Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಉಸಿರೇ….. ಉಸಿರು……: ಸುಮಾವೀಣಾ ಸರಣಿ

‘ಉಸಿರಿ’ನ ಹೇಳಿಕೆ ಇಲ್ಲಿಗೆ ಮುಗಿಯಲಿಲ್ಲ, ಇನ್ನೂ ಇದೆ. ‘ಉಸಿರು’ ಈ ಪದದ ಅಕ್ಷರಗಳನ್ನು ಕೊಂಚ ಅದಲು-ಬದಲು ಮಾಡಿದರೆ‘ಉರು(ಸು)ಸ್’ ಆಗುತ್ತದೆ. ಅಂದರೆ ಮುಸಲ್ಮಾನರ ಧಾರ್ಮಿಕ ಆಚರಣೆ ಎಂದಾಗುತ್ತದೆ. ಇನ್ನೂ ಉಸಿರಿನ ಅಕ್ಷರಗಳನ್ನು ಅದಲು ಬದಲು ಮಾಡುತ್ತೇವೆ ಎಂದರೆ ‘ಉರಿಸು’ ಎಂದಾಗುತ್ತದೆ. “ಮನೆಮನೆಯಲ್ಲಿ ದೀಪ ಉರಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ ತಂದೆ ಮಗುವ ತಬ್ಬಿದಾಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ?’’ ಎಂಬ ಜಿ.ಎಸ್. ಎಸ್ ಅವರ ಕವನದ ಸಾಲುಗಳು ನೆನಪಾಗದೆ ಇರುತ್ತವೆಯೇ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹನ್ನೊಂದನೆಯ ಬರಹ ನಿಮ್ಮ ಓದಿಗೆ

Read More

ಮೊರಸಾರ್ಸಕೆ….. ಮರಾ….ಕಲ್ಮುಳ್ಳು…. ಕಲ್ಮುಳ್ಳು…..: ಸುಮಾವೀಣಾ ಸರಣಿ

ಬಿದಿರಿನ ನಾನಾ ರೀತಿಯ ಮನೆ ಬಳಕೆ ವಸ್ತುಗಳು ಅಂದರೆ ಕುಕ್ಕೆ, ಗೂಡೆ, ಅನ್ನ ಬಸಿಯುವ ಚಿಬ್ಬಲು ಮಳೆಗಾಲದಲ್ಲಿ ಬಟ್ಟೆ ಒಣಗಿಸುವ ಪಂಜರಗಳು ಆಧುನಿಕತೆ ಬಂದಂತೆ ಕಡಿಮೆಯಾಗುತ್ತಿವೆ. ಅದಕ್ಕೆ ಪರ್ಯಾಯವಾಗಿ ಮೇದಾರರು ಬಿದಿರಿನಲ್ಲಿಯೇ ಗೃಹಾಂಲಕಾರಿಕ ವಸ್ತುಗಳು ಅಂದರೆ ಹೂದಾನಿಗಳು, ಗೋಡೆಗೆ ಆನಿಸುವಂಥ ಫಲಕಗಳು ಇತ್ಯಾದಿಗಳನ್ನು ಮಾಡಿ ಮಾರಾಟ ಮಾಡುತ್ತಿದ್ದಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತನೆಯ ಬರಹ ನಿಮ್ಮ ಓದಿಗೆ

Read More

ಸೀಮೆಯಿಂದ…. ಸುಗ್ಗಿವರೆಗೆ: ಸುಮಾವೀಣಾ ಸರಣಿ

“ನೀವು ತಿಂದದ್ದಕ್ಕೆ ಹಣ ಕೊಡಬೇಕಿಲ್ಲ ಎಂಥಾ ಸೌಲಭ್ಯವಿದು? ಪುಕ್ಕಟೆಯೇ? ಎಂದು ನೀವು ಕೇಳಬಹುದು ಇಲ್ಲ ಇದಕ್ಕೆ ಉದ್ರಿ ಎನ್ನುವರು. ಕೌಂಟರ್ ಮುಂದೆ ‘ನನ್ನ ಹೆಸರ್ಲೆ ಹಚ್ರಿ ಎಂದು ಹೇಳಿದರೆ ಸಾಕು ಹಚ್ಚುವುದೊಂದೇ ಹಳ್ಳಿ ಫಳಾರದಂಗಡಿಯ ಮಾಲಿಕನ ಕರ್ಮ. ಸುಗ್ಗಿಗೊಮ್ಮೆ ನಾಲ್ಕುಚೀಲ ಜೋಳ ತಂದು ಹೋಟೆಲಿಗೆ ಹಚ್ಚಿದರೆ ಬಾಕಿ ಚುಕ್ತಾ ಆಯ್ತು. ವರ್ಷದವರೆಗೂ ಪೂರಿ, ಬಜಿಗಳನ್ನು ತಿನ್ನುತ್ತಾ ಊರಸುದ್ದಿಯನ್ನು, ಮಾತನಾಡುತ್ತಾ ಎದುರಿಗಿರಲಾರದವರ ಗೇಲಿ ಮಾಡುತ್ತಾ ಹೊತ್ತನ್ನು ಕಳೆಯಬಹುದು” ಎಂಬ ಸಾಲುಗಳು ವೀರೆಂದ್ರ ಸಿಂಪಿಯವರ ‘ಹಳ್ಳಿಯ ಚಹಾ ಹೋಟೆಲುಗಳು’ ಲಲಿತ ಪ್ರಬಂಧದ ಸಾಲುಗಳು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಅನ್ಯಭಾಷಾ ಪದಯಾನಾ: ಸುಮಾವೀಣಾ ಸರಣಿ

ಅನ್ಯಾಭಾಷಾ ಸಂಸರ್ಗದಿಂದ ಕನ್ನಡ ಲಾಗಾಯಿತ್ತಿನಿಂದಲೂ ಅನೇಕ ಶಬ್ದಗಳನ್ನು ಕೊಳ್ಳುತ್ತಲೇ ಬಂದಿದೆ. ಆರ್ಯರು, ಗ್ರೀಕರು, ರೋಮನ್ನರು, ಪಾರಸಿಕರು, ಯವನ, ಪೋರ್ಚುಗಿಸರು, ಫ್ರೆಂಚರು, ಇಂಗ್ಲಿಷರು ಮೊದಲಾದವರ ಸಂಪರ್ಕ ಕನ್ನಡಿಗರಿಗಿತ್ತು. ಜೊತೆಗೆ ಅಕ್ಕಪಕ್ಕದ ದ್ರಾವಿಡ ಭಾಷೆಗಳು ಮತ್ತು ಮರಾಠಿ ಮೊದಲಾದ ಭಾಷೆಗಳು ವ್ಯಾಪಾರ ಸಂಬಂಧಗಳ ಮೂಲಕ ಕನ್ನಡದ ಮೇಲೆ ಪ್ರಭಾವ ಬೀರಿದ ಕಾರಣ ಕನ್ನಡ ಅನೇಕ ಪದಗಳನ್ನು ಅನಾಯಾಸವಾಗಿ ಸ್ವೀಕರಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎಂಟನೆಯ ಬರಹ

Read More

ಸಾದೃಶಾಭಾಸ ಪದಗಳೊಂದಿಗೆ ಸೆಣಸಾಟ: ಸುಮಾವೀಣಾ ಸರಣಿ

ಮಕ್ಕಳಿಗೆ ಕನ್ನಡ ಪುಸ್ತಕವನ್ನು ಓದುವುದೆಂದರೆ ಬಹಳ ತ್ರಾಸಿನ ಕೆಲಸ. ಕಾರ್ಟೂನನ್ನು ನೋಡಿದ ಗುಂಗಿನಲ್ಲಿ ಇದ್ದ ಮಗುವೊಂದು ಸಭಾಸದ ಎಂದೋದಲು ಸಬಾಸ್ಟಿಯನ್ ಎಂದು ಓದಿದ್ದು ನೆನಪಾಗುತ್ತದೆ. ಎಲೆ ಅಡಿಕೆ ಮೆಲ್ಲುತ್ತಿದ್ದ ಎಂದು ಓದಬೇಕಾದ್ದನ್ನು ಎಲೆ ಅಡಿಕೆ ಮೇಯುತ್ತಿದ್ದ ಎಂದರೆ ಆಭಾಸವೇ ತಾನೆ! ರಂಗ ನಾಯಕಿ > ಲಂಗನಾಯಕಿ, ಆಸ್ಥಾನದ ದಾಸಿ ಹಾಸನದ ಆಶ ಆಂದರೆ ರಕ್ಷಿಸ ಬೇಕು ಎನ್ನಲು ಹೋಗಿ ರಸ್ಕ್ ಬೇಕು ಎಂದರೆ ಎಲ್ಲಿಕೊಡಕ್ಕಾಗುತ್ತೆ?
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಏಳನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ