Advertisement

ಡಾ. ಎಲ್.ಜಿ. ಮೀರಾ

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಸಂಬಂಧ ಸೂಕ್ಷ್ಮಗಳ ಗಾಢ ಸ್ಪಂದನೆಯ ‘ನೀಲಿ ನಕ್ಷೆ’: ಸುನಂದಾ ಕಡಮೆ ಬರಹ

ದಿಕ್ಕನ್ನು ನೆನಪಿನಲ್ಲಿಟ್ಟುಕೊಳ್ಳುವಂತಿದ್ದ ಬೋರ್ಗರೆವ ನೀಲಿ ಕಡಲಿನ ಬಾಲ್ಯದ ಸಂಗಾತಿ ಸರಯೂ ನಂತರ ಹೋಗಿ ಸೇರಿದ ಮುಂಬೈ ನಗರದ ಮೂರೂ ಕಡೆಗಳಲ್ಲಿ ಸಮುದ್ರ ಕಂಡು ದಿಕ್ಕು ಗುರುತಿಸಲು ಬಾರದೇ ಗಲಿಬಿಲಿಗೊಂಡವಳು. ಮೊದಲನೇ ತರಗತಿಯಲ್ಲೇ ಮೂರನೇ ರ‍್ಯಾಂಕ್ ಬಂದಾಗ ಊರಿಗೆಲ್ಲ ಪೇಡೆ ಹಂಚಿ ಅಪ್ಪನಿಂದ ಹೊಡೆಸಿಕೊಂಡ ಅಮ್ಮನನ್ನು ಕಾಣುತ್ತ ಬೆಳೆದ ಸರಯೂ ಸದಾ ತನ್ನಪ್ಪ ತನ್ನನ್ನು ಕಡೆಗಣಿಸುತ್ತಿದ್ದಾನೆಯೇ ಎಂದು ವಾರಗಣ್ಣಲ್ಲೇ ಗಮನಿಸುತ್ತ ಬಂದವಳು.
ಅಮಿತಾ ಭಾಗವತ್‌ ಕಾದಂಬರಿ ‘ನೀಲಿ ನಕ್ಷೆ’ಯ ಕುರಿತು ಸುನಂದಾ ಕಡಮೆ ಬರಹ ನಿಮ್ಮ ಓದಿಗೆ

Read More

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More

ವಿಶಿಷ್ಟ ಅನುಭವಗಳ ಮೊತ್ತ ‘ಅಂಗೈ ಅಗಲದ ಆಕಾಶ’

ಇಂಥ ಸ್ಮೃತಿಚಿತ್ರಗಳಲ್ಲಿ ಸತ್ಯದ ಪರಿಧಿಯಿಂದ ಹೊರಹೋಗಲು ಸಾಧ್ಯವಿಲ್ಲ, ಅಂದರೆ ಶುದ್ಧ ನೆನಪುಗಳು ಯಾವಾಗಲೂ ವಾಸ್ತವದಲ್ಲಿ ಜೀವಿಸಿರುತ್ತವೆ ಹಾಗಾಗಿ ಬರೆಯುವಾಗ ನಿರೂಪಕಿಯೂ ವಾಸ್ತವದಲ್ಲೇ ಜೀವಿಸಿರಬೇಕಾಗುತ್ತದೆ, ಕಲ್ಪನೆ ಇಲ್ಲಿ ಕೆಲಸ ಮಾಡದು. ಆಗ ಎಲ್ಲ ಕೋನದಿಂದ ನಿಂತು ನೋಡುವ ಆಯಾಮಗಳು ಕಳೆದುಹೋಗುತ್ತವೆ. ಆದರೆ ಸುಮಿತ್ರಾ ಅವರು ಕೆಲವು ಘಟನೆಗಳನ್ನು ಇಂದಿನ ಸಂದರ್ಭದಲ್ಲಿಟ್ಟು ತೂಗಿ ನೋಡುತ್ತಾರೆ. ಹಾಗಾಗಿ ಸನ್ನಿವೇಶಗಳಿಗೊಂದು ಬೇರೆಯದೇ ಆದ ತೂಕ ಪ್ರಾಪ್ತವಾಗುತ್ತದೆ.
ಡಾ. ಎಲ್. ಸಿ. ಸುಮಿತ್ರಾ ಅವರ ಸ್ಮೃತಿ ಚಿತ್ರಗಳ ಸಂಕಲನ “ಅಂಗೈ ಅಗಲದ ಆಕಾಶ”ದ ಕುರಿತು ಲೇಖಕಿ ಸುನಂದಾ ಕಡಮೆ ಬರಹ

Read More

ನಿರೂಪಣೆಯ ಹೊಸತನವನ್ನು ಮೆರೆಯುವ ‘ಫೀ ಫೋ’

ಸಮಕಾಲೀನತೆಯ ಬಿಕ್ಕಟ್ಟುಗಳಿಗೆ ಯುವ ತಲೆಮಾರು ತಮ್ಮನ್ನು ತಾವು ಒಡ್ಡಿಕೊಳ್ಳುತ್ತ ಮುಂದೆ ಸಾಗಿರುವುದರಿಂದ ಹೊಸತಲೆಮಾರಿನ ಕತೆಗಾರರ ಜೀವನಾನುಭವದ ಸ್ವರೂಪ ಈಗ ಬೇರೆಯಾಗಿದೆ. ಅದಕ್ಕೆ ಇವರು ಇಲ್ಲಿ ಪುಸ್ತಕಕ್ಕೆ ಬಳಸಿದ ಶಿರೋನಾಮೆ ‘ಫೀಫೋ’ನೂ ಒಂದು ಸಣ್ಣ ಸಾಕ್ಷಿ. ಫೀಫೋ ಇದು ಕಂಪ್ಯೂಟರಿನ ಭಾಷೆ, ಫಸ್ಟ್ ಇನ್ ಫಸ್ಟ್ ಔಟ್. ನಮ್ಮ ನೆನಪುಗಳು ಮತ್ತು ಅನುಭವಗಳು ಸ್ಮೃತಿ ಪಟಲದಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತವೆ, ಮೊದಲು ನಿಂತದ್ದು ಮೊದಲು ಹೊರಬರಲೇ ಬೇಕು.
ಮಧುಸೂದನ್ ವೈ.ಎನ್.‌ ಬರೆದ ‘ಫಿಫೋ’ ಕಥಾಸಂಕಲನದ ಕುರಿತು ಸುನಂದಾ ಪ್ರಕಾಶ್ ಕಡಮೆ ಬರೆದ ಬರಹ ಇಲ್ಲಿದೆ

Read More
  • 1
  • 2

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ