Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ

ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ

Read More

ಮನುಷ್ಯ ಮೃಗವಾಗುತ್ತಿರುವನೆ?: ಸುಮಾವೀಣಾ ಸರಣಿ

ವಾಹನಗಳ ವಿಚಾರಕ್ಕೆ ಬಂದಾಗ ಗಾಳಿ ಇದ್ದರೆ ಗಾಲಿ ಓಡಲು ಸಾಧ್ಯ ಅಲ್ವೆ! ಸ್ವಲ್ಪ ಗಾಳಿ ಹೆಚ್ಚಾದರೂ ವಾಹನಗಳಾಗಲಿ, ಮನುಷ್ಯನಾಗಲಿ ಇರುವುದಿಲ್ಲ. ಗಾಳಿ ಹೆಚ್ಚಾಗಿ ಸೈಕಲ್ ಬರ್ಸ್ಟ್ ಆಯಿತು. ಅದೇ ಗಾಳಿ ಇಲ್ಲದೆ ಹೋದರೆ ಅದು ಓಡುವುದೇ ಇಲ್ಲ ಪಂಚರ್ ಆಗುತ್ತದೆ. ಅಂತೆಯೇ ಮಾನವ ಉಸಿರುಗಟ್ಟಿ ಸಾಯುತ್ತಾನೆ. ಹೌದು! ಮಾನವನ ಬದುಕು ಉಸಿರು ಹೋದಾಗ ‘ಸತ್ತರು’, ‘ಅದು’, ‘ಇದು’, ‘ಶವ’ ಎಂಬುದಾಗಿ ಮಾತನಾಡುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೊಂದನೆಯ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ