Advertisement

ಎಚ್. ಗೋಪಾಲಕೃಷ್ಣ

ವರ್ಷಕಾಲದಲ್ಲಿ ಸಂಭ್ರಮಾಚರಣೆಯ ಸಂಕಷ್ಟಗಳು: ಸುಮಾವೀಣಾ ಸರಣಿ

ನಮ್ಮ ಟೀಚರ್ಸ್ ಡೇ ಸೆಲೆಬ್ರೇಷನ್ನಿಗೂ ಮಳೆರಾಯ ತಪ್ಪದೆ ಹಾಜರಿ ಹಾಕುತ್ತಿದ್ದ. ಯಾವಾಗಲು ಸೆಪ್ಟೆಂಬರ್ 4 ರ ಮಧ್ಯಾಹ್ನ ಕಾರ್ಯಕ್ರಮ ನಿಗದಿಯಾಗಿರುತ್ತಿತ್ತು. ಕಾರ್ಯಕ್ರಮ ಪ್ರಾರಂಭವಾಗಿ ಸ್ವಾಗತ ಉದ್ಘಾಟನೆ ಮೊದಲಾದ ಔಪಚಾರಿಕ ಕಾರ್ಯಕ್ರಮ ಮುಗಿದು ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುವ ಹೊತ್ತಿಗೆ ಹಾಡು ಕೇಳದಷ್ಟು ಜೋರು ಮಳೆ. ಮುಸಿ ಮುಸಿ ನಗುತ್ತಾ ಬರೆ ಡಾನ್ಸ್ ನೋಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಆ ದಿನಗಳ ನೆನಪಿದೆಯಾ ನಿಮಗೆ?: ಸುಮಾವೀಣಾ ಸರಣಿ

ಅದೆಷ್ಟು ದಿನ ಚಂಡಿ ಬಟ್ಟೆಯಲ್ಲಿಯೇ ತರಗತಿಗಳನ್ನ ಕೇಳಿದೆವು ನಾವು? ಚಳಿ ಹೆಚ್ಚಾಗಿ ಬಾಟನಿ ಲ್ಯಾಬ್ ಹತ್ತಿರ ಹಾಕುತ್ತಿದ್ದ ಅಗ್ಗಿಸ್ಟಿಕೆ ಬಿಸಿಗೆ ಹೋಗಿ ನಿಲ್ಲುತ್ತಿದ್ದ ದಿನಗಳು ನೆನಪಾಗುತ್ತವೆ. ಆ ಲ್ಯಾಬಿನ ಬಳಿ ಇರುತ್ತಿದ್ದ ಸಿರಿಬಾಯಿ ಅಂಕಲ್ ನಮ್ಮನ್ನು ನೋಡಿದ ಕೂಡಲೆ ಬನ್ನಿ ಬನ್ನಿ ಎಂದು ಕರೆದು ಇನ್ನಷ್ಟು ಇದ್ದಿಲನ್ನು ಹಾಕಿ ಕೆಂಡ ಮಾಡುತ್ತಿದ್ದದ್ದು ಇನ್ನೂ ಕಣ್ಣಿಗೆ ಕಟ್ಟಿದಂತಿದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯಲ್ಲಿ ಸ್ನೇಹಿತರ ದಿನಕ್ಕೆ ಬರೆದ ಪತ್ರ ಇಲ್ಲಿದೆ

Read More

ಕೊಡಗಿನ ಮೊಟ್ಟೆಯೂ… ಮದ್ದು ಪಾಯಸವೂ: ಸುಮಾವೀಣಾ ಸರಣಿಸ

ಕೊಡವರಲ್ಲಿ ಕಕ್ಕಡ ಪದಿನೆಟ್ಟು, ಆಟಿಪದಿನೆಟ್ಟು, ಅತ್ಯಂತ ಮಹತ್ವವನ್ನು ಪಡೆದುಕೊಂಡಿರುವ ಈ ಜಾನಪದೀಯ ಪರ್ವ ಕೃಷಿಕರ ಪಾಲಿಗೆ ಮಹಾಪರ್ವವೆಂದೇ ಹೇಳಬಹುದು. ಆದರೆ ಮದುವೆ ಮುಂತಾದ ಶುಭ ಕಾರ್ಯಗಳಿಗೆ ಈ ಮಾಸ ನಿಷಿದ್ಧ. ಜೊತೆಗೆ ಗ್ರಾಮೀಣ ಭಾಗದ ದೇವಾಲಯಗಳಲ್ಲೂ ನಿತ್ಯ ಪೂಜೆಯನ್ನು ಸ್ಥಗಿತಗೊಳಿಸುವುದು ವಾಡಿಕೆ. ಈ ವರ್ಷ ಆಗಸ್ಟ್ 3 ನೆ ತಾರೀಖು ಈ ಆಚರಣೆ ಇದೆ. ಸರಿ ಸುಮಾರು ಮುಂಗಾರಿನ ಭತ್ತದ ನಾಟಿ ಮಾಡಿ ಮುಗಿಯುವ ಕಾಲಕ್ಕೆ ಈ ಆಟಿ ಹದಿನೆಂಟರ ಆಚರಣೆ ಇರುತ್ತದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಬರವಣಿಗೆಯ ಶಿಸ್ತನ್ನು ಕಲಿಸಿದ ಸಿಸ್ಟರ್ ಲಾರೆನ್ಸಿಯಾ: ಸುಮಾವೀಣಾ ಸರಣಿ

ಸಿಸ್ಟರ್ ಲಾರೆನ್ಸಿಯ ಅವರಿಗೆ ಗಾರ್ಡೆನಿಂಗ್ ಅಂದರೂ ಇವರಿಗೆ ಬಹಳ ಇಷ್ಟವಿತ್ತು. ನಮ್ಮ ತರಗತಿಯ ಮುಂದೆ ಇದ್ದ ಹೂತೋಟದಲ್ಲಿ ಚಂದದ ಗಿಡಗಳನ್ನು ಬೆಳೆಸಿದ್ದರು. ಅದರಲ್ಲಿ ದಾಳಿಂಬೆ ಬಣ್ಣದ ಪಾಪಿ ಹೂಗಳು ಅರಳುತ್ತಿದ್ದುದನ್ನು ಅದರ ನಯವಾದ ಎಸಳುಗಳನ್ನು ಇವತ್ತಿಗೂ ಮರೆಯಲಾಗುತ್ತಿಲ್ಲ. ತಮ್ಮ ತಲೆಯ ವಸ್ತ್ರವನ್ನು ಸರಿ ಮಾಡಿಕೊಂಡು ಬಗ್ಗಿ ಕೆಲಸ ಮಾಡುತ್ತಿದ್ದರು. “ಮುಂದೆ ಮಿಡ್ಲ್ ಸ್ಕೂಲಿಗೆ ಹೋಗುತ್ತೀರ ಚಂದ ಕಲಿತು ಹೋಗಬೇಕು” ಎಂದು ಪದೇ ಪದೇ ಹೇಳುತ್ತಿದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ನಾಲ್ಕನೆಯ ಬರಹ

Read More

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ