Advertisement
ಸಂಜೋತಾ ಪುರೋಹಿತ

ಸಂಜೋತಾ ಪುರೋಹಿತ ಮೂಲತಃ ಧಾರವಾಡದವರು. ಸದ್ಯಕ್ಕೆ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋನಲ್ಲಿ ವಾಸವಾಗಿದ್ದಾರೆ. ಇಂಜಿನಿಯರ್ ಆಗಿರುವ ಇವರು ಕತೆಗಾರ್ತಿಯೂ ಹೌದು. ಇವರ ಪ್ರವಾಸದ ಅಂಕಣಗಳು ಪತ್ರಿಕೆಯಲ್ಲಿ ಪ್ರಕಟವಾಗುತ್ತಿವೆ. 'ಸಂಜೀವಿನಿ' ಇವರ ಪ್ರಕಟಿತ ಕಾದಂಬರಿ.

ನಮ್ಮೂರಿನ ಕತೆಗಳು: ಸುಮಾ ಸತೀಶ್ ಸರಣಿ

ಅವರ ಮನ್ಯಾಗೆ ಲೆಟ್ರಿನ್ ಇತ್ತು. ಇಲ್ಲಿ ಬಯಲಿಗೆ ಹೋಗೋಕೆ ಸುತ್ರಾಂ ಒಪ್ತಿಲ್ಲ. ಚೊಂಬು ಹಿಡಿಯಾಕಿಲ್ಲ ಅಂದ್ಲು. ಕೊನೀಗೆ ಸಣ್ಣ ಹುಡ್ಗಿ ಅಂತ ನನ್ನ ಅವಳ ಹಿಂದೆ ಚೊಂಬು ಹಿಡ್ಕೊಂಡು ಮೆರವಣಿಗೆ ಕಳಿಸಿದ್ರು. ಥೋ, ನಂಗೋ ಕೋಪ. ಅವಳ ಹಿಂದೆ ಹೋಗಿ, ಚೊಂಬು ಕೊಟ್ಟೆ. ಆ ನೀರು ಸಾಲಲಿಲ್ಲ ಅಂತ ಅಲ್ಲೇ ಕುಂತ್ಲು. ಇನ್ನೊಂದು ಚೊಂಬು ತರಾಣಿ ಅಂತ ಹೊಂಟ್ರೇ, ಚೊಂಬು ಸಾಲಾಕಿಲ್ಲ, ಬಿಂದಿಗೇಲಿ ತತ್ತಾ ಅಂತ‌ ಹಠ. ದೇವ್ರೇ, ಬ್ಯಾಡ ನನ್ ಕತೆ. ಮನೇಗೆ ಹೋಗಿ ಸಣ್ಣ ಬಿಂದಿಗೆ ತಗೊಂಡು ಬರ್ತಿದ್ರೆ, ರಸ್ತೆನಾಗಿನ ಜನವೆಲ್ಲ ಬಿದ್ದು ಬಿದ್ದು ನಗಾಡಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಕುರಿತ ಬರಹ

Read More

ಸುತ್ತೂರ್ಗೊಂದೇ ಗೌರ್ಮೆಂಟು ಇಸ್ಕೂಲ್: ಸುಮಾ ಸತೀಶ್ ಸರಣಿ

ಅಲ್ಲಾ ನಮ್‌ ಮೇಷ್ಟ್ರು ಹೇಳಿರೋ ಸಿನ್ಮಾ‌ ಇದೇನಾ ಅಂತ ಕಣ್ಣು ತಿಕ್ಕೊಂಡು ಇನ್ನೊಂದು ದಪ ನೋಡಿದ್ರೂ ಆ ಪಟಗ್ಳು ವಸೀನೂ ಬದಲಾಗ್ಲೇ ಇಲ್ಲ. ‘ಅಯ್ ಇದೇನಮ್ಮಿ ನಮ್ಮೇಷ್ಟ್ರು ಕುಲಗೆಟ್ಟೋಗವ್ರೆ. ಅಲ್ಲಾ ವಾಗಿ ವಾಗಿ ಇಂತ ಸಿನಿಮ್ವೇ ನಮ್ಮಂತ ಸಣ್ಣೈಕ್ಳುಗೆ ನೋಡಾಕ್ ಯೇಳಾದು. ತಗ್ ತಗಿ ಯಾರಾದ್ರೂ ಮರ್ವಾದಸ್ಥರು ನೋಡೋ ಸಿನಿಮ್ವೇ ಇದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮಕ್ಕಳು ಸಿನಿಮಾ ನೋಡಿದ ಪ್ರಸಂಗ ನಿಮ್ಮ ಓದಿಗೆ

Read More

ಇಸ್ಕೂಲ್ ಅನ್ನೋ ವಿಸ್ಮಯಲೋಕ: ಸುಮಾ ಸತೀಶ್ ಸರಣಿ

ಶಾಲೆ ಹಿಂಭಾಗದಲ್ಲಿ ಆಟದ ಮೈದಾನವಿತ್ತು. ಸಂಜೆ ಶಾಲೆ ಬಿಟ್ಟ ಮೇಲೆ ಮನೇಲಿ ಚೀಲ ಇಟ್ಟು, ಒಂದಿಬ್ಬರು ಗೆಳತೀರ ಜೊತೆ ಮತ್ತೆ ಇಸ್ಕೂಲಿಗೆ ಬಂದು ಹಳದಿ ಪಟುಕದ ಮೊಗ್ಗು ಕೀಳೋದು. ನಮ್ ತೋಟ್ದಲ್ಲಿ ತರಹೇವಾರಿ ಹೂವಿನ ಗಿಡವಿದ್ರೂ ಇದ್ರ ಮೇಲೇ ಕಣ್ಣು. ಪೈಪೋಟಿ ಮೇಲೆ ಮೊಗ್ಗು ಕೊಯ್ಯೋದು. ಗಿಡದ ತುಂಬಾ ಮುಳ್ಳುಗಳು. ‌ಕೈ ಎಲ್ಲ ತರಚಿ ಹೋಗ್ತಿತ್ತು. ಅದರ ನೆದರೇ ಇರ್ತಿರಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಶಾಲಾದಿನಗಳ ಕುರಿತ ಬರಹ

Read More

ಕದಿರಪ್ಪನ ಪರಿಷೆ: ಸುಮಾ ಸತೀಶ್ ಸರಣಿ

ಸ್ಯಾನೆ ವಿಸೇಸವಾದ್ದು ಅಂದ್ರೆ ಆಟುದ್ ಸಾಮಾನಿನ ಬುಟ್ಟಿಗ್ಳು. ಕಾರು ಬೈಕು ಅಲ್ಲ ಬುಡಿ. ಆ ಬುಟ್ಟಿಗ್ಳಾಗೆ ಬುಡಿಗೆಗಳು ಇರ್ತಿದ್ವು. ಎಲ್ಡು-ಮೂರು ಬೆಟ್ಟಿನ ಗಾತ್ರದ ಮಣ್ಣಿನ‌‌ ಮಡಿಕೆ ಕುಡಿಕೆಗಳು, ಒಲೆ, ಬಟ್ಟಲು, ಮುಚ್ಚಳ, ಸೌಟು, ಹಂಚು ಇಂತಾ ಅಡ್ಗೆ ಮನೆ ಸಾಮಾನು. ಹುಡುಗೀರೆಲ್ಲಾ ಅಲ್ಲೇ ಸೇರ್ಕಂಡು ಒಬ್ಬಳು ಬಟ್ಟಲು ತಕಂಡ್ರೆ, ಇನ್ನೊಬ್ಬಳು ಒಲೆ ತಕಣಾದು. ಐದು ಪೈಸೆ, ಹತ್ತು ಪೈಸೆ, ಜಾಸ್ತಿ ಅಂದ್ರೆ ನಾಕಾಣೆ ಇರ್ತಿದ್ವು. ನಮ್ಗೋ ತಲಾಕೈವತ್ತು ಪೈಸೇ ಸಿಕ್ತಿದ್ರೆ ಹೆಚ್ಚು.‌
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More
  • 1
  • 2

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ