ಸ್ರೀರಾಮ್ನೋಮಿ: ಸುಮಾ ಸತೀಶ್ ಸರಣಿ
ರಾಮುನ್ನ ಒಲಿಸ್ಕಣಾದು ಕಷ್ಟ. ಹನುಮಂತನ್ನ ಒಲಿಸ್ಕಣಾದು ಸುಲ್ಬ. ರಾಮಾ ಅಂದ್ರೆ ಸಾಕು ಹನುಮ ಓಡೋಡ್ಕಂಡು ಬರ್ತಾನೆ. ಆಗ ಬ್ಯಾರೆ ಆಟ ಕಟ್ದೆ ರಾಮ್ನೂ ಹಿಂದಿಂದ್ಲೇ ಬತ್ತಾನೆ ಅಂಬೋದು ಅಜ್ಜಿ ಯೋಳ್ತಿದ್ದ ಇಚಾರ. ಅಂಗಾಗಿ ರಾಮನ ಹತ್ರುಕ್ಕೆ ಹೋಗಾಕೆ ಸಲೀಸು ಹನುಮಂತನ ಭಜನೆ ಮಾಡೋದು. ಹನುಮ ಕಪಿ ಅಲ್ವೇ. ಕಿಚಪಿಚಾಂತ ನಾವೂ ಕಪಿಗಳಂಗೇ ಭಜನೆ ಹಾಡ್ತಿದ್ವಿ. ಮರದಾಗಿರೋವೂ ಜಾತಿಪ್ರೀತಿಗೆ ಓಡಿಬರೋ ಅಂಗೆ ಇರ್ತಿತ್ತು ನಮ್ಮ ಆಲಾಪ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ
