ನಮ್ಮೂರಿನ ಕತೆಗಳು: ಸುಮಾ ಸತೀಶ್ ಸರಣಿ
ಅವರ ಮನ್ಯಾಗೆ ಲೆಟ್ರಿನ್ ಇತ್ತು. ಇಲ್ಲಿ ಬಯಲಿಗೆ ಹೋಗೋಕೆ ಸುತ್ರಾಂ ಒಪ್ತಿಲ್ಲ. ಚೊಂಬು ಹಿಡಿಯಾಕಿಲ್ಲ ಅಂದ್ಲು. ಕೊನೀಗೆ ಸಣ್ಣ ಹುಡ್ಗಿ ಅಂತ ನನ್ನ ಅವಳ ಹಿಂದೆ ಚೊಂಬು ಹಿಡ್ಕೊಂಡು ಮೆರವಣಿಗೆ ಕಳಿಸಿದ್ರು. ಥೋ, ನಂಗೋ ಕೋಪ. ಅವಳ ಹಿಂದೆ ಹೋಗಿ, ಚೊಂಬು ಕೊಟ್ಟೆ. ಆ ನೀರು ಸಾಲಲಿಲ್ಲ ಅಂತ ಅಲ್ಲೇ ಕುಂತ್ಲು. ಇನ್ನೊಂದು ಚೊಂಬು ತರಾಣಿ ಅಂತ ಹೊಂಟ್ರೇ, ಚೊಂಬು ಸಾಲಾಕಿಲ್ಲ, ಬಿಂದಿಗೇಲಿ ತತ್ತಾ ಅಂತ ಹಠ. ದೇವ್ರೇ, ಬ್ಯಾಡ ನನ್ ಕತೆ. ಮನೇಗೆ ಹೋಗಿ ಸಣ್ಣ ಬಿಂದಿಗೆ ತಗೊಂಡು ಬರ್ತಿದ್ರೆ, ರಸ್ತೆನಾಗಿನ ಜನವೆಲ್ಲ ಬಿದ್ದು ಬಿದ್ದು ನಗಾಡಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಕುರಿತ ಬರಹ