“ಹಳೆಯ ಪುಟಗಳಿಂದ…” ಸರಣಿಯಲ್ಲಿ ವೈದೇಹಿ ಬರಹ
ಏನು ಕಾರಣವೋ, ಮದುವೆಯಾಗಿಯೂ ಒಬ್ಬಂಟಿಯಿದ್ದರು. ಬರೆಯುತ್ತಿದ್ದಂತೆ, ಉಸಿರನ್ನು ನಡುನಡುವೆ ಸಶಬ್ದ ಒಳಗೆಳೆದುಕೊಂಡು ಸೇಂಕಿ ಮಾತಾಡುವ ಅವರ ಪರಿ ಅಚ್ಚ ನೆನಪಿನಿಂದ ಹೇಗೆ ಎದ್ದು ಬರುತ್ತಿದೆ! ಹೋಗಲಿ, ಹೊಲಿಗೆ ದುಡ್ಡು ಇಷ್ಟಾಯಿತು ಅಂತ ಹೇಳುವುದರಲ್ಲಾದರೂ ಸಂಕೋಚ ಬಿಡುವರೆ? ಇಲ್ಲ. ಹೇಳಿದ ಮೇಲೆ ಈಗ ಇಟ್ಟುಬಿಡಿ ಅಂತ ಅಂದವರೂ ಅಲ್ಲ. ಸ್ವಲ್ಪ ಕೊಟ್ಟು ಉಳಿದದ್ದು ಎರಡುದಿನ ಬಿಟ್ಟು ಕಳಿಸಿಕೊಡುತ್ತೇನೆ ಎಂದರೆ ‘ಆಯಿತಪ್ಪ, ಅಡ್ಡಿಲ್ಲ ಅಡ್ಡಿಲ್ಲ’. ಕೊಟ್ಟ ದುಡ್ಡನ್ನು ಎದುರೇ ಎಣಿಸಿದವರೂ ಅಲ್ಲ. ನನಗೆ ತಿಳಿದಂತೆ ದುಡ್ಡಿನ ಮಟ್ಟಿಗೆ ಅವರಿಗೆ ಮೋಸಮಾಡಿದ ಮನೆಗಳೂ ಇಲ್ಲ. ಬಿಡಿ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕನ್ನಡದ ಅನುಪಮ ಲೇಖಕಿ ವೈದೇಹಿ ಬರಹ
