Advertisement
ಸುಮಾ ಸತೀಶ್

ಸುಮಾ ಸತೀಶ್‌ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ),  ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು),  ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.

ಕಂಕುಳಲ್ಲಿ ಕತೆ ಪುಸ್ತಕ, ಎದೆಯಲ್ಲಿ ಕಥಾಸಾಗರ: ಸುಮಾ ಸತೀಶ್‌ ಸರಣಿ

ಅಂಗೆ ನೋಡಿದ್ರೆ ನಮ್ಮ‌ ನಾಗೂ ಅತ್ತೆಗೆ ಅಕ್ಷರಾನೇ ತಲೆಗೆ ಹತ್ತಲಿಲ್ಲ.‌ ಕೊನೆಗೆ ಅವರಿಗೆ ಸಂಗೀತ ಕಲಿಸಲು ಹಾರ್ಮೋನಿಯಂ ಮೇಷ್ಟ್ರನ್ನ ಕರೆಸಿದ್ರು. ಆ ಮೇಷ್ಟ್ರು ಮೊದಲು ಕಾಗುಣಿತ ತಿದ್ದಿಸಿ ಆಮೇಲೆ ಸಂಗೀತ ಹೇಳಿಕೊಟ್ಟಿದ್ದರು. ನಮ್ಮತ್ತೆಯ ಅಲ್ಪಪ್ರಾಣ ಮಹಾಪ್ರಾಣಗಳಿಗೆ ಜೀವ ತುಂಬಿದರು ಮೇಷ್ಟ್ರು. ಮೊದಲೇ ಕಲ್ಪನಾ ಚತುರೆ ಅತ್ತೆ. ಅಕ್ಷರಾನೂ ಬಂದ ಮೇಲೆ ಕತೆ ಬರೇಯೋಕೆ ಶುರು ಮಾಡಿದ್ರು. ಇಷ್ಟೇ ಅಲ್ಲ, ಅಕ್ಕಂದಿರ ಮಕ್ಕಳನ್ನು ಬಳಿ ಕೂರಿಸಿಕೊಂಡು ಸ್ವಾರಸ್ಯಕರವಾಗಿ ಕತೆ ಕಟ್ಟಿ ಹೇಳುವ ಕಲೆ ಇವರಲ್ಲಿ ಸೊಗಸಾಗಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಊರ ಮಾರಮ್ಮನ ಪರಿಸೆ: ಸುಮಾ ಸತೀಶ್ ಸರಣಿ

ನಾವೂ ಚಿಕ್ಕವರಿರುವಾಗ ಸನಿ ಸನಿವಾರ ಈರಾಪುರಕ್ಕೆ ಕಾಯಮ್ಮಾಗಿ ಹೋಗ್ತಿದ್ವಿ. ಅಲ್ಲಿ ಅಕ್ಕ ಪಕ್ಕದ ಬೀದಿಗ್ಳಾಗೆ ಸನಿ ಮಾತ್ಮ ಮತ್ತೀಗ ಈರಬದ್ರಸೋಮಿ ಗುಡೀಗ್ಳೂ ಅವ್ವೆ. ‌ಈರಬದ್ರನ‌ ಗುಡೀನಾಗೇ ಸಾಮಿಗೆ ಪಂಚಲೋಹುದ್ದು ಕಣ್ಣು ಮೀಸೆ ಮೆತ್ತಿತ್ತು. ಅದ್ನ ನೋಡ್ತಿದ್ದಂಗೇ ಬೋ ಕ್ವಾಪ್ವಾಗವ್ನೆ ಅಂತ ಅನ್ನುಸ್ತಿತ್ತು. ಮುಂದ್ಕಿರಾ ಜಾಗ್ದಾಗೆ ಲಿಂಗಧೀರರ ಬಟ್ಟೆ‌ ಬೊಂಬೇನೂ ಇಕ್ಕಿದ್ರು. ಕಣ್ ಅಳ್ಳಿಸಿಕಂಡು ನೋಡ್ತಿದ್ವು. ಪರಿಸೇನಾಗೆ ಅವ್ರ ಕುಣ್ತ ಕಂಡು‌ ನಮ್ಗೆ ತೇಟು ಬೊಂಬೇನೇ ನೋಡ್ದಂಗಾಗಿ, ಅದೇ ಏನಾರಾ ಎದ್ದು ಬಂದೈತೋ ಏನೋ‌ ಅಂಬಂಗಾಗ್ತಿತ್ತು. ಆದ್ರೆ ಅದು ಆಳೆತ್ರುಕ್ಕಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಮ್ಮ ಪರಿಸೆಗಳು: ಸುಮಾ ಸತೀಶ್ ಸರಣಿ

ಬಂಗಾರುದ್ ಕಾಟುಮಲಿಂಗೇಶ್ವರುನ್ನ ವರ್ಸುಕ್ಕೆ ಎಲ್ಡು ದಪ ಮಾತ್ರ ತೆಗ್ದು ಊರಾಚೇಗ್ಳ ಗುಡೀಗೆ ತಕಾ ಬರ್ತಾರೆ. ಅದ್ಕೆ ಮುಂದ್ಲೇ‌ ಆ ಲಿಂಗುದ್ ತೂಕ ಬರ್ದು ಮಡ್ಗಿ, ವಾಪ್ಸು ಇಕ್ಕಾ ಮದ್ಲು ಇನ್ನೊಂದು ದಪ ತೂಕ ನೋಡಿ ಮಡುಗ್ತಾರೆ. ಸಿವರಾತ್ರಿ ಪರಿಸೇ ಟೇಮ್ ನಾಗೆ ಒಂದು ಕಿತ, ಕಾರ್ತೀಕದಾಗೆ ಕೊನೇ ಸೋಮವಾರ ಇನ್ನೊಂದು ಕಿತ ದ್ಯಾವ್ರಿಗೆ ಹೊರುಕ್ ಬರಾಕೆ ಮೋಕ್ಷ ಸಿಕ್ತೈತೆ. ಜನುರ್ಗೂ ಕಣ್ ತುಂಬ್ಕಣಾಕೆ ಆಗ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಮಂತ್ರುಕ್ಕೆ ಮಾವಿನ್ ಕಾಯೂ ಉದುರ್ತೈತೆ: ಸುಮಾ ಸತೀಶ್ ಸರಣಿ

ಊಟ ಸೇರ್ದಿದ್ರೆ, ಉಸಾರು ತಪ್ಪೀರೆ ದಿಷ್ಟಿ ಮಂತ್ರ ಹಾಕೋರು. ಇದ್ರಾಗೆ ನಾಕು ತರ. ಸೆರಗು ನಿವಾಳ್ಸಿಕಂತಾ ಮಂತ್ರ ಹಾಕೋದು ಒಂದು ರಕಮಾದ್ರೆ, ಇಬೂತಿ(ವಿಭೂತಿ), ಸಕ್ಕರೆ, ಉಪ್ಪು ಮಂತ್ರಿಸಿ ಕೊಡೋದು ಬ್ಯಾರೆ ರಕಮುಗ್ಳು. ಅವ್ರೇ ಬಂದ್ರೆ ಸೆರಗು ನಿವಾಳ್ಸಿ ಮಂತ್ರ ಹಾಕೋರು. ಅವುರ್ ಬದ್ಲಿ ಬ್ಯಾರೆಯೋರ್ ಬಂದ್ರೆ ಉಪ್ಪೋ ಸಕ್ಕರೇನೋ ಮಂತ್ರಿಸಿ ಊಟದಾಗೆ ಕಲ್ಸಿ ಕೊಡೋಕೆ ಹೇಳೋರು. ಇಬೂತಿ ಆದ್ರೆ ಹಣೆ ಮ್ಯಾಗೆ ಹಚ್ಚೋಕೆ‌ ಹೇಳೋರು. ಮಂತ್ರ ಬಿದ್ದ ಮ್ಯಾಕೆ ಊಟ ತಿಂಡಿ ಸರ್ಯಾಗಿ ಸೇರೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಲೇಖಕರ ಅಜ್ಜಿ-ಅಜ್ಜಂದಿರು ಹಾಕುತ್ತಿದ್ದ ಅಂತ್ರ-ಮಂತ್ರಗಳ ಕುರಿತ ಬರಹ ನಿಮ್ಮ ಓದಿಗೆ

Read More

ಭೂಮ್ತಾಯಿ ಮ್ಯಾಗ್ಳ ಗಿಡ ಗಂಟಿ ಬುಟ್ರೆ ದಿಷ್ಟಿ ನಿವಾಳ್ಸೋದೇ ದೊಡ್ಡ ಮದ್ದು: ಸುಮಾ ಸತೀಶ್

ನಾವು ಉಣ್ಣಾವಾಗ ಒಂದು ಕಡಿಕ್ಕೆ ಕುಂತು ಉಂಡು, ಗೋಮೆ ಇಕ್ಕಿ ಎದ್ದೇಳ್ ಬೇಕು. ಅದ್ ಬುಟ್ಟಿ ಓಡಾಡೋ ಜಾಗದಾಗೆ ಉಂಡ್ರೆ, ತಟ್ಟೆಗ್ಳಾಗಿಂದ ಮುಸ್ರೆ ಪಸ್ರೆ ಚೆಲ್ಲಾಕಿಲ್ವೇ? ಅದುನ್ನ ಯಾರಾನಾ ತುಳುದ್ರೆ ಕಾಲ ರಂಜು ಆಗ್ತೈತೆ ಅಂತಿದ್ರು. ಭೂಮ್ತಾಯಿ ಕೊಡಾ ಅನ್ನವಾ ಅಂಗೆ ಮರ್ವಾದೆ ಇಲ್ದಂಗೆ ಚೆಲ್ಲೀರೆ, ಅದ್ನ ತುಳ್ದು ಪಳ್ದು ಮಾಡೀರೆ ನಮ್ಗೆ ಒಳ್ಳೇದಾಯ್ತೈತೆ? ಅಂಬೋರು. ಇದೂ ಒಂತರಾ ದಿಟವೇಯಾ. ಕಿಲೀನ್ ಆಗಿರ್ಬೇಕು ಅಂಬ್ತ ಪಾಠ ಹೇಳ್ತೈತೆ. ಭೂಮ್ತಾಯಿ ಕೊಡಾ ಪ್ರಸಾದ್ವ ಚೆಲ್ಬಾರ್ದು ಅಂತ್ಲೂ ಹೇಳ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಮದ್ದುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ