Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ , ‘ಲೇಖ ಮಲ್ಲಿಕಾ’, 'ವಿಚಾರ ಸಿಂಧು’  ಸೇರಿ ಇವರ ಒಟ್ಟು ಎಂಟು ಪುಸ್ತಕಗಳು ಪ್ರಕಟವಾಗಿವೆ.

ಅನೇಕಾನೇಕ ಹೊಳಹುಗಳು….

ಯಾರೂ ಇಲ್ಲದೇ ಇರುವ ಸ್ಥಳದಲ್ಲಿ ತನ್ನದೇ ಹೆಜ್ಜೆಯನ್ನು ಇನ್ಯಾರದೋ ಎಂದು ನೋಡುವುದು ಒಂಟಿತನ ಸ್ಥಿರವಲ್ಲ ಕಷ್ಟ ಎಂಬುದನ್ನು ಅರ್ಥೈಸುತ್ತದೆ. ವಿಶಾಲ ಬದುಕಿನಲ್ಲಿ ಆಸೆ ಇರಿಸಿಕೊಂಡವನು ಇರುವ ಚಾಕುವಿನಲ್ಲಿಯೇ ಬೇಟೆಯಾಡುವ ಅಭ್ಯಾಸ ಪ್ರಾರಂಭಿಸುತ್ತಾನೆ ಪ್ರಯೋಗಕ್ಕೂ ಅಭ್ಯಾಸಬಲವಿರಬೇಕು ಎಂಬುದು ಇಲ್ಲಿ ಸಾಬೀತಾಗುತ್ತದೆ. ಅಂತರಾಷ್ಟ್ರೀಯ ಗುಪ್ತಚರ ಬಳಗದವನು ನಾನು ಹಾಗೆ….! ನಾನು ಹೀಗೆ….!
ಕೆ.ವಿ. ತಿರುಮಲೇಶರ “ಅನೇಕ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಕಾದಂಬರಿಗಳಲ್ಲಿ ತಿರುಮಲೇಶರ ಅನನ್ಯತೆ

ಕಾದಂಬರಿಯ ನಿಜ ಸತ್ವ ಅಡಗಿರುವುದು ಕಾದಂಬರಿಯ ಮೂವತ್ತಮೂರನೆ ಅಧ್ಯಾಯದಲ್ಲಿಯೇ. ಕಾದಂಬರಿಯ ಆರಂಭಕ್ಕೆ ಬಂದ ಕಮಲ ಕಡೆಗೂ ಬರುತ್ತಾಳೆ. ಬೀಡಿ ಹೊಸೆದೂ ಹೊಸೆದೂ ಕುಟುಂಬ ನಿಭಾಯಿಸಿದಷ್ಟೂ ತನ್ನ ಖುಷಿಗಳನ್ನು ಹೊಸಕಿ ಹಾಕುತ್ತಿರುತ್ತಾಳೆ. ಕೈಯಲ್ಲಿ ಕೆಲವೇ ರುಪಾಯಿಗಳನ್ನು ಹಿಡಿದು ಪೇಟೆಗೆ ಹೋಗುವ ಆಕೆ ರಿಸ್ಟ್ ವಾಚನ್ನು ನೋಡುತ್ತಾಳೆ. ತೆಗೆದುಕೊಳ್ಳುವುದಿಲ್ಲ. ಬಣ್ಣ ಬಣ್ಣದ ಸೀರೆಯನ್ನು ನೋಡುತ್ತಾಳೆ ಅದಕ್ಕೆ ಹೊಂದಿಕೆಯಾಗುವ ರವಿಕೆಯನ್ನೂ ನೋಡುತ್ತಾಳೆ. ಇನ್ನೊಮ್ಮೆ ಇನ್ನೊಮ್ಮೆ ಎಂದು ತನ್ನ ಬಯಕೆಗಳನ್ನು ಮುಂದೆ ಹಾಕುತ್ತಲೇ ಅಂಗಡಿಯವನು ಬೇರೆ ಗಿರಾಕಿಗಳ ಕಡೆ ಗಮನ ಕೊಟ್ಟಾಗ ತಾನು ಸದ್ದಿಲ್ಲದೆ ಅಂಗಡಿಯಿಂದ ಹೊರಬರುತ್ತಾಳೆ.
ಕೆ.ವಿ. ತಿರುಮಲೇಶರ “ಆರೋಪ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಫ್ಲೈಟ್ ತಪ್ಪಿಸಿದ ಮೆಹೆಂದಿ ಮತ್ತು ನಾನು

ಯುವತಿಯೊಬ್ಬಳ ಭಾರೀ ಕನ್ನಡಕದಿಂದ ಪ್ರೇರಿತರಾದ ನಾವು ತಂಪು ಕನ್ನಡಕವನ್ನು ಹುಡುಕಿ ಹಾಕಿಕೊಂಡವು. ತಲೆಯನ್ನೊಮ್ಮೆ ನೇವರಿಸಿಕೊಳ್ಳಬೇಕೆಂದಾಗಲೇ ನಮಗೆ ಹೊಳೆದದ್ದು ನಮ್ಮ ತಲೆಯ ಮೆಹೆಂದಿಗೆ ಜಲಭಾಗ್ಯ ಕರುಣಿಸಿಲ್ಲವೆಂದು. ಅಷ್ಟರಲ್ಲಾಗಲೇ ನಮ್ಮ ಕೈಗೆ ಬೋರ್ಡಿಂಗ್ ಪಾಸ್ ದೊರೆಯಿತು. ಯಾವ ಲೌಂಜಿನಲ್ಲಿ ಕುಳಿತುಕೊಳ್ಳಬೇಕೆಂಬ ವಿವರ ಪಡೆದುಕೊಂಡೆವು. ಹಾಗೆ ಅತ್ತಿಗೆ ನಾದಿನಿಯರಿಬ್ಬರೂ ಒಬ್ಬರ ಮುಖವನ್ನೊಮ್ಮೆ ನೋಡಿಕೊಂಡೆವು… ನಗು ಬರಲಿಲ್ಲ. ನಮ್ಮ ಅವಾಂತರಕ್ಕೆ ಸಿಟ್ಟು ಬರುತ್ತಿತ್ತು. ಲೌಂಜಿನಲ್ಲೊಮ್ಮೆ ನಮ್ಮ ಲಗೇಜನ್ನು ಕುಕ್ಕರಿಸಿ ವಾಶ್ ರೂಮಿಗೆ ದೌಡಿಟ್ಟೆವು.
ಸುಮಾವೀಣಾ ಬರೆದ ಅನುಭವ ಕಥನ ನಿಮ್ಮ ಓದಿಗೆ

Read More

ಮಕ್ಕಳಾಟವನ್ನು ಭಗವಂತ ಕೂಡ ಆಡಲಾರನು

ಬೆಕ್ಕಿನ ಮರಿ, ಗುಬ್ಬಿಯ ಧ್ವನಿ, ಮ್ಯಾಚಿಂಗ್ ರಿಬ್ಬನ್ ಎಂಬೆಲ್ಲಾ ಬಣ್ಣದ ಲೋಕದೊಂದಿಗೆ ಬದುಕಿನ ಸತ್ಯವನ್ನು ಪರಿಚಯಿಸುವ ಸರಳ ಕವಿತೆಗಳನ್ನು ಬರೆದಿರುವ ಕೆ.ವಿ. ತಿರುಮಲೇಶ್ ಅವರು ಮಕ್ಕಳ ಮನೋಲೋಕದೊಳಗೆ ಸದ್ದಿಲ್ಲದೆ ಹೆಜ್ಜೆಯಿರಿಸಿದ್ದಾರೆ.
“ಚಿಕ್ಕಣಿ ರಾಜ” ಎಂಬ ಬಣ್ಣದ ಚಿತ್ರಗಳಿರುವ ಸುಂದರ ಕವಿತಾ ಸಂಕಲನದ ಅನನ್ಯತೆಯ ಕುರಿತು ಸುಮವೀಣಾ ಅವರು ಬರೆದ ಟಿಪ್ಪಣಿ ಇಲ್ಲಿದೆ.

Read More

ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’

ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿಷರಿಂದ ಶಿಕ್ಷೆಗೊಳಗಾಗಿ, ಆರು ತಿಂಗಳುಗಳನ್ನು ಹಿಂಡಲಗ ಸೆರೆಮನೆಯಲ್ಲಿ ಕಳೆದು, ಅಲ್ಲಿಂದ ತಿರುಗಿ ರೈಲಿನಲ್ಲಿ ತಮ್ಮೂರಿಗೆ ಬರುವ ಹಾದಿಯನ್ನೇ ಲೇಖಕರು ‘ಕಾರವಾನ್’ ಕಥನದ ಅನಾವರಣಕ್ಕೆ ಬಳಸಿಕೊಂಡಿದ್ದಾರೆ. ಬಸವರಾಜ ಕಟ್ಟೀಮನಿಯವರ ಕಾರವಾನ್ ಕತೆಯ ಕುರಿತು ಸುಮಾವೀಣಾ ಅವರ ಬರಹ ಇಲ್ಲಿದೆ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ