಗ್ಲೀಷಿನಲ್ಲೂ ಹೇಳುವ ಪ್ರಯತ್ನ ಮಾಡುತ್ತಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೊಂದನೆಯ ಬರಹ

Read More

‘ಹೊಸ’ ಅಲೆ  ಮತ್ತು ‘ಹಗರಣ’: ಸುಕನ್ಯಾ ಕನಾರಳ್ಳಿ ಅಂಕಣ

‘ಸಂಸ್ಕಾರ’ ಕಾದಂಬರಿಯ ಕರ್ತೃ ಯು ಆರ್ ಅನಂತಮೂರ್ತಿ ಚಿತ್ರಕಥೆಯಲ್ಲಿ ಮಾಡಿಕೊಂಡಿದ್ದ ಬದಲಾವಣೆಗಳ ಬಗ್ಗೆ ಹೇಳಿದ್ದ ಮಾತುಗಳನ್ನು ಗಮನಿಸಿದರೆ ‘ಸ್ವ-ಸೆನ್ಸಾರಿಕರಣ’ ಅಲ್ಲಿಯೂ ಸಹ ಕೆಲಸ ಮಾಡಿದ್ದನ್ನು ಗಮನಿಸಬಹುದು. ನಾರಣಪ್ಪನ ಸಂಸ್ಕಾರ ಕಾದಂಬರಿಯ ಅರ್ಧದಲ್ಲಿಯೇ ಒಬ್ಬ ಮುಸ್ಲಿಮ್ ವ್ಯಕ್ತಿಯಿಂದ ನಡೆದು ಹೋಗಿರುತ್ತದೆ. ಆದರೆ ಚಿತ್ರ ಅದರ ಬಗ್ಗೆ ಮೌನ ತಳೆಯುತ್ತದೆ. ಈ ‘ದಿವ್ಯಮೌನ’ ಪ್ರಾಣೇಶಾಚಾರ್ಯರ ತುಮುಲಕ್ಕೆ ಇನ್ನೊಂದು ಆಯಾಮ ನೀಡುವುದರ ಜೊತೆಗೆ ಹಾಗೇನಾದರೂ ಚಿತ್ರದಲ್ಲಿ ತೋರಿಸಿದ್ದಿದ್ದರೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೇ ಇರುತ್ತಿರಲಿಲ್ಲ ಎನ್ನುವುದೂ ನಿಜ ತಾನೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಇಲ್ಲಿರಲಾರೆ… ಅಲ್ಲಿಗೆ ಹೋಗಲಾರೆ: ಸುಕನ್ಯಾ ಕನಾರಳ್ಳಿ ಅಂಕಣ

ಕಾಸರವಳ್ಳಿಯವರೇ ಹೇಳುವಂತೆ, ‘ಹಿಂದಿನ ಕಾಲದ ಗ್ರಾಮೀಣ ಬದುಕಲ್ಲಿ ಶಾಂತಿ ಇತ್ತು, ಸೌಹಾರ್ದತೆ ಇತ್ತು ಎನ್ನುವುದು ಒಂದು ರಮ್ಯ ಕಲ್ಪನೆ ಅಷ್ಟೇ. ಇವತ್ತಿನ ನಗರ ಕೇಂದ್ರದ ಬದುಕಿಗೆ ಹೋಲಿಸಿದಾಗ ಸ್ವಲ್ಪ ಮಟ್ಟಿನ ಸೌಹಾರ್ದತೆ ಇತ್ತು ಎನ್ನುವುದು ನಿಜವಾದರೂ ಜಾತಿ, ಅಂತಸ್ತು, ವೃತ್ತಿಯ ನೆಲೆಯಲ್ಲಿ ಅನ್ಯಾಯ, ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದ್ದವು.’ ಅದನ್ನೇ ನಾಗರಾಜನ ಹೆಂಡತಿ, ‘ಆ ದಿನಗಳಲ್ಲಿ ಸುಖ ಇರಲಿಲ್ಲ, ನೆಮ್ಮದಿ ಇತ್ತು. ಆದರೆ ಇವತ್ತು ಸುಖ ಇದೆ, ನೆಮ್ಮದಿ ಇಲ್ಲ’ ಎಂದು ಹೇಳುತ್ತಾಳೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಒಂಭತ್ತನೆಯ ಬರಹ

Read More

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ