Advertisement

ನಾರಾಯಣ ಯಾಜಿ

ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟಕ್ಕೆ ಸಾಕ್ಷಿ ‘ಬದುಕೆಂಬ ಮಾಯೆ’: ಸುನಂದಾ ಕಡಮೆ ಬರಹ

‘ಭೂಮಿಗೆ ಗಟ್ಟಿಯಾಗಿ ಬಂಧಿಸಿದ ಯಾವ ಅನುಬಂಧವೂ ನನಗೆ ಒದಗಿ ಬಂದಿಲ್ಲ ಹಾಗಾಗಿ ಕಳೆದುಕೊಳ್ಳುವ ಭಯ ನನಗಿರಲಿಲ್ಲ’ ಎಂಬಂತಹ ಮಾತುಗಳನ್ನು ಒಬ್ಬ ಹೆಣ್ಣು ಹೇಳಬೇಕಾದರೆ, ಈ ಸಮಾಜ ಮತ್ತು ಈ ವ್ಯವಸ್ಥೆಯ ಪಾಲು ಎಷ್ಟು ಎಂಬ ಪ್ರಶ್ನೆಯನ್ನೂ ಸಹ ನಮಗೆ ನಾವೇ ಕೇಳಿಕೊಳ್ಳುವಂತಿದೆ. ‘ಹೆಣ್ಣಾಗಿ ಹುಟ್ಟಿದ ನನ್ನನ್ನು ಒಂದು ವ್ಯಕ್ತಿತ್ವವಾಗಿಸಿದ್ದು ಈ ಬಂಡಾಯದ ವಿಚಾರಧಾರೆ’ ಎನ್ನುವ ಸುಕನ್ಯಾ ಅವರ ಗುಂಡಿಗೆಯನ್ನು ಇನ್ನಷ್ಟು ಗಟ್ಟಿ ಮಾಡಿದ್ದು ತಾನು ಕಲಿತ ವಿದ್ಯೆ ಎಂದೇ ಮತ್ತೆ ಮತ್ತೆ ಅವರು ಸ್ಮರಿಸಿಕೊಳ್ಳುತ್ತಾರೆ.
ಕನ್ನಡದ ಹಿರಿಯ ಕವಿ ಪ್ರೊ. ಸುಕನ್ಯಾ ಮಾರುತಿಯವರ ಆತ್ಮಕತೆ ‘ಬದುಕೆಂಬ ಮಾಯೆ’ ಕುರಿತು ಸುನಂದಾ ಕಡಮೆ ಬರಹ ನಿಮ್ಮ ಓದಿಗೆ

Read More

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಸಂಬಂಧ ಸೂಕ್ಷ್ಮಗಳ ಗಾಢ ಸ್ಪಂದನೆಯ ‘ನೀಲಿ ನಕ್ಷೆ’: ಸುನಂದಾ ಕಡಮೆ ಬರಹ

ದಿಕ್ಕನ್ನು ನೆನಪಿನಲ್ಲಿಟ್ಟುಕೊಳ್ಳುವಂತಿದ್ದ ಬೋರ್ಗರೆವ ನೀಲಿ ಕಡಲಿನ ಬಾಲ್ಯದ ಸಂಗಾತಿ ಸರಯೂ ನಂತರ ಹೋಗಿ ಸೇರಿದ ಮುಂಬೈ ನಗರದ ಮೂರೂ ಕಡೆಗಳಲ್ಲಿ ಸಮುದ್ರ ಕಂಡು ದಿಕ್ಕು ಗುರುತಿಸಲು ಬಾರದೇ ಗಲಿಬಿಲಿಗೊಂಡವಳು. ಮೊದಲನೇ ತರಗತಿಯಲ್ಲೇ ಮೂರನೇ ರ‍್ಯಾಂಕ್ ಬಂದಾಗ ಊರಿಗೆಲ್ಲ ಪೇಡೆ ಹಂಚಿ ಅಪ್ಪನಿಂದ ಹೊಡೆಸಿಕೊಂಡ ಅಮ್ಮನನ್ನು ಕಾಣುತ್ತ ಬೆಳೆದ ಸರಯೂ ಸದಾ ತನ್ನಪ್ಪ ತನ್ನನ್ನು ಕಡೆಗಣಿಸುತ್ತಿದ್ದಾನೆಯೇ ಎಂದು ವಾರಗಣ್ಣಲ್ಲೇ ಗಮನಿಸುತ್ತ ಬಂದವಳು.
ಅಮಿತಾ ಭಾಗವತ್‌ ಕಾದಂಬರಿ ‘ನೀಲಿ ನಕ್ಷೆ’ಯ ಕುರಿತು ಸುನಂದಾ ಕಡಮೆ ಬರಹ ನಿಮ್ಮ ಓದಿಗೆ

Read More

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More

ವಿಶಿಷ್ಟ ಅನುಭವಗಳ ಮೊತ್ತ ‘ಅಂಗೈ ಅಗಲದ ಆಕಾಶ’

ಇಂಥ ಸ್ಮೃತಿಚಿತ್ರಗಳಲ್ಲಿ ಸತ್ಯದ ಪರಿಧಿಯಿಂದ ಹೊರಹೋಗಲು ಸಾಧ್ಯವಿಲ್ಲ, ಅಂದರೆ ಶುದ್ಧ ನೆನಪುಗಳು ಯಾವಾಗಲೂ ವಾಸ್ತವದಲ್ಲಿ ಜೀವಿಸಿರುತ್ತವೆ ಹಾಗಾಗಿ ಬರೆಯುವಾಗ ನಿರೂಪಕಿಯೂ ವಾಸ್ತವದಲ್ಲೇ ಜೀವಿಸಿರಬೇಕಾಗುತ್ತದೆ, ಕಲ್ಪನೆ ಇಲ್ಲಿ ಕೆಲಸ ಮಾಡದು. ಆಗ ಎಲ್ಲ ಕೋನದಿಂದ ನಿಂತು ನೋಡುವ ಆಯಾಮಗಳು ಕಳೆದುಹೋಗುತ್ತವೆ. ಆದರೆ ಸುಮಿತ್ರಾ ಅವರು ಕೆಲವು ಘಟನೆಗಳನ್ನು ಇಂದಿನ ಸಂದರ್ಭದಲ್ಲಿಟ್ಟು ತೂಗಿ ನೋಡುತ್ತಾರೆ. ಹಾಗಾಗಿ ಸನ್ನಿವೇಶಗಳಿಗೊಂದು ಬೇರೆಯದೇ ಆದ ತೂಕ ಪ್ರಾಪ್ತವಾಗುತ್ತದೆ.
ಡಾ. ಎಲ್. ಸಿ. ಸುಮಿತ್ರಾ ಅವರ ಸ್ಮೃತಿ ಚಿತ್ರಗಳ ಸಂಕಲನ “ಅಂಗೈ ಅಗಲದ ಆಕಾಶ”ದ ಕುರಿತು ಲೇಖಕಿ ಸುನಂದಾ ಕಡಮೆ ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ